Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...