Homeಅಂತರಾಷ್ಟ್ರೀಯ‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. 

ಆಲ್-ಇನ್ ಪಾಡ್‌ಕಾಸ್ಟ್‌ನ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಅವರು “ಸ್ಪಷ್ಟವಾಗಿ ಹೇಳುವುದಾದರೆ, ಇದು ಅವರ (ಟ್ರಂಪ್ ಅವರ) ಒಪ್ಪಂದ. ಅವರೇ ಇದನ್ನು ಅಂತಿಮಗೊಳಿಸುವವರು. ಅವರು ಇದನ್ನು ಮಾಡಿಯೇ ಮಾಡುತ್ತಾರೆ. ಒಪ್ಪಂದಕ್ಕೆ ಎಲ್ಲವೂ ಸಿದ್ಧವಾಗಿತ್ತು, ಮೋದಿ ಅವರು ಅಧ್ಯಕ್ಷರಿಗೆ ಕರೆ ಮಾಡಬೇಕಿತ್ತು. ಕರೆ ಮಾಡಲು ಅನಾನುಕೂಲತೆ ಇತ್ತು. ಆದ್ದರಿಂದ ಮೋದಿ ಕರೆ ಮಾಡಲಿಲ್ಲ. ಆ ಶುಕ್ರವಾರ ಮುಗಿಯಿತು. ಅದರ ಮುಂದಿನ ವಾರ ನಾವು ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಜೊತೆ ಒಪ್ಪಂದಗಳನ್ನು ಮಾಡಿದೆವು. ನಾವು ಬಹಳಷ್ಟು ಒಪ್ಪಂದಗಳನ್ನು ಘೋಷಿಸಿದೆವು,” ಎಂದು ಲುಟ್ನಿಕ್ ಹೇಳಿದ್ದಾರೆ. 

ಇದೇ ವೇಳೆ ಒಪ್ಪಂದ ಇನ್ನೂ ಯಾಕೆ ಆಗಲಿಲ್ಲ ಎಂಬುದನ್ನು ವಿವರಿಸಿದ ಅವರು ದೇಶಗಳ ಜೊತೆ ಮಾತುಕತೆ ನಡೆಸುತ್ತಿದ್ದ ದರಗಳ (ಟ್ಯಾರಿಫ್‌ಗಳ) ಮುಂದಿನ ರಚನೆಯ ಬಗ್ಗೆಯೂ ಹೇಳಿದರು. ಮೋದಿ ಅವರು ಕರೆ ಮಾಡದ ಕಾರಣ ಆನಂತರದಲ್ಲಿ ಅಮೆರಿಕವು ಮುಂದಿನ ಆಯ್ಕೆಯಂತೆ ಇಂಡೋನೇಷ್ಯಾ, ಫಿಲಿಪೈನ್ಸ್, ವಿಯೆಟ್ನಾಂ ಮತ್ತು ಮಲೇಷ್ಯಾ ಜೊತೆ ಒಪ್ಪಂದಗಳನ್ನು ಮಾಡಿಕೊಂಡಿತು ಎಂದಿದ್ದಾರೆ. 

ಮುಂದುವರೆದು ಸುಂಕದ ಕುರಿತು ಮಾತನಾಡಿದ ಅವರು ‘ಜುಲೈ 2025 ರಲ್ಲಿ ಯುರೋಪಿಯನ್ ಯೂನಿಯನ್, ಯುನೈಟೆಡ್ ಕಿಂಗ್‌ಡಮ್, ಜಪಾನ್, ವಿಯೆಟ್ನಾಂ, ಇಂಡೋನೇಷ್ಯಾ, ಫಿಲಿಪೈನ್ಸ್ ಮತ್ತು ದಕ್ಷಿಣ ಕೊರಿಯಾ ಜೊತೆಗಿನ ಸುಂಕ ಮಾತುಕತೆಗಳನ್ನು ಅಮೆರಿಕ ಮುಕ್ತಾಯಗೊಳಿಸಿದೆ. ಭಾರತದಿಂದ ಅಮೆರಿಕಕ್ಕೆ ಮಾಡುವ ರಫ್ತುಗಳು ಪ್ರಸ್ತುತ ಶೇಕಡಾ 50 ರಷ್ಟು ಸುಂಕ ದರವನ್ನು ಹೊಂದಿವೆ. “ಏಕೆಂದರೆ ನಾವು (ಯುಎಸ್) ಅವರೊಂದಿಗೆ (ಭಾರತ) ಮಾತುಕತೆ ನಡೆಸಿದ್ದೇವೆ ಮತ್ತು ಭಾರತವು (ಇತರ ಏಷ್ಯಾದ ದೇಶಗಳು) ಮೊದಲೇ ಮಾತುಕತೆ ಮುಗಿಸಲಿದೆ ಎಂದು ಭಾವಿಸಿ ಹೆಚ್ಚಿನ ದರದಲ್ಲಿ ಮಾತುಕತೆ ನಡೆಸಿದ್ದೇವೆ. 

ಈಗ ಸಮಸ್ಯೆ ಏನೆಂದರೆ, ಒಪ್ಪಂದಗಳು ಹೊಸ ಮತ್ತು ಹೆಚ್ಚಿನ ದರದಲ್ಲಿ ಹೊರಬಂದವು, ಆ ನಂತರ ಭಾರತವು ಮತ್ತೆ ಕರೆ ಮಾಡಿ ‘ಓಹ್, ನಾವು ಸಿದ್ಧರಿದ್ದೇವೆ’ ಎಂದು ಹೇಳುತ್ತದೆ. ಅದರಿಂದ ನಾನು ಅವರಿಗೆ ಹೇಳಿದೆ, ಯಾವುದಕ್ಕೆ ಸಿದ್ಧ? ನಿಮಗೆ ಗೊತ್ತಾ, ಅದು ಮೂರು ವಾರಗಳ ನಂತರ ಹಾಗೆ ಆಯಿತು. ‘ಮೂರು ವಾರಗಳ ಹಿಂದೆ ನಿಲ್ದಾಣದಿಂದ ಹೊರಟ ರೈಲಿಗೆ ಹತ್ತಲು ನೀವು ಸಿದ್ಧರಿದ್ದೀರಾ?'” ಎಂದು ಕೇಳಿದೆ ಎಂದು ಯುಎಸ್ ವಾಣಿಜ್ಯ ಕಾರ್ಯದರ್ಶಿ ಹೇಳಿದ್ದಾರೆ. 

ಭಾರತ ರಷ್ಯಾದ ತೈಲ ಖರೀದಿಯಿಂದ ಅತೃಪ್ತರಾಗಿದ್ದಾರೆಂದು ಮೋದಿಗೆ ತಿಳಿದಿದೆ ಮತ್ತು ವಾಷಿಂಗ್ಟನ್ ನವದೆಹಲಿಯ ಮೇಲೆ ಸುಂಕವನ್ನು “ಬಹಳ ಬೇಗನೆ” ಹೆಚ್ಚಿಸಬಹುದು ಎಂದು ಟ್ರಂಪ್ ಹೇಳಿದ ಕೆಲವು ದಿನಗಳ ನಂತರ ಲುಟ್ನಿಕ್ ಅವರು ಈ ಹೇಳಿಕೆಗಳನ್ನು ನೀಡಿದ್ದಾರೆ. 

ಎರಡೂ ದೇಶಗಳು ದ್ವಿಪಕ್ಷೀಯ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ನಡೆಸುತ್ತಿರುವ ಸಮಯದಲ್ಲಿ ಅಮೆರಿಕ ಅಧ್ಯಕ್ಷರ ಬೆದರಿಕೆ ಮಾತು ಕೇಳಿ ಬಂದಿದೆ. ಇಲ್ಲಿಯವರೆಗೆ, ಅದಕ್ಕಾಗಿ ಆರು ಸುತ್ತಿನ ಮಾತುಕತೆಗಳು ನಡೆದಿವೆ. 

ಅಮೆರಿಕಕ್ಕೆ ಪ್ರವೇಶಿಸುವ ಭಾರತೀಯ ಸರಕುಗಳ ಮೇಲಿನ ಶೇಕಡಾ 50 ರಷ್ಟು ಸುಂಕವನ್ನು ಪರಿಹರಿಸಲು ಒಂದು ಚೌಕಟ್ಟಿನ ಒಪ್ಪಂದವನ್ನು ಈ ಒಪ್ಪಂದ ಒಳಗೊಂಡಿದೆ. ಈಗ ದರ ಮತ್ತಷ್ಟು ಹೆಚ್ಚಾಗಿರುವುದಾಗಿಯೂ ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್ ಹೇಳಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...