Homeಅಂತರಾಷ್ಟ್ರೀಯಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

- Advertisement -
- Advertisement -

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ.

ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಪೆನಾಲ್ಟಿ ಸುಂಕದ ರದ್ದತಿಯೂ ಸೇರಿದೆ.

ವ್ಯಾಪಾರ ಒಪ್ಪಂದದಿಂದ ಜೆನೆರಿಕ್ ಔಷಧಗಳು, ರತ್ನ ಮತ್ತು ವಜ್ರಗಳು ಹಾಗೂ ವಿಮಾನದ ಬಿಡಿಭಾಗಗಳ ಮೇಲಿನ ಸುಂಕವು ಶೂನ್ಯಕ್ಕೆ ಇಳಿಕೆಯಾಗಲಿದೆ. ಜವಳಿ, ಚರ್ಮದ ವಸ್ತುಗಳು ಮತ್ತು ಕರಕುಶಲ ವಸ್ತುಗಳ ರಫ್ತಿಗೂ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೊಂಡಿದೆ.

ವ್ಯಾಪಾರ ಒಪ್ಪಂದದ ಮೂಲಕ ಮುಂದಿನ 5 ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಬಿಲಿಯನ್ ಡಾಲರ್ ಮೌಲ್ಯದ ಇಂಧನ ಉತ್ಪನ್ನಗಳು, ವಿಮಾನದ ಬಿಡಿಭಾಗಗಳು ಮತ್ತು ತಂತ್ರಜ್ಞಾನ ಉತ್ಪನ್ನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಭಾರತ ಬದ್ಧತೆ ವ್ಯಕ್ತಪಡಿಸಿದೆ ಎಂದು ಅಮೆರಿಕದ ಶ್ವೇತಭವನ ಹೇಳಿದೆ. ರಷ್ಯಾ ತೈಲದ ಬದಲಿಗೆ ಭಾರತವು ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಲು ಉದ್ದೇಶಿಸಿದೆ ಎಂದಿದೆ.

ಭಾರತವು ರಷ್ಯಾದಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ, ಆದರೆ ಹೊಸ ವ್ಯಾಪಾರ ಒಪ್ಪಂದದ ಭಾಗವಾಗಿ ಅದನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಹಂತಹಂತವಾಗಿ ಸ್ಥಗಿತಗೊಳಿಸಲು ಸಮ್ಮತಿಸಿದೆ ಎಂದು ವರದಿಗಳು ಹೇಳಿವೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ರಷ್ಯಾದಿಂದ ಮಾಡುತ್ತಿದ್ದ ತೈಲ ಆಮದನ್ನು ಈಗಾಗಲೇ ಕಡಿಮೆ ಮಾಡಿದೆ. ಜನವರಿಯಲ್ಲಿ ದಿನಕ್ಕೆ 1.2 ಮಿಲಿಯನ್ ಬ್ಯಾರೆಲ್ ಇದ್ದ ಆಮದು, ಫೆಬ್ರವರಿಯಲ್ಲಿ 1 ಮಿಲಿಯನ್ ಮತ್ತು ಮಾರ್ಚ್ ವೇಳೆಗೆ 8 ಲಕ್ಷ ಬ್ಯಾರೆಲ್‌ಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಭಾರತವು ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ‘ಪೆನಾಲ್ಟಿ’ ಸುಂಕವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಭಾರತದ ವಿದೇಶಾಂಗ ಸಚಿವಾಲಯವು ದೇಶದ ಇಂಧನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾರತವು ತನ್ನ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳ ಹಿತಾಸಕ್ತಿಯನ್ನು ಕಾಪಾಡಿಕೊಂಡಿದೆ. ಅಕ್ಕಿ, ಗೋಧಿ, ಹಾಲು ಮತ್ತು ಮಾಂಸದಂತಹ ಸೂಕ್ಷ್ಮ ಉತ್ಪನ್ನಗಳಿಗೆ ಸುಂಕ ವಿನಾಯಿತಿಯಿಂದ ರಕ್ಷಣೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಭಾರತೀಯ ರೈತರ ಜೀವನೋಪಾಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕದ ಉತ್ಪನ್ನಗಳು ಭಾರತದ ಮಾರುಕಟ್ಟೆಗೆ ಬರುವಾಗ ವಿಧಿಸುವ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ. ಇದರಿಂದ ಅಮೆರಿಕದ ಅಗ್ಗದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸದಂತೆ ತಡೆಯಲಾಗುತ್ತದೆ. ಗೋಧಿ, ಅಕ್ಕಿ, ಜೋಳ, ಸೋಯಾಬೀನ್ ಮತ್ತು ಸಕ್ಕರೆಯಂತಹ ಪ್ರಮುಖ ಬೆಳೆಗಳನ್ನು ‘ಸೂಕ್ಷ್ಮ ಉತ್ಪನ್ನ’ಗಳ ಪಟ್ಟಿಯಲ್ಲಿ ಇರಿಸಲಾಗಿದ್ದು, ಇವುಗಳಿಗೆ ಯಾವುದೇ ರಿಯಾಯಿತಿ ನೀಡಿಲ್ಲ. ಅಮೆರಿಕದ ಹಾಲು, ಬೆಣ್ಣೆ, ಗಿಣ್ಣು ಮತ್ತು ಪನೀರ್‌ನಂತಹ ಉತ್ಪನ್ನಗಳ ಆಮದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಾರತದ ಕೋಟ್ಯಂತರ ಸಣ್ಣ ಹೈನುಗಾರರ ಹಿತಾಸಕ್ತಿ ಕಾಪಾಡುವುದು ಇದರ ಉದ್ದೇಶ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಈ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ 2026ರ ಮಧ್ಯಭಾಗದಲ್ಲಿ ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದವು ಭಾರತೀಯ ರಫ್ತುದಾರರಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ (MSMEs) 30 ಟ್ರಿಲಿಯನ್ ಡಾಲರ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ ಪಿಯೂಷ್ ಗೋಯಲ್ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...