Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....