Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...