Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...