Homeಮುಖಪುಟಇಂಟರ್ನೆಟ್‌ಗೆ ನಿರ್ಬಂಧ ವಿಧಿಸುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

ಇಂಟರ್ನೆಟ್‌ಗೆ ನಿರ್ಬಂಧ ವಿಧಿಸುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

- Advertisement -
- Advertisement -

ವಿಶ್ವದಲ್ಲೇ ಭಾರತ ಅತಿ ಹೆಚ್ಚು ಬಾರಿ ಇಂಟರ್ನೆಟ್‌ ಸ್ಥಗಿತಗೊಳಿಸುತ್ತಿರುವ ದೇಶಗಳ ಪಟ್ಟಿಯಲ್ಲಿ ಮುಂದಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಕಡಿವಾಣ ಮತ್ತು ಜನರ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುವ ಕ್ರಮವಾಗಿದೆ ಎಂದು ವ್ಯಾಪಕವಾದ ಟೀಕೆಗೆ ಕಾರಣವಾಗಿದೆ.

ಅನೇಕ ದೇಶಗಳಲ್ಲಿ, ವಾಸ್ತವಿಕ ಅಥವಾ ಸಾಂಭಾವ್ಯ ಅಶಾಂತಿಯನ್ನು ತಡೆಯಲು ಇಂಟರ್ನೆಟ್‌ ಸ್ಥಗಿತದ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮ ನೆಟ್‌ವರ್ಕ್‌ಗಳ ಮೇಲೆ ನಿರ್ಬಂಧವನ್ನು ವಿಧಿಸಲು ಇಂಟರ್ನೆಟ್ ಸ್ಥಗಿತಗೊಳಿಸುತ್ತದೆ.

ಈಜಿಪ್ಟ್‌ನ 2011ರ ಕ್ರಾಂತಿ ಮತ್ತು 2016ರ ಟರ್ಕಿಶ್ ಮಿಲಿಟರಿ ದಂಗೆಯು ಇಂಟರ್‌ನೆಟ್‌ ಸ್ಥಗಿತಗೊಳಿಸಿರುವುದಕ್ಕೆ ಪ್ರಮುಖ ನಿದರ್ಶನವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಬಾರಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ವೇಳೆ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಮಣಿಪುರದಲ್ಲಿನ ಜನಾಂಗೀಯ ಹಿಂಸಚಾರದ ವೇಳೆ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಇದಲ್ಲದೆ ನೂಹ್‌ ಹಿಂಸಾಚಾರ, ಮಂಗಳೂರು ಗೋಲಿಬಾರ್‌, ರೈತರ ಪ್ರತಿಭಟನೆ, ಸಿಎಎ ಸೇರಿ ಹಲವು ಪ್ರತಿಭಟನೆ ವೇಳೆ ಭಾರತದಲ್ಲಿ ಇಂಟರ್ನೆಟ್‌ ಸ್ಥಗಿತಗೊಳಿಸಲಾಗಿದೆ.

Top10VPN ಪ್ರಕಾರ, 2023ರ ಎಲ್ಲಾ ಭಾರತೀಯ ಇಂಟರ್ನೆಟ್ ನಿರ್ಬಂಧಗಳು ಮತ್ತು ಸ್ಥಗಿತಗೊಳಿಸುವಿಕೆಗಳು ಸುಮಾರು 59 ಮಿಲಿಯನ್ ಜನರನ್ನು ಒಟ್ಟು ಸುಮಾರು 8,000 ಗಂಟೆಗಳ ಕಾಲ ಬಾಧಿಸಿದೆ. ಇದು ವಿಶ್ವದಲ್ಲೇ ಅತಿ ಹೆಚ್ಚುಗಂಟೆಗಳ ಕಾಲ ಇಂಟರ್ನೆಟ್‌ ಸ್ಥಗಿತಗೊಳಿಸಿರುವುದಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಇನ್ನು ಇಥಿಯೋಪಿಯಾ, ಮ್ಯಾನ್ಮಾರ್ ಮತ್ತು ಇರಾನ್‌ಗಳಲ್ಲಿ, ಭಿನ್ನಾಭಿಪ್ರಾಯ, ಪ್ರತಿಭಟನೆ ವೇಳೆ ಇಂಟರ್‌ನೆಟ್‌ನ್ನು ಸ್ಥಗಿತಗೊಳಿಸಲಾಗಿದೆ. ಈ ಕ್ರಮಗಳು ಕೂಡ ದೀರ್ಘಾವದಿಯದ್ದಾಗಿದೆ ವರದಿಯು ಉಲ್ಲೇಖಿಸಿದೆ. ಪ್ರಪಂಚದಾದ್ಯಂತ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು ಮತ್ತು ಇಂಟರ್ನೆಟ್‌ ನಿಧಾನಗತಿಯು ಹೆಚ್ಚು ಸಾಮಾನ್ಯವಾಗಿದೆ. ಜನರ ದೈನಂದಿನ ಜೀವನದಲ್ಲಿ ಇಂಟರ್ನೆಟ್ ಆಳವಾದ ಮಹತ್ವವನ್ನು ಪಡೆದುಕೊಂಡಿದೆ. ಅದು ಎಷ್ಟರವೆರೆಗೆ ಎಂದರೆ ಇಂಟರ್‌ನೆಟ್‌ ಸ್ಥಗಿತಗೊಳಿಸುವಿಕೆಯು ಹಣಕಾಸಿನ ಪರಿಣಾಮಗಳನ್ನು ಕೂಡ ಉಂಟು ಮಾಡುತ್ತಿದೆ.

Top10VPN ಪ್ರಕಾರ, ರಷ್ಯಾ, ಇಥಿಯೋಪಿಯಾ ಮತ್ತು ಮ್ಯಾನ್ಮಾರ್‌ನಲ್ಲಿ, ಇಂಟರ್‌ನೆಟ್‌ ಸ್ಥಗಿತಗಳು ಮತ್ತು ಅವುಗಳ ಪ್ರಭಾವ ತುಂಬಾ ದುಬಾರಿಯಾಗುತ್ತಿದೆ. 2023ರಲ್ಲಿ ಸುಮಾರು 1,350 ಗಂಟೆಗಳ ಉದ್ದೇಶಪೂರ್ವಕ ಇಂಟರ್ನೆಟ್ ಸ್ಥಗಿತಗೊಳಿಸಿರುವಿಕೆಯ ಪ್ರಕ್ರಿಯೆಯು ರಷ್ಯಾದ ಆರ್ಥಿಕತೆ ಮೇಲೆ ಆಳವಾದ ಪ್ರಭಾವವನ್ನು ಬೀರಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...