Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...