Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...