Homeಅಂತರಾಷ್ಟ್ರೀಯಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

- Advertisement -
- Advertisement -

ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ.

ಕಿರ್ಗಿಸ್ತಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು “ಪರಿಸ್ಥಿತಿ ಪ್ರಸ್ತುತ ಶಾಂತವಾಗಿದೆ” ಎಂದು ಹೇಳಿದೆ, ಆದರೆ ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿದ್ಯಾರ್ಥಿಗಳು ವಾಸಿಸುವ ಬಿಷ್ಕೆಕ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯಗಳ ಹಾಸ್ಟೆಲ್‌ಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತು ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗುತ್ತದೆ. ಅಗತ್ಯಬಿದ್ದರೆ 24×7 ಸಂಪರ್ಕ ಸಂಖ್ಯೆ 0555710041ಕ್ಕೆ ಕರೆ ಮಾಡುವಂತೆ ಸೂಚಿಸಲಾಗಿದೆ.

ಪ್ರಸ್ತುತ ಮಧ್ಯ ಏಷ್ಯಾ ರಾಷ್ಟ್ರ ಕಿರ್ಗಿಸ್ತಾನ್‌ನಲ್ಲಿ ಸುಮಾರು 14,500 ಭಾರತೀಯ ಮತ್ತು ಸುಮಾರು 10,000 ಪಾಕಿಸ್ತಾನಿ ವಿದ್ಯಾರ್ಥಿಗಳಿದ್ದಾರೆ.

ಏನಿದು ಹಿಂಸಾಚಾರ?

ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ಮೇ 13ರಂದು ಕಿರ್ಗಿಜ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಸ್ಥಳೀಯ ಮತ್ತು ವಿದೇಶಿಗರ ನಡುವಿನ ಜಗಳದಿಂದ ಹಿಂಸಾಚಾರ ನಡೆದಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಮಧ್ಯೆ ಕಿರ್ಗಿಸ್ತಾನ್‌ನ ಆಂತರಿಕ ವ್ಯವಹಾರಗಳ ಸಚಿವಾಲಯವು ವಲಸೆ ಕಾನೂನುಗಳನ್ನು ಉಲ್ಲಂಘಿಸುವ ವಿದೇಶಿಯರಿಗೆ ಮೇಲ್ವಿಚಾರಣೆ ಮತ್ತು ದಂಡವನ್ನು ಹೆಚ್ಚಿಸುತ್ತಿದೆ ಎಂದು ಸ್ಥಳೀಯ ಮಾದ್ಯಮ ವರದಿ ಮಾಡಿದೆ.

ಬಿಶ್ಕೆಕ್‌ನಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯು ಮೇ 13ರಂದು ಕಿರ್ಗಿಜ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ವೀಡಿಯೊಗಳು ಶುಕ್ರವಾರ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ತಿಳಿಸಿದೆ.

ಆಪಾದಿತ ಹಿಂಸಾಚಾರವು ಹಾಸ್ಟೆಲ್‌ನಲ್ಲಿ ಸಂಭವಿಸಿದೆ, ಇದು ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹುಟ್ಟುಹಾಕಿದೆ. ವಿದೇಶಿಯರ ಬಗ್ಗೆ ಮೃದು ನಿರ್ಧಾರ ತಾಳಲಾಗುತ್ತಿದೆ ಎಂದು ಅಲ್ಲಿನ ಜನರು ಪ್ರತಿಭಟನೆಯನ್ನು ವ್ಯಕ್ತಪಡಿಸಲು ಒಗ್ಗೂಡಲು ಪ್ರಾರಂಭಿಸಿದ್ದಾರೆ. ಎಕೆಐಪ್ರೆಸ್ ಪ್ರಕಾರ, ಗೂಂಡಾಗಿರಿಯ ಶಂಕೆಯ ಮೇಲೆ ಮೂವರು ವಿದೇಶಿಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿಯ ಎಚ್ಚರಿಕೆಯ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಬಿಷ್ಕೆಕ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಪರಿಸ್ಥಿತಿ ಈಗ ಶಾಂತವಾಗಿದೆ ಎಂದು ವರದಿಯಾಗಿದೆ. ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...