Homeಮುಖಪುಟಇಂಟರ್ನೆಟ್‌ಗೆ ನಿರ್ಬಂಧ ವಿಧಿಸುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

ಇಂಟರ್ನೆಟ್‌ಗೆ ನಿರ್ಬಂಧ ವಿಧಿಸುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

- Advertisement -
- Advertisement -

ವಿಶ್ವದಲ್ಲೇ ಭಾರತ ಅತಿ ಹೆಚ್ಚು ಬಾರಿ ಇಂಟರ್ನೆಟ್‌ ಸ್ಥಗಿತಗೊಳಿಸುತ್ತಿರುವ ದೇಶಗಳ ಪಟ್ಟಿಯಲ್ಲಿ ಮುಂದಿದ್ದು, ಇದು ಅಭಿವ್ಯಕ್ತಿ ಸ್ವಾತಂತ್ರ್ಯದ ಕಡಿವಾಣ ಮತ್ತು ಜನರ ದೈನಂದಿನ ಜೀವನದ ಮೇಲೆ ಪ್ರಭಾವ ಬೀರುವ ಕ್ರಮವಾಗಿದೆ ಎಂದು ವ್ಯಾಪಕವಾದ ಟೀಕೆಗೆ ಕಾರಣವಾಗಿದೆ.

ಅನೇಕ ದೇಶಗಳಲ್ಲಿ, ವಾಸ್ತವಿಕ ಅಥವಾ ಸಾಂಭಾವ್ಯ ಅಶಾಂತಿಯನ್ನು ತಡೆಯಲು ಇಂಟರ್ನೆಟ್‌ ಸ್ಥಗಿತದ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ. ಸಾಮಾನ್ಯವಾಗಿ ಸರ್ಕಾರ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮ ನೆಟ್‌ವರ್ಕ್‌ಗಳ ಮೇಲೆ ನಿರ್ಬಂಧವನ್ನು ವಿಧಿಸಲು ಇಂಟರ್ನೆಟ್ ಸ್ಥಗಿತಗೊಳಿಸುತ್ತದೆ.

ಈಜಿಪ್ಟ್‌ನ 2011ರ ಕ್ರಾಂತಿ ಮತ್ತು 2016ರ ಟರ್ಕಿಶ್ ಮಿಲಿಟರಿ ದಂಗೆಯು ಇಂಟರ್‌ನೆಟ್‌ ಸ್ಥಗಿತಗೊಳಿಸಿರುವುದಕ್ಕೆ ಪ್ರಮುಖ ನಿದರ್ಶನವಾಗಿದೆ. ಭಾರತದಲ್ಲಿ ಅತಿ ಹೆಚ್ಚು ಬಾರಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ. ಈ ಹಿಂದೆ ಕಾಶ್ಮೀರದಲ್ಲಿ 370ನೇ ವಿಧಿ ರದ್ದತಿ ವೇಳೆ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಮಣಿಪುರದಲ್ಲಿನ ಜನಾಂಗೀಯ ಹಿಂಸಚಾರದ ವೇಳೆ ಇಂಟರ್‌ನೆಟ್‌ ಸ್ಥಗಿತಗೊಳಿಸಲಾಗಿತ್ತು. ಇದಲ್ಲದೆ ನೂಹ್‌ ಹಿಂಸಾಚಾರ, ಮಂಗಳೂರು ಗೋಲಿಬಾರ್‌, ರೈತರ ಪ್ರತಿಭಟನೆ, ಸಿಎಎ ಸೇರಿ ಹಲವು ಪ್ರತಿಭಟನೆ ವೇಳೆ ಭಾರತದಲ್ಲಿ ಇಂಟರ್ನೆಟ್‌ ಸ್ಥಗಿತಗೊಳಿಸಲಾಗಿದೆ.

Top10VPN ಪ್ರಕಾರ, 2023ರ ಎಲ್ಲಾ ಭಾರತೀಯ ಇಂಟರ್ನೆಟ್ ನಿರ್ಬಂಧಗಳು ಮತ್ತು ಸ್ಥಗಿತಗೊಳಿಸುವಿಕೆಗಳು ಸುಮಾರು 59 ಮಿಲಿಯನ್ ಜನರನ್ನು ಒಟ್ಟು ಸುಮಾರು 8,000 ಗಂಟೆಗಳ ಕಾಲ ಬಾಧಿಸಿದೆ. ಇದು ವಿಶ್ವದಲ್ಲೇ ಅತಿ ಹೆಚ್ಚುಗಂಟೆಗಳ ಕಾಲ ಇಂಟರ್ನೆಟ್‌ ಸ್ಥಗಿತಗೊಳಿಸಿರುವುದಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಇನ್ನು ಇಥಿಯೋಪಿಯಾ, ಮ್ಯಾನ್ಮಾರ್ ಮತ್ತು ಇರಾನ್‌ಗಳಲ್ಲಿ, ಭಿನ್ನಾಭಿಪ್ರಾಯ, ಪ್ರತಿಭಟನೆ ವೇಳೆ ಇಂಟರ್‌ನೆಟ್‌ನ್ನು ಸ್ಥಗಿತಗೊಳಿಸಲಾಗಿದೆ. ಈ ಕ್ರಮಗಳು ಕೂಡ ದೀರ್ಘಾವದಿಯದ್ದಾಗಿದೆ ವರದಿಯು ಉಲ್ಲೇಖಿಸಿದೆ. ಪ್ರಪಂಚದಾದ್ಯಂತ, ಇಂಟರ್ನೆಟ್ ಸ್ಥಗಿತಗೊಳಿಸುವಿಕೆಗಳು ಮತ್ತು ಇಂಟರ್ನೆಟ್‌ ನಿಧಾನಗತಿಯು ಹೆಚ್ಚು ಸಾಮಾನ್ಯವಾಗಿದೆ. ಜನರ ದೈನಂದಿನ ಜೀವನದಲ್ಲಿ ಇಂಟರ್ನೆಟ್ ಆಳವಾದ ಮಹತ್ವವನ್ನು ಪಡೆದುಕೊಂಡಿದೆ. ಅದು ಎಷ್ಟರವೆರೆಗೆ ಎಂದರೆ ಇಂಟರ್‌ನೆಟ್‌ ಸ್ಥಗಿತಗೊಳಿಸುವಿಕೆಯು ಹಣಕಾಸಿನ ಪರಿಣಾಮಗಳನ್ನು ಕೂಡ ಉಂಟು ಮಾಡುತ್ತಿದೆ.

Top10VPN ಪ್ರಕಾರ, ರಷ್ಯಾ, ಇಥಿಯೋಪಿಯಾ ಮತ್ತು ಮ್ಯಾನ್ಮಾರ್‌ನಲ್ಲಿ, ಇಂಟರ್‌ನೆಟ್‌ ಸ್ಥಗಿತಗಳು ಮತ್ತು ಅವುಗಳ ಪ್ರಭಾವ ತುಂಬಾ ದುಬಾರಿಯಾಗುತ್ತಿದೆ. 2023ರಲ್ಲಿ ಸುಮಾರು 1,350 ಗಂಟೆಗಳ ಉದ್ದೇಶಪೂರ್ವಕ ಇಂಟರ್ನೆಟ್ ಸ್ಥಗಿತಗೊಳಿಸಿರುವಿಕೆಯ ಪ್ರಕ್ರಿಯೆಯು ರಷ್ಯಾದ ಆರ್ಥಿಕತೆ ಮೇಲೆ ಆಳವಾದ ಪ್ರಭಾವವನ್ನು ಬೀರಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಗೋಹತ್ಯೆ ವದಂತಿಯಿಂದ ಮುಸ್ಲಿಂ ವ್ಯಾಪಾರಿಯ ಗುಂಪು ಹತ್ಯೆ: ಪೊಲೀಸರು ಕೂಡ ತಪ್ಪಿತಸ್ಥರೆಂದು ಕೋರ್ಟ್‌ ಹೇಳಿದ್ದೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...