Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...