Homeಮುಖಪುಟರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್...

ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

- Advertisement -
- Advertisement -

ಉತ್ತರ‌ ಪ್ರದೇಶದಲ್ಲಿ‌ ಫೆಬ್ರವರಿ 10 ರಿಂದ ವಿಧಾನಸಭಾ ಚುನಾವಣೆಗಳು ಆರಂಭವಾಗಲಿವೆ. ರಾಜಕೀಯ ಪಕ್ಷಗಳು ಭರದಿಂದ ಪ್ರಚಾರ ನಡೆಸುತ್ತಿವೆ. ಆದರೆ ಅದೇ ಸಮಯದಲ್ಲಿ ಕೆಲ ಮಾಧ್ಯಮಗಳು ಅನಪೇಕ್ಷಿತ ಪ್ರಚಾರದಲ್ಲಿ ತೊಡಗಿವೆ ಎಂಬ ಆರೋಪ ಕೇಳಿಬಂದಿವೆ. ರೈತರ ಕುರಿತು ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ ವಿರುದ್ದ ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ವೇದಿಕೆ ಮೇಲೆಯೇ ನಿರೂಪಕನನ್ನು ತರಾಟೆಗೆ ತೆಗೆದುಕೊಂಡಿರುವುದು ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ.

ರೈತರ ಸಮಸ್ಯೆಗಳು ಮತ್ತು ಉತ್ತರ ಪ್ರದೇಶ ಚುನಾವಣೆಯಲ್ಲಿ ರೈತರ ಆಯ್ಕೆ ಯಾರಾಗಿರುತ್ತೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿರುವಾಗ ಚರ್ಚೆಗೆ ಸಂಬಂಧವೇ ಇರದ ರಾಮಮಂದಿರ ಮತ್ತು ಮಸೀದಿಯ ಚಿತ್ರ ವೇದಿಕೆ ಹಿಂಭಾಗದಲ್ಲಿ ಪ್ರದರ್ಶಿಸಿದಾಗ ಇಂಡಿಯಾ ಟಿ.ವಿ ಹಾಗೂ ಅದರ ನಿರೂಪಕನ ವಿರುದ್ಧ ರೈತ ನಾಯಕ ರಾಕೇಶ್ ಟಿಕಾಯತ್ ಕಿಡಿ ಕಾರಿದ್ದಾರೆ.

ಉತ್ತರ ಪ್ರದೇಶ ಚುನಾವಣೆ ಹಿನ್ನೆಲೆ ರೈತರ ಮುಖ್ಯಮಂತ್ರಿ‌ ಯಾರು ಎಂಬ ಚರ್ಚಾ ಕಾರ್ಯಕ್ರಮವನ್ನು ರಾಷ್ಟ್ರೀಯ ಸುದ್ದಿ ವಾಹಿನಿ ಇಂಡಿಯಾ ಟಿ.ವಿ ಆಯೋಜಿಸಿತ್ತು. ಈ ವೇದಿಕೆಯಲ್ಲಿ ರೈತರ ಅಭಿಪ್ರಾಯ ಕಲೆ ಹಾಕುವ ಸಲುವಾಗಿ ರೈತ ಹೋರಾಟವನ್ನು ಮುನ್ನಡೆಸಿದವರಲ್ಲಿ ಒಬ್ಬರಾದ ರಾಕೇಶ್ ಟಿಕಾಯತ್ ಅವರನ್ನು ಕೂಡ ಆಹ್ವಾನಿಸಲಾಗಿತ್ತು.

ಕಾರ್ಯಕ್ರಮದ ಅತಿಥಿಯಾಗಿದ್ದ ರಾಕೇಶ್ ಟಿಕಾಯತ್ ಜೊತೆಗೆ ನಿರೂಪಕ ಚರ್ಚೆ ನಡೆಸುತ್ತಿರುವಾಗ ವೇದಿಕೆ ಹಿಂಭಾಗದ ಪರದೆಯ ಮೇಲೆ ಹಿಂದಿಯಲ್ಲಿ ಕಿಸಾನ್ ಕಾ ಮುಖ್ಯಮಂತ್ರಿ ಕೌನ್ (ರೈತರ ಮುಖ್ಯಮಂತ್ರಿ ಯಾರು) ಎಂಬ ಪ್ರಶ್ನಾರ್ಥಕ ಶೀರ್ಷಿಕೆ ಪ್ರದರ್ಶಿಸಿ ಅದರ ಕೆಳಗಡೆ ಅಯೋಧ್ಯೆಯ ರಾಮ ಮಂದಿರ v/s ಮಸೀದಿ ಚಿತ್ರವನ್ನು ಪ್ರದರ್ಶಿಸಲಾಗಿದೆ. ಇದನ್ನು ಕಂಡು ವಾಹಿನಿ ವಿರುದ್ಧ ಗರಂ ಆದ ರಾಕೇಶ್ ಟಿಕಾಯತ್, ಬಿಜೆಪಿಯ ವಿಭಜಕ ತಂತ್ರಗಳನ್ನು ನೀವು ಯಾಕೆ ಪ್ರಮೋಟ್‌ ಮಾಡುತ್ತಿದ್ದೀರಿ ಎಂದು ವೇದಿಕೆಯಲ್ಲೇ ನಿರೂಪಕನನ್ನು ಪ್ರಶ್ನಿಸಿದ್ದಾರೆ.

ಇದನ್ನು (ರಾಮ ಮಂದಿರದ ಫೋಟೋ) ತೋರಿಸಲು ನಿಮಗೆ ಯಾರ ಒತ್ತಡವಿದೆ? ಯಾರ ಪರ ಪ್ರಚಾರ ಮಾಡುತ್ತಿದ್ದೀರಿ? ನೀವು ಯಾರ ಆದೇಶವನ್ನು ಅನುಸರಿಸುತ್ತಿದ್ದೀರಿ?” ಎಂದು ಟಿಕಾಯತ್‌ ಪ್ರಶ್ನಿಸಿದ್ದಾರೆ.

ಈ ವೇಳೆ ವಾಹಿನಿಯ ನಿರೂಪಕ ಸೌರಭ್ ಶರ್ಮಾ ಅವರು ಟಿಕಾಯತ್‌ ಪ್ರಶ್ನೆಗೆ ಸಮರ್ಥನೆ ನೀಡಲು ಪ್ರಯತ್ನಿಸಿದಾಗ, ಖಾರವಾಗಿಯೇ ಪ್ರತಿಕ್ರಿಯಿಸಿರು ಟಿಕಾಯತ್, “ರೈತರ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ ನೀವು ಮಂದಿರ ಮತ್ತು ಮಸೀದಿಯನ್ನು ತೋರಿಸುತ್ತೀರಾ? ನೀವು ಇದನ್ನು ತೋರಿಸಲು ಸಾಧ್ಯವಿಲ್ಲ. ನೀವು ಟಿವಿ ಚಾನೆಲ್‌ಗಳು ರಾಜಕೀಯ ಪಕ್ಷಕ್ಕಾಗಿ ಪ್ರಚಾರ ಮಾಡಬಾರದು ಎಂದು ಕಿವಿ ಮಾತು ಹೇಳಿದ್ದಾರೆ.

ಅದಕ್ಕೆ ಸ್ಪಷ್ಟನೆ ನೀಡಿರುವ ನಿರೂಪಕ ಮಂದಿರ v/s ಮಸೀದಿ ರಾಜಕೀಯವನ್ನು ಮಾಡಿರುವುದು ನಾವಲ್ಲ, ಬದಲಿಗೆ ರಾಜಕೀಯ ಪಕ್ಷಗಳು, ನೀವು ಅವರನ್ನು ಕೇಳಿ ಎಂದು ಹೇಳಿದಾಗ ರಾಕೇಶ್ ಟಿಕಾಯತ್ ಸುಮ್ಮನಾಗಿರುವುದನ್ನು ವೈರಲ್ ವಿಡಿಯೋದಲ್ಲಿ ನೋಡಬಹುದು.

ಸದ್ಯ ಇಂಡಿಯಾ ಟಿ.ವಿ ಸಂವಾದದ ಈ ವಿಡಿಯೋ ಸಾಮಾಜಿಕ ಜಾತಾಣದಲ್ಲಿ ಭಾರೀ ವೈರಲ್ ಆಗಿದ್ದು, ರೈತರ ಚರ್ಚೆಗೆ ಸೀಮಿತವಾಗಿದ್ದ ವೇದಿಕೆಯನ್ನು ಬಿಜೆಪಿ ಪರ ಪ್ರಚಾರಕ್ಕೆ ಬಳಸಿದ್ದಕ್ಕಾಗಿ ಇಂಡಿಯಾ ಟಿ.ವಿ ಹಾಗೂ ನಿರೂಪಕ ಸೌರಬ್ ಶರ್ಮಾ ವಿರುದ್ಧ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ; ಫ್ಯಾಕ್ಚ್ ಚೆಕ್: ನೀಟ್ ಟಾಪರ್‌ಗೆ ಸೀಟ್ ಸಿಗಲಿಲ್ಲವೆಂಬ ಸುಳ್ಳು ವರದಿ – ವಿಶ್ವೇಶ್ವರ ಭಟ್ ಕ್ಷಮೆ ಕೇಳಿದ್ದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...