Homeಅಂತರಾಷ್ಟ್ರೀಯಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

- Advertisement -
- Advertisement -

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ.

ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಪೆನಾಲ್ಟಿ ಸುಂಕದ ರದ್ದತಿಯೂ ಸೇರಿದೆ.

ವ್ಯಾಪಾರ ಒಪ್ಪಂದದಿಂದ ಜೆನೆರಿಕ್ ಔಷಧಗಳು, ರತ್ನ ಮತ್ತು ವಜ್ರಗಳು ಹಾಗೂ ವಿಮಾನದ ಬಿಡಿಭಾಗಗಳ ಮೇಲಿನ ಸುಂಕವು ಶೂನ್ಯಕ್ಕೆ ಇಳಿಕೆಯಾಗಲಿದೆ. ಜವಳಿ, ಚರ್ಮದ ವಸ್ತುಗಳು ಮತ್ತು ಕರಕುಶಲ ವಸ್ತುಗಳ ರಫ್ತಿಗೂ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೊಂಡಿದೆ.

ವ್ಯಾಪಾರ ಒಪ್ಪಂದದ ಮೂಲಕ ಮುಂದಿನ 5 ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಬಿಲಿಯನ್ ಡಾಲರ್ ಮೌಲ್ಯದ ಇಂಧನ ಉತ್ಪನ್ನಗಳು, ವಿಮಾನದ ಬಿಡಿಭಾಗಗಳು ಮತ್ತು ತಂತ್ರಜ್ಞಾನ ಉತ್ಪನ್ನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಭಾರತ ಬದ್ಧತೆ ವ್ಯಕ್ತಪಡಿಸಿದೆ ಎಂದು ಅಮೆರಿಕದ ಶ್ವೇತಭವನ ಹೇಳಿದೆ. ರಷ್ಯಾ ತೈಲದ ಬದಲಿಗೆ ಭಾರತವು ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಲು ಉದ್ದೇಶಿಸಿದೆ ಎಂದಿದೆ.

ಭಾರತವು ರಷ್ಯಾದಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ, ಆದರೆ ಹೊಸ ವ್ಯಾಪಾರ ಒಪ್ಪಂದದ ಭಾಗವಾಗಿ ಅದನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಹಂತಹಂತವಾಗಿ ಸ್ಥಗಿತಗೊಳಿಸಲು ಸಮ್ಮತಿಸಿದೆ ಎಂದು ವರದಿಗಳು ಹೇಳಿವೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ರಷ್ಯಾದಿಂದ ಮಾಡುತ್ತಿದ್ದ ತೈಲ ಆಮದನ್ನು ಈಗಾಗಲೇ ಕಡಿಮೆ ಮಾಡಿದೆ. ಜನವರಿಯಲ್ಲಿ ದಿನಕ್ಕೆ 1.2 ಮಿಲಿಯನ್ ಬ್ಯಾರೆಲ್ ಇದ್ದ ಆಮದು, ಫೆಬ್ರವರಿಯಲ್ಲಿ 1 ಮಿಲಿಯನ್ ಮತ್ತು ಮಾರ್ಚ್ ವೇಳೆಗೆ 8 ಲಕ್ಷ ಬ್ಯಾರೆಲ್‌ಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಭಾರತವು ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ‘ಪೆನಾಲ್ಟಿ’ ಸುಂಕವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಭಾರತದ ವಿದೇಶಾಂಗ ಸಚಿವಾಲಯವು ದೇಶದ ಇಂಧನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾರತವು ತನ್ನ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳ ಹಿತಾಸಕ್ತಿಯನ್ನು ಕಾಪಾಡಿಕೊಂಡಿದೆ. ಅಕ್ಕಿ, ಗೋಧಿ, ಹಾಲು ಮತ್ತು ಮಾಂಸದಂತಹ ಸೂಕ್ಷ್ಮ ಉತ್ಪನ್ನಗಳಿಗೆ ಸುಂಕ ವಿನಾಯಿತಿಯಿಂದ ರಕ್ಷಣೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಭಾರತೀಯ ರೈತರ ಜೀವನೋಪಾಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕದ ಉತ್ಪನ್ನಗಳು ಭಾರತದ ಮಾರುಕಟ್ಟೆಗೆ ಬರುವಾಗ ವಿಧಿಸುವ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ. ಇದರಿಂದ ಅಮೆರಿಕದ ಅಗ್ಗದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸದಂತೆ ತಡೆಯಲಾಗುತ್ತದೆ. ಗೋಧಿ, ಅಕ್ಕಿ, ಜೋಳ, ಸೋಯಾಬೀನ್ ಮತ್ತು ಸಕ್ಕರೆಯಂತಹ ಪ್ರಮುಖ ಬೆಳೆಗಳನ್ನು ‘ಸೂಕ್ಷ್ಮ ಉತ್ಪನ್ನ’ಗಳ ಪಟ್ಟಿಯಲ್ಲಿ ಇರಿಸಲಾಗಿದ್ದು, ಇವುಗಳಿಗೆ ಯಾವುದೇ ರಿಯಾಯಿತಿ ನೀಡಿಲ್ಲ. ಅಮೆರಿಕದ ಹಾಲು, ಬೆಣ್ಣೆ, ಗಿಣ್ಣು ಮತ್ತು ಪನೀರ್‌ನಂತಹ ಉತ್ಪನ್ನಗಳ ಆಮದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಾರತದ ಕೋಟ್ಯಂತರ ಸಣ್ಣ ಹೈನುಗಾರರ ಹಿತಾಸಕ್ತಿ ಕಾಪಾಡುವುದು ಇದರ ಉದ್ದೇಶ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಈ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ 2026ರ ಮಧ್ಯಭಾಗದಲ್ಲಿ ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದವು ಭಾರತೀಯ ರಫ್ತುದಾರರಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ (MSMEs) 30 ಟ್ರಿಲಿಯನ್ ಡಾಲರ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ ಪಿಯೂಷ್ ಗೋಯಲ್ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...