Homeಅಂತರಾಷ್ಟ್ರೀಯಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ : ಭಾರತದ ಮೇಲಿನ ಸುಂಕ ಶೇ.18ಕ್ಕೆ ಇಳಿಕೆ

- Advertisement -
- Advertisement -

ವ್ಯಾಪಾರ ಒಪ್ಪಂದಕ್ಕೆ ಸಂಬಂಧಪಟ್ಟಂತೆ ಭಾರತ ಮತ್ತು ಅಮೆರಿಕ ಶನಿವಾರ (ಫೆ.7) ಜಂಟಿ ಹೇಳಿಕೆ ಬಿಡುಗಡೆ ಮಾಡಿದ್ದು, ಮಧ್ಯಂತರ ವ್ಯಾಪಾರ ಒಪ್ಪಂದದ ಚೌಕಟ್ಟನ್ನು (Interim Trade Agreement Framework) ಅಂತಿಮಗೊಳಿಸಿರುವುದಾಗಿ ತಿಳಿಸಿವೆ.

ಈ ಒಪ್ಪಂದದ ಅಡಿಯಲ್ಲಿ, ಭಾರತೀಯ ಉತ್ಪನ್ನಗಳ ಮೇಲೆ ಅಮೆರಿಕ ವಿಧಿಸುತ್ತಿದ್ದ ಗರಿಷ್ಠ ಸುಂಕವನ್ನು ಶೇ. 50 ರಿಂದ ಶೇ. 18ಕ್ಕೆ ಇಳಿಕೆ ಮಾಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ. ವರದಿಗಳ ಪ್ರಕಾರ, ಇದರಲ್ಲಿ ರಷ್ಯಾ ತೈಲ ಖರೀದಿಯ ಕಾರಣಕ್ಕಾಗಿ ವಿಧಿಸಲಾಗಿದ್ದ ಶೇ. 25ರಷ್ಟು ಹೆಚ್ಚುವರಿ ಪೆನಾಲ್ಟಿ ಸುಂಕದ ರದ್ದತಿಯೂ ಸೇರಿದೆ.

ವ್ಯಾಪಾರ ಒಪ್ಪಂದದಿಂದ ಜೆನೆರಿಕ್ ಔಷಧಗಳು, ರತ್ನ ಮತ್ತು ವಜ್ರಗಳು ಹಾಗೂ ವಿಮಾನದ ಬಿಡಿಭಾಗಗಳ ಮೇಲಿನ ಸುಂಕವು ಶೂನ್ಯಕ್ಕೆ ಇಳಿಕೆಯಾಗಲಿದೆ. ಜವಳಿ, ಚರ್ಮದ ವಸ್ತುಗಳು ಮತ್ತು ಕರಕುಶಲ ವಸ್ತುಗಳ ರಫ್ತಿಗೂ ಹೆಚ್ಚಿನ ಉತ್ತೇಜನ ಸಿಗಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿಕೊಂಡಿದೆ.

ವ್ಯಾಪಾರ ಒಪ್ಪಂದದ ಮೂಲಕ ಮುಂದಿನ 5 ವರ್ಷಗಳಲ್ಲಿ ಅಮೆರಿಕದಿಂದ ಸುಮಾರು 500 ಬಿಲಿಯನ್ ಡಾಲರ್ ಮೌಲ್ಯದ ಇಂಧನ ಉತ್ಪನ್ನಗಳು, ವಿಮಾನದ ಬಿಡಿಭಾಗಗಳು ಮತ್ತು ತಂತ್ರಜ್ಞಾನ ಉತ್ಪನ್ನಗಳನ್ನು ಖರೀದಿಸಲು ಭಾರತ ಉದ್ದೇಶಿಸಿದೆ.

ರಷ್ಯಾದಿಂದ ನೇರವಾಗಿ ಅಥವಾ ಪರೋಕ್ಷವಾಗಿ ತೈಲ ಆಮದು ಮಾಡಿಕೊಳ್ಳುವುದನ್ನು ನಿಲ್ಲಿಸಲು ಭಾರತ ಬದ್ಧತೆ ವ್ಯಕ್ತಪಡಿಸಿದೆ ಎಂದು ಅಮೆರಿಕದ ಶ್ವೇತಭವನ ಹೇಳಿದೆ. ರಷ್ಯಾ ತೈಲದ ಬದಲಿಗೆ ಭಾರತವು ಮುಂದಿನ ದಿನಗಳಲ್ಲಿ ಅಮೆರಿಕ ಮತ್ತು ವೆನೆಜುವೆಲಾದಿಂದ ಹೆಚ್ಚಿನ ಪ್ರಮಾಣದಲ್ಲಿ ತೈಲ ಖರೀದಿಸಲು ಉದ್ದೇಶಿಸಿದೆ ಎಂದಿದೆ.

ಭಾರತವು ರಷ್ಯಾದಿಂದ ತೈಲ ಆಮದನ್ನು ಸಂಪೂರ್ಣವಾಗಿ ನಿಲ್ಲಿಸಿಲ್ಲ, ಆದರೆ ಹೊಸ ವ್ಯಾಪಾರ ಒಪ್ಪಂದದ ಭಾಗವಾಗಿ ಅದನ್ನು ಗಣನೀಯವಾಗಿ ಕಡಿಮೆ ಮಾಡಲು ಮತ್ತು ಹಂತಹಂತವಾಗಿ ಸ್ಥಗಿತಗೊಳಿಸಲು ಸಮ್ಮತಿಸಿದೆ ಎಂದು ವರದಿಗಳು ಹೇಳಿವೆ.

ಕಳೆದ ಕೆಲವು ತಿಂಗಳುಗಳಿಂದ ಭಾರತವು ರಷ್ಯಾದಿಂದ ಮಾಡುತ್ತಿದ್ದ ತೈಲ ಆಮದನ್ನು ಈಗಾಗಲೇ ಕಡಿಮೆ ಮಾಡಿದೆ. ಜನವರಿಯಲ್ಲಿ ದಿನಕ್ಕೆ 1.2 ಮಿಲಿಯನ್ ಬ್ಯಾರೆಲ್ ಇದ್ದ ಆಮದು, ಫೆಬ್ರವರಿಯಲ್ಲಿ 1 ಮಿಲಿಯನ್ ಮತ್ತು ಮಾರ್ಚ್ ವೇಳೆಗೆ 8 ಲಕ್ಷ ಬ್ಯಾರೆಲ್‌ಗಳಿಗೆ ಇಳಿಕೆಯಾಗುವ ನಿರೀಕ್ಷೆಯಿದೆ.

ಭಾರತವು ಈ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ, ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲೆ ವಿಧಿಸಿದ್ದ ಶೇ. 25ರಷ್ಟು ಹೆಚ್ಚುವರಿ ‘ಪೆನಾಲ್ಟಿ’ ಸುಂಕವನ್ನು ಫೆಬ್ರವರಿ 7ರಿಂದ ಜಾರಿಗೆ ಬರುವಂತೆ ರದ್ದುಗೊಳಿಸಿದೆ.

ಭಾರತದ ವಿದೇಶಾಂಗ ಸಚಿವಾಲಯವು ದೇಶದ ಇಂಧನ ಭದ್ರತೆ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಮರ್ಥಿಸಿಕೊಂಡಿದೆ.

ವ್ಯಾಪಾರ ಒಪ್ಪಂದದ ಮಾತುಕತೆಯಲ್ಲಿ ಭಾರತವು ತನ್ನ ಕೃಷಿ ಮತ್ತು ಹೈನುಗಾರಿಕೆ ಕ್ಷೇತ್ರಗಳ ಹಿತಾಸಕ್ತಿಯನ್ನು ಕಾಪಾಡಿಕೊಂಡಿದೆ. ಅಕ್ಕಿ, ಗೋಧಿ, ಹಾಲು ಮತ್ತು ಮಾಂಸದಂತಹ ಸೂಕ್ಷ್ಮ ಉತ್ಪನ್ನಗಳಿಗೆ ಸುಂಕ ವಿನಾಯಿತಿಯಿಂದ ರಕ್ಷಣೆ ನೀಡಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಹೇಳಿದೆ.

ಭಾರತೀಯ ರೈತರ ಜೀವನೋಪಾಯಕ್ಕೆ ಧಕ್ಕೆ ಬರದಂತೆ ನೋಡಿಕೊಳ್ಳಲಾಗುವುದು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ.

ಅಮೆರಿಕದ ಉತ್ಪನ್ನಗಳು ಭಾರತದ ಮಾರುಕಟ್ಟೆಗೆ ಬರುವಾಗ ವಿಧಿಸುವ ಆಮದು ಸುಂಕವನ್ನು ಕಡಿಮೆ ಮಾಡುವುದಿಲ್ಲ. ಇದರಿಂದ ಅಮೆರಿಕದ ಅಗ್ಗದ ಕೃಷಿ ಉತ್ಪನ್ನಗಳು ಭಾರತೀಯ ಮಾರುಕಟ್ಟೆಯನ್ನು ಆಕ್ರಮಿಸದಂತೆ ತಡೆಯಲಾಗುತ್ತದೆ. ಗೋಧಿ, ಅಕ್ಕಿ, ಜೋಳ, ಸೋಯಾಬೀನ್ ಮತ್ತು ಸಕ್ಕರೆಯಂತಹ ಪ್ರಮುಖ ಬೆಳೆಗಳನ್ನು ‘ಸೂಕ್ಷ್ಮ ಉತ್ಪನ್ನ’ಗಳ ಪಟ್ಟಿಯಲ್ಲಿ ಇರಿಸಲಾಗಿದ್ದು, ಇವುಗಳಿಗೆ ಯಾವುದೇ ರಿಯಾಯಿತಿ ನೀಡಿಲ್ಲ. ಅಮೆರಿಕದ ಹಾಲು, ಬೆಣ್ಣೆ, ಗಿಣ್ಣು ಮತ್ತು ಪನೀರ್‌ನಂತಹ ಉತ್ಪನ್ನಗಳ ಆಮದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಭಾರತದ ಕೋಟ್ಯಂತರ ಸಣ್ಣ ಹೈನುಗಾರರ ಹಿತಾಸಕ್ತಿ ಕಾಪಾಡುವುದು ಇದರ ಉದ್ದೇಶ ಎಂದು ಪಿಯೂಷ್ ಗೋಯಲ್ ಹೇಳಿದ್ದಾರೆ.

ಈ ಒಪ್ಪಂದದ ಮೊದಲ ಹಂತಕ್ಕೆ ಮಾರ್ಚ್ 2026ರ ಮಧ್ಯಭಾಗದಲ್ಲಿ ಅಧಿಕೃತವಾಗಿ ಸಹಿ ಹಾಕುವ ನಿರೀಕ್ಷೆಯಿದೆ. ಒಪ್ಪಂದವು ಭಾರತೀಯ ರಫ್ತುದಾರರಿಗೆ, ವಿಶೇಷವಾಗಿ ಸಣ್ಣ ಕೈಗಾರಿಕೆಗಳಿಗೆ (MSMEs) 30 ಟ್ರಿಲಿಯನ್ ಡಾಲರ್ ಮಾರುಕಟ್ಟೆಯನ್ನು ಮುಕ್ತಗೊಳಿಸಲಿದೆ ಪಿಯೂಷ್ ಗೋಯಲ್ ಎಂದು ಹೇಳಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...