Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...