Homeಅಂತರಾಷ್ಟ್ರೀಯಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

ಕಿರ್ಗಿಸ್ತಾನ್‌ನಲ್ಲಿ ಹಿಂಸಾಚಾರ: ಮನೆಬಿಟ್ಟು ಹೊರಬರದಂತೆ ಭಾರತೀಯ ವಿದ್ಯಾರ್ಥಿಗಳಿಗೆ ಸೂಚನೆ

- Advertisement -
- Advertisement -

ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ವಿದೇಶಿ ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಗುಂಪು ಹಿಂಸಾಚಾರದ ವರದಿಗಳ ಮಧ್ಯೆ ಭಾರತ ಮತ್ತು ಪಾಕಿಸ್ತಾನವು ಶನಿವಾರ ಬಿಷ್ಕೆಕ್‌ನಲ್ಲಿರುವ ವಿದ್ಯಾರ್ಥಿಗಳಿಗೆ ತಾವು ತಂಗಿರುವ ಹಾಸ್ಟೆಲ್‌, ಮನೆಗಳಿಂದ ಹೊರಗೆ ಬರದಂತೆ ಸೂಚಿಸಿದೆ.

ಕಿರ್ಗಿಸ್ತಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯು “ಪರಿಸ್ಥಿತಿ ಪ್ರಸ್ತುತ ಶಾಂತವಾಗಿದೆ” ಎಂದು ಹೇಳಿದೆ, ಆದರೆ ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದ ವಿದ್ಯಾರ್ಥಿಗಳು ವಾಸಿಸುವ ಬಿಷ್ಕೆಕ್‌ನಲ್ಲಿರುವ ವೈದ್ಯಕೀಯ ವಿಶ್ವವಿದ್ಯಾಲಯಗಳ ಹಾಸ್ಟೆಲ್‌ಗಳ ಮೇಲೆ ದಾಳಿ ಮಾಡಲಾಗಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ನಾವು ನಮ್ಮ ವಿದ್ಯಾರ್ಥಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ ಆದರೆ ವಿದ್ಯಾರ್ಥಿಗಳು ಸದ್ಯಕ್ಕೆ ಮನೆಯೊಳಗೆ ಇರಲು ಮತ್ತು ಯಾವುದೇ ಸಮಸ್ಯೆಯ ಸಂದರ್ಭದಲ್ಲಿ ರಾಯಭಾರ ಕಚೇರಿಯೊಂದಿಗೆ ಸಂಪರ್ಕದಲ್ಲಿರಲು ಸಲಹೆ ನೀಡಲಾಗುತ್ತದೆ. ಅಗತ್ಯಬಿದ್ದರೆ 24×7 ಸಂಪರ್ಕ ಸಂಖ್ಯೆ 0555710041ಕ್ಕೆ ಕರೆ ಮಾಡುವಂತೆ ಸೂಚಿಸಲಾಗಿದೆ.

ಪ್ರಸ್ತುತ ಮಧ್ಯ ಏಷ್ಯಾ ರಾಷ್ಟ್ರ ಕಿರ್ಗಿಸ್ತಾನ್‌ನಲ್ಲಿ ಸುಮಾರು 14,500 ಭಾರತೀಯ ಮತ್ತು ಸುಮಾರು 10,000 ಪಾಕಿಸ್ತಾನಿ ವಿದ್ಯಾರ್ಥಿಗಳಿದ್ದಾರೆ.

ಏನಿದು ಹಿಂಸಾಚಾರ?

ಕಿರ್ಗಿಸ್ತಾನ್‌ನ ರಾಜಧಾನಿ ಬಿಷ್ಕೆಕ್‌ನಲ್ಲಿ ಮೇ 13ರಂದು ಕಿರ್ಗಿಜ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ನಂತರ ಹಿಂಸಾಚಾರ ಭುಗಿಲೆದ್ದಿದೆ. ಸ್ಥಳೀಯ ಮತ್ತು ವಿದೇಶಿಗರ ನಡುವಿನ ಜಗಳದಿಂದ ಹಿಂಸಾಚಾರ ನಡೆದಿರುವ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಸ್ಥಳದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ.

ಈ ಮಧ್ಯೆ ಕಿರ್ಗಿಸ್ತಾನ್‌ನ ಆಂತರಿಕ ವ್ಯವಹಾರಗಳ ಸಚಿವಾಲಯವು ವಲಸೆ ಕಾನೂನುಗಳನ್ನು ಉಲ್ಲಂಘಿಸುವ ವಿದೇಶಿಯರಿಗೆ ಮೇಲ್ವಿಚಾರಣೆ ಮತ್ತು ದಂಡವನ್ನು ಹೆಚ್ಚಿಸುತ್ತಿದೆ ಎಂದು ಸ್ಥಳೀಯ ಮಾದ್ಯಮ ವರದಿ ಮಾಡಿದೆ.

ಬಿಶ್ಕೆಕ್‌ನಲ್ಲಿರುವ ಪಾಕಿಸ್ತಾನದ ರಾಯಭಾರ ಕಚೇರಿಯು ಮೇ 13ರಂದು ಕಿರ್ಗಿಜ್ ಮತ್ತು ಈಜಿಪ್ಟ್ ವಿದ್ಯಾರ್ಥಿಗಳ ನಡುವಿನ ಹೊಡೆದಾಟದ ವೀಡಿಯೊಗಳು ಶುಕ್ರವಾರ ಆನ್‌ಲೈನ್‌ನಲ್ಲಿ ವೈರಲ್ ಆದ ನಂತರ ಹಿಂಸಾಚಾರ ಉಲ್ಬಣಗೊಂಡಿದೆ ಎಂದು ತಿಳಿಸಿದೆ.

ಆಪಾದಿತ ಹಿಂಸಾಚಾರವು ಹಾಸ್ಟೆಲ್‌ನಲ್ಲಿ ಸಂಭವಿಸಿದೆ, ಇದು ಸಾಮಾಜಿಕ ಮಾಧ್ಯಮದಲ್ಲಿ ವದಂತಿಗಳನ್ನು ಹುಟ್ಟುಹಾಕಿದೆ. ವಿದೇಶಿಯರ ಬಗ್ಗೆ ಮೃದು ನಿರ್ಧಾರ ತಾಳಲಾಗುತ್ತಿದೆ ಎಂದು ಅಲ್ಲಿನ ಜನರು ಪ್ರತಿಭಟನೆಯನ್ನು ವ್ಯಕ್ತಪಡಿಸಲು ಒಗ್ಗೂಡಲು ಪ್ರಾರಂಭಿಸಿದ್ದಾರೆ. ಎಕೆಐಪ್ರೆಸ್ ಪ್ರಕಾರ, ಗೂಂಡಾಗಿರಿಯ ಶಂಕೆಯ ಮೇಲೆ ಮೂವರು ವಿದೇಶಿಯರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಭಾರತೀಯ ರಾಯಭಾರ ಕಚೇರಿಯ ಎಚ್ಚರಿಕೆಯ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್, ಬಿಷ್ಕೆಕ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಯೋಗಕ್ಷೇಮವನ್ನು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಪರಿಸ್ಥಿತಿ ಈಗ ಶಾಂತವಾಗಿದೆ ಎಂದು ವರದಿಯಾಗಿದೆ. ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಲು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಸ್ವಾತಿ ಮಲಿವಾಲ್‌ ವಿರುದ್ಧ ದೂರು ನೀಡಿದ ಕೇಜ್ರಿವಾಲ್ ಸಹಾಯಕ ಬಿಭವ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...