Homeಮುಖಪುಟಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

ಇಂಡಿಯಾ ಟುಡೇಗೆ ಮೋದಿ ಸಂದರ್ಶನ: ರವೀಶ್ ಕುಮಾರ್‍ರವರಿಗೆ ಯಾಕಿಲ್ಲ?

- Advertisement -
- Advertisement -

| ಪಿ.ಕೆ. ಮಲ್ಲನಗೌಡರ್ |

ಈಗ ಮೂರು ಹಂತದ ಚುನಾವಣೆ ಮುಗಿದಿದೆ. ಸದ್ಯ ಇಂಟರವಲ್ ಎನ್ನುವುದಾದರೆ, ಫಸ್ಟ್ ಹಾಫ್‍ನಲ್ಲಿ ದೇಶದ ಸಮಸ್ಯೆಗಳ ಕುರಿತು ಚಕಾರ ಎತ್ತದ, ತಾವು ಕೊಟ್ಟ ಭರವಸೆ ಕುರಿತು ಮಾತೇ ಆಡದ ಪ್ರಧಾನಿ ನರೇಂದ್ರ ಮೋದಿ ಬಾಲಾಕೋಟ್ ದಾಳಿ, ಪಾಕ್ ದ್ವೇಷ, ರಾಷ್ಟ್ರದ ಸುರಕ್ಷತೆ ಎಂದೆಲ್ಲ ಭಾಷಣ ಬಿಗಿದರಷ್ಟೆ. ಸೆಕೆಂಡ್ ಹಾಫ್‍ನಲ್ಲಿ ಹಿಂದೆಲ್ಲ ಅಡಿಯಾಳಿಗಿದ್ದ ಮಾಧ್ಯಮಗಳನ್ನೆಲ್ಲಾ ಸಾರಾಸಗಟಾಗಿ ಖರೀದಿಸಿದಂತೆ ಕಾಣುತ್ತಿದೆ.

ಮೂರು ಹಂತದ ಚುನಾವಣೆ ಮುಗಿದ ನಂತರ ಭಯ ಬಿದ್ದಂತಿರುವ ಬಿಜೆಪಿಯವರು ಬೇರೆ ಹಾದಿ ಹಿಡಿದಿದ್ದಾರೆ. ಅಲ್ಲಿ ಭಾವನಾತ್ಮಕ ಸಂಗತಿಗಳನ್ನು ಮುನ್ನೆಲೆಗೆ ತರಲು ಒದ್ದಾಡಿದ್ದಾರೆ. ಅಕ್ಷಯಕುಮಾರ್ ಸಂದರ್ಶನ ಅದರ ಭಾಗ. ಅದು ಯಾವಾಗ ಲೇವಡಿಗೆ ಒಳಗಾಯಿತೋ, ಆಗ ಅವರು ಕಾಶಿ ವಿಶ್ವನಾಥನ ಹೆಸರಲ್ಲಿ ಧಾರ್ಮಿಕವಾಗಿ ಹಿಂದೂಗಳ ಒಲವು ಪಡೆಯಲು ಎರಡು ದಿನ ‘ಹರ’ಸಾಹಸ ಮಾಡಿದ್ದಾರೆ!
ಇದೇ ವೇಳೆ, ತಾವು ಈವರೆಗೂ ಪತ್ರಿಕಾಗೋಷ್ಠಿ ನಡೆಸಿಲ್ಲ ಎಂಬ ಅಪವಾದವನ್ನು ತೊಡೆದು ಹಾಕಲು ಇಂಡಿಯಾ ಟುಡೇಯೊಂದಿಗೆ ಗಂಗಾ ನದಿಯ ತಟದಲ್ಲಿ ಒಂದೂವರೆ ತಾಸುಗಳ ಸಂದರ್ಶನ ನೀಡಿದ್ದಾರೆ. ಪ್ರಧಾನಿಯ ನಾಮಿನೇಶನ್ ನಂತರ ಅದನ್ನು ಪ್ರಮೋಟ್ ಮಾಡುತ್ತಲೇ ಇರುವ ಇಂಡಿಯಾ ಟುದೇ ಚಾನೆಲ್,‘unforgettable interview for Modi’ ಎಂದೆಲ್ಲ ಪೋಸು ಕೊಡುತ್ತಿದೆ. ಇವತ್ತು ಸಂಜೆ 7ಕ್ಕೆ ಆ ಸಂದರ್ಶನ ಪ್ರಸಾರವಾಗಲಿದ್ದು, ಅದರ ತುಣುಕುಗಳನ್ನು ಈಗ ಪ್ರದರ್ಶಿಸಲಾಗಿತ್ತಿದೆ.

‘ಇಂಡಿಯಾ ಟುಡೇ’ದ ಸಂಪಾದಕನೇ ಆಗಿರುವ ರಾಹುಲ ಕನ್ವಾಲ್ ತನ್ನ ಸಹಚರರೊಂದಿಗೆ ಈ ಸಂದರ್ಶನ ಮಾಡಿದ್ದು, ‘ಮೋದಿ ಪ್ರಶ್ನೆಗೆ ಉತ್ತರಿಸಲ್ಲ, ಪ್ರೆಸ್ ಅನ್ನು ಅವಾಯ್ಡ್ ಮಾಡ್ತಾರೆ ಎಂಬುದೆಲ್ಲ ಸುಳ್ಳು, ಅವರು ನಮ್ಮ ಪ್ರಶ್ನೆ ಮತ್ತು ಕೌಂಟರ್ ಪ್ರಶ್ನೆಗೆಲ್ಲ ಉತ್ತರಿಸಿದರು’ ಎಂದೆಲ್ಲ ಹೇಳುತ್ತಾರೆ. ನ್ಯೂಸ್ ಆ್ಯಂಕರ್ ಅಂಜನಾ ಕಶ್ಯಪ್ ಸ್ಟುಡಿಯೋದಲ್ಲಿ ಪ್ರಸಾರವಾಗಲಿರುವ ಈ ಸಂದರ್ಶನದ ಬಗ್ಗೆ ಬಿಲ್ಡ್‍ಅಪ್ ಕೊಡುತ್ತಲೇ, ಗಂಗಾ ತಟದಲ್ಲಿರುವ ರಾಹುಲ್ ಕನ್ವಲ್‍ರನ್ನು ಮಾತಾಡಸಿ, ಮೋದಿ ಮನಬಿಚ್ಚಿ ಮಾತಾಡಿದರೇ ಎಂದು ನಾಟಕೀಯ ಶೈಲಿಯಲ್ಲಿ ಪ್ರಶ್ನೆ ಮಾಡುತ್ತಾರೆ! ಅದಕ್ಕೆ ಗಂಗಾ ತಟದಿಂದ ಉತ್ತರಿಸುವ ರಾಹುಲ್ ಕನ್ವಲ್, ಮೋದಿ ಬಗ್ಗೆ ತಪ್ಪು ಅಭಿಪ್ರಾಯ ಇವೆಯಲ್ಲ, ಈ ಸಂದರ್ಶನದಿಂದ ಅವೆಲ್ಲ ದೂರವಾಗಲಿವೆ, ಮೋದಿ ಪ್ರಬುದ್ಧ ನಾಯಕ ಎಂಬಂತೆ ಹೊಗಳತೊಡಗುತ್ತಾರೆ!

7ಕ್ಕೆ ಸಂದರ್ಶನ ನೋಡೋಣ!

ಅರ್ನಾಬ್ ಕೂಗಾಡಿದ್ದು ಆಯ್ತು ಕೆಲಸ ಆಗಲಿಲ್ಲ… ಅಕ್ಷಯ್ ಬಂದ, ವರ್ಕ್‍ಔಟ್ ಆಗಲಿಲ್ಲ… ಈಗ ಇದ್ದುದರಲ್ಲಿ ವಿಶ್ವಾಸಾರ್ಹತೆ ಉಳಿಸಿಕೊಂಡಿದ್ದ ‘ಇಂಡಿಯಾ ಟುಡೆ’ ಯನ್ನು ಕೂಡ ಬಲೆಗೆ ಹಾಕಲಾಗಿದೆ! ಈ ಸಂದರ್ಶನವನ್ನೂ ಎಲ್ಲ ಭಾಷೆಗಳ ಪೇಯ್ಡ್ ಚಾನೆಲ್‍ಗಳೂ ಅನುವಾದಿಸಿ (ಸಬ್ ಟೈಟಲ್ ಹಾಕಿ) ಪ್ರಸಾರ ಮಾಡುವುದಂತೂ ಗ್ಯಾರಂಟಿ! ಈಗಾಗಲೇ ಅವಕ್ಕೆ ಸಂದರ್ಶನದ ಸ್ಕ್ರಿಪ್ಟ್ ಸಿಕ್ಕಿರಬಹುದು ಅಲ್ಲವೇ?

ಮೋದಿಯವರು ಅಕ್ಷಯ್ ಕುಮಾರ್‍ಗೆ ಸಂದರ್ಶನ ಕೊಟ್ಟ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ರವೀಶ್‍ಕುಮಾರ್‍ಗೂ ಸಂದರ್ಶನ ಕೊಡುತ್ತೀರಾ ಎಂಬ ಪ್ರಶ್ನೆ ವೈರಲ್ ಆಗಿದೆ. ಚೇಂಜ್.ಆರ್ಗ್‍ನಲ್ಲಿ ಸಾವಿರಾರು ಜನ ಪಿಟಿಷನ್‍ಗೆ ಸಹಿ ಮಾಡಿ ಮೋದಿಗೆ ಒತ್ತಡ ಹೇರುತ್ತಿದ್ದಾರೆ. ಆದರೆ ಅದಕ್ಕೆ ಪ್ರತಿಕ್ರಿಯಿಸದ ಮೋದಿ ಇಂಡಿಯಾ ಟುಡೇಗೆ ಸಂದರ್ಶನ ನೀಡಿ ಪಲಾಯನ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ಈಗಷ್ಟೇ ಸೆಕೆಂಡ್ ಹಾಫ್ ಶುರು. ಈ ಭಾಗದ ನಾಟಕದಲ್ಲಿ ಮಾಧ್ಯಮಗಳೇ ದೊಡ್ಡ ಪೇಯ್ಡ್ ಅಭಿನಯಕಾರರು ಎಂಬುದು ನಾಚಿಕೆಗೇಡಿನ ವಿಷಯ! ಆದರೂ ಪೂರ್ತಿ ಸಂದರ್ಶನ ಪ್ರಸಾರವಾಗುವವರೆಗೂ ಕಾಯೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...