Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...