Homeಕರ್ನಾಟಕಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ರೈತರ ಪಾಲಿಗೆ ಮರಣಶಾಸನ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದವನ್ನು ಒಪ್ಪಿಕೊಂಡು ಸ್ವಾಗತಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಸಂಪೂರ್ಣ ಶರಣಾಗಿದ್ದಾರೆ. ಮುಂದಿನ ದಿನಗಳಲ್ಲಿ ಈ ಒಪ್ಪಂದ 140 ಕೋಟಿ ಭಾರತೀಯರಿಗೆ, ಅದರಲ್ಲಿಯೂ ಮುಖ್ಯವಾಗಿ ದೇಶದ 72 ಕೋಟಿ ರೈತರ ಪಾಲಿಗೆ ಮರಣಶಾಸನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿರುವ ಅವರು, ಎರಡು ದೇಶಗಳ ನಡುವಿನ ಸಂಬಂಧಗಳು ಸಮಾನತೆ ಮತ್ತು ಪರಸ್ಪರ ಗೌರವದ ಬುನಾದಿಯ ಮೇಲೆ ಸ್ಥಾಪನೆಯಾಗಬೇಕಾಗುತ್ತದೆ. ಅದು ಒತ್ತಡ, ಬೆದರಿಕೆ ಮತ್ತು ಏಕಪಕ್ಷೀಯ ನೀತಿ-ನಿರ್ಧಾರಗಳ ಹೇರಿಕೆಯಿಂದ ನಡೆಯಬಾರದು. ಆದರೆ ಭಾರತ ಮತ್ತು ಅಮೆರಿಕ ನಡುವಿನ ಮಧ್ಯಂತರ ವ್ಯಾಪಾರ ಒಪ್ಪಂದ ಕಾರ್ಯರೂಪಕ್ಕೆ ಬಂದಿರುವ ವಿಧಿ-ವಿಧಾನಗಳನ್ನು ಗಮನಿಸಿದರೆ, ಇದು ಒಡೆಯನ ಅಜ್ಞೆಗೆ ಸೇವಕ ತಲೆಯಾಡಿಸಿದಂತಿದೆ ಎಂದಿದ್ದಾರೆ.

ರಷ್ಯಾದಿಂದ ತೈಲ ಖರೀದಿಸುತ್ತಿದ್ದ ಭಾರತವನ್ನು ಮಣಿಸುವ ಉದ್ದೇಶದಿಂದಲೇ ಭಾರತೀಯ ಸರಕುಗಳ ಮೇಲಿನ ಸುಂಕವನ್ನು ಯರ್ರಾಬಿರ್ರಿಯಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏರಿಸಿದ್ದರು. ಈಗ ಅದನ್ನು ಶೇಕಡ 25ರಿಂದ ಶೇಕಡ 18ಕ್ಕೆ ಇಳಿಸಿ ಭಾರತಕ್ಕೆ ಮಹಾ ಉಪಕಾರ ಮಾಡಿದಂತೆ ನಾಟಕವಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಅಮೆರಿಕದ ಸರಕುಗಳ ಮೇಲಿನ ಸುಂಕವನ್ನು ಭಾರತ ಶೂನ್ಯಕ್ಕಿಳಿಸಿದೆ. ಮೇಲ್ನೋಟದಲ್ಲಿಯೇ ಈ ತಾರತಮ್ಯದಿಂದ ಆಗಿರುವ ಅನ್ಯಾಯ ಸ್ಪಷ್ಟವಾಗಿ ಕಾಣುತ್ತಿದ್ದರೂ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ಸ್ವಾಗತಿಸಿರುವುದು ಭಾರತದ 149 ಕೋಟಿ ಜನರಿಗೆ ಮಾಡುತ್ತಿರುವ ಮಹಾದ್ರೋಹವಾಗಿದೆ ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸದ್ಯ ಭಾರತ ಶೇಕಡ 40ರಷ್ಟು ತೈಲವನ್ನು ರಷ್ಯಾದಿಂದ ಖರೀದಿಸುತ್ತಿದೆ. ಇದೀಗ ಡೊನಾಲ್ಡ್ ಟ್ರಂಪ್ ಅವರ ಆದೇಶಕ್ಕೆ ತಲೆಬಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದಿಂದ ತೈಲ ಖರೀದಿಯನ್ನು ಕೈಬಿಟ್ಟು ಅಮೆರಿಕ ಮತ್ತು ವೆನಿಜುವೆಲಾ ದೇಶಗಳಿಂದ ತೈಲ ಖರೀದಿಸಲು ಒಪ್ಪಿಕೊಂಡಿರುವುದು ಈ ಒಪ್ಪಂದದ ಮುಖ್ಯಾಂಶವಾಗಿದೆ. ಈ ಮೂಲಕ ಭಾರತ ಸಂಪೂರ್ಣ ಶರಣಾಗತಿಯಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗಲಿದ್ದು, ಅದರ ಪರಿಣಾಮವಾಗಿ ಉಳಿದ ಅಗತ್ಯವಸ್ತುಗಳು ಕೂಡಾ ದುಬಾರಿಯಾಗಲಿದೆ ಎಂದಿದ್ದಾರೆ.

ಈ ಒಪ್ಪಂದದಿಂದ ಆಗಲಿರುವ ಸಣ್ಣಪುಟ್ಟ ಲಾಭಗಳನ್ನು ದೊಡ್ಡ ಸಾಧನೆ ಎಂದು ಬಿಂಬಿಸುತ್ತಿರುವ ಕೇಂದ್ರ ಸರ್ಕಾರ ಭಾರತೀಯರಿಗೆ, ಮುಖ್ಯವಾಗಿ ದೇಶದ ರೈತ ಸಮುದಾಯಕ್ಕೆ ಆಗುತ್ತಿರುವ ನಷ್ಟವನ್ನು ಉದ್ದೇಶಪೂರ್ವಕವಾಗಿ ಮುಚ್ಚಿಡುತ್ತಿದೆ. ಈ ಒಪ್ಪಂದವನ್ನು ಅಮೆರಿಕದ ರೈತ ಸಮುದಾಯ ಒಕ್ಕೊರಲಿನಿಂದ ಸ್ವಾಗತಿಸಿ ಕುಣಿದಾಡುತ್ತಿರುವುದೇ ಈ ಒಪ್ಪಂದ ಭಾರತದ ರೈತರ ಪಾಲಿನ ಮರಣಶಾಸನವಾಗಲಿದೆ ಎಂಬುದಕ್ಕೆ ಸೂಚನೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಭಾರತಕ್ಕೆ ಹೋಲಿಸಿದರೆ ಅತೀ ಹೆಚ್ಚಿನ ಪ್ರಮಾಣದ ಸಬ್ಸಿಡಿ ಪಡೆಯುತ್ತಿರುವ ಅಮೆರಿಕದ ರೈತರು, ಭಾರತದ ಕೃಷಿ ಉತ್ಪನ್ನಗಳಿಗಿಂತ ಕಡಿಮೆ ಬೆಲೆಗೆ ತಮ್ಮ ಬೆಳೆಗಳನ್ನು ಮಾರಾಟ ಮಾಡಲು ಸಾಧ್ಯವಿದೆ. ಈ ಅಪಾಯವನ್ನು ತಪ್ಪಿಸಲಿಕ್ಕಾಗಿಯೇ ಇಲ್ಲಿಯವರೆಗಿನ ಎಲ್ಲ ಸರ್ಕಾರಗಳು ಅಮೆರಿಕದಿಂದ ಆಮದಾಗುತ್ತಿರುವ ಕೃಷಿ ಉತ್ಪನ್ನಗಳ ಮೇಲೆ ಹೆಚ್ಚಿನ ಪ್ರಮಾಣದ ಸುಂಕ ಹೇರುತ್ತಾ ಬಂದಿವೆ. ಈಗ ಈ ಆಮದು ಸುಂಕವನ್ನು ರದ್ದುಗೊಳಿಸಿದರೆ ದೇಶದ ಮಾರುಕಟ್ಟೆಗಳಲ್ಲಿ ಅಮೆರಿಕದ ಅಗ್ಗದ ದರದ ಆಹಾರಧಾನ್ಯ, ಹಣ್ಣು, ತರಕಾರಿ ಮತ್ತು ಡೇರಿ ಉತ್ಪನ್ನಗಳು ಲಗ್ಗೆ ಇಡಲಿವೆ. ಇದರಿಂದ ಭಾರತದ ರೈತರು ದಿವಾಳಿ ಸ್ಥಿತಿ ತಲುಪಲಿದ್ದು, ಅವರಿಗೆ ಆತ್ಮಹತ್ಯೆ ಬಿಟ್ಟರೆ ಬೇರೆ ದಾರಿ ಇಲ್ಲದ ಸ್ಥಿತಿ ನಿರ್ಮಾಣವಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಸಂಪೂರ್ಣವಾಗಿ ಶರಣಾಗತಿಯಾಗಿರುವ ಈ ಒಪ್ಪಂದಕ್ಕೆ ಭಾರತೀಯರ ಹಿತರಕ್ಷಣೆಯ ಉದ್ದೇಶ ಖಂಡಿತ ಇಲ್ಲ. ಅಮೆರಿಕದ ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ಎದುರಿಸುತ್ತಿರುವ ಮೋದಿಯವರ ಉದ್ಯಮ ಸ್ನೇಹಿತ ಅದಾನಿ ಅವರ ರಕ್ಷಣೆ ಮತ್ತು ಜೆಫ್ರಿ ಎಪ್‌ಸ್ಟೀನ್ ಫೈಲ್ಸ್‌ನಲ್ಲಿ ಕಾಣಿಸಿಕೊಂಡಿರುವ ಪ್ರಧಾನಿ ಮೋದಿ ಮತ್ತು ಸಂಪುಟದ ಸದಸ್ಯರ ಹೆಸರುಗಳಿಂದಾಗಿ ಸೃಷ್ಟಿಯಾಗಿರುವ ಒತ್ತಡದ ಭಾಗವಾಗಿ ಕೇಂದ್ರ ಸರ್ಕಾರ ದೇಶ ವಿರೋಧಿಯಾಗಿರುವ ಒಪ್ಪಂದಕ್ಕೆ ಒಪ್ಪಿಕೊಂಡಿದೆ ಎಂಬ ಆರೋಪವನ್ನು ನಿರಾಕರಿಸಲು ಸಾಧ್ಯವೇ? ಎಂದು ಸಿಎಂ ಪ್ರಶ್ನಿಸಿದ್ದಾರೆ.

ಜಾಗತಿಕವಾಗಿ ಭಾರತ ಹಿಂದೆಂದೂ ಇಷ್ಟೊಂದು ದುರ್ಬಲವಾಗಿರಲಿಲ್ಲ. ರಾಜತಾಂತ್ರಿಕವಾಗಿ ಎದುರಾಗುವ ಒತ್ತಡಗಳನ್ನು ಇಲ್ಲಿಯವರೆಗಿನ ಎಲ್ಲಾ ಪ್ರಧಾನಿಗಳು ಸಮರ್ಥವಾಗಿ ಎದುರಿಸಿ ಭಾರತದ ಸಾರ್ವಭೌಮತೆ ಮತ್ತು ಗೌರವವನ್ನು ಕಾಪಾಡಿಕೊಂಡು ಬಂದಿದ್ದಾರೆ. ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರ ಅಲಿಪ್ತ ನೀತಿ ಭಾರತವನ್ನು ವಿಶ್ವಗುರುವನ್ನಾಗಿ ಮಾಡಿತ್ತು. ಪ್ರಧಾನಿ ಇಂದಿರಾಗಾಂಧಿಯವರು ದೈತ್ಯ ಅಮೆರಿಕದ ಒತ್ತಡವನ್ನು ಕೂಡಾ ಲೆಕ್ಕಿಸದೆ ಪಾಕಿಸ್ತಾನವನ್ನು ಮಣಿಸಿದ್ದು ಈಗ ಇತಿಹಾಸವಾಗಿದೆ. ಜಾಗತಿಕವಾಗಿ ಎಲ್ಲ ದೇಶಗಳು ಆರ್ಥಿಕ ಹಿಂಜರಿತದಿಂದ ತತ್ತರಿಸುತ್ತಿದ್ದಾಗ ಭಾರತದ ಆರ್ಥಿಕ ಸಾರ್ವಭೌಮತೆಯನ್ನು ಕಾಪಾಡಿದ್ದ ಡಾ.ಮನಮೋಹನ್ ಸಿಂಗ್ ಅವರು ಹೊಸ ಆರ್ಥಿಕ ಯುಗದ ಪ್ರವರ್ತಕರಾಗಿದ್ದರು ಎಂದಿದ್ದಾರೆ.

ಆದರೆ, ಇಂದು ವಿಶ್ವದಲ್ಲಿ ಭಾರತಕ್ಕೆ ಮಿತ್ರರಿಗಿಂತ ಶತ್ರುಗಳ ಸಂಖ್ಯೆ ಹೆಚ್ಚಾಗಿದೆ. ವಿದೇಶಾಂಗ ನೀತಿ ಎಂದರೆ ಭಾಷಣ, ಘೋಷಣೆ, ಕೈಕುಲುಕಾಟ ಮತ್ತು ಸ್ವಪ್ರಚಾರವಷ್ಟೇ ಎಂದು ಪ್ರಧಾನಿ ನರೇಂದ್ರ ಮೋದಿಯವರು ತಿಳಿದುಕೊಂಡಂತಿದೆ. ಚೀನಾ ಮತ್ತು ಅಮೆರಿಕದಂತಹ ದೈತ್ಯ ಶಕ್ತಿಗಳ ನಡುವೆ ಸಿಕ್ಕಿಹಾಕಿಕೊಂಡಿರುವ ಭಾರತ ತನ್ನ ಅಸ್ಮಿತೆಯನ್ನು ಸಂಪೂರ್ಣ ಕಳೆದುಕೊಳ್ಳುವ ಸ್ಥಿತಿಗೆ ತಲುಪಿದೆ. ಅಮೆರಿಕದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರನ್ನು ತಲೆಮೇಲೆ ಕೂರಿಸಿ ಮೆರೆದಾಡಿದ್ದ ನರೇಂದ್ರ ಮೋದಿ ಅವರು ಈಗ ಅದೇ ಟ್ರಂಪ್ ಅವರ ಆಜ್ಞಾಪಾಲಕರಾಗುವ ದೈನೇಸಿ ಸ‍್ಥಿತಿಗೆ ಬಂದಿರುವುದು ವಿಷಾದನೀಯ ಬೆಳವಣಿಗೆಯಾಗಿದೆ. ಮೋದಿಯವರ 56 ಇಂಚಿನ ಎದೆ ಮತ್ತು ವಿಶ್ವಗುರುವಿನ ಕಿರೀಟವನ್ನು ಡೊನಾಲ್ಡ್ ಟ್ರಂಪ್ ಪ್ರತಿದಿನ ಕುಟ್ಟಿ ಪುಡಿ ಮಾಡುತ್ತಿದ್ದಾರೆ ಎಂದು ಸಿಎಂ ವ್ಯಂಗ್ಯವಾಡಿದ್ದಾರೆ.

ವಿದೇಶಾಂಗ ನೀತಿಯಿಂದ ಹಿಡಿದು ಆರ್ಥಿಕ ಮತ್ತು ಸಾಮಾಜಿಕ ನೀತಿಯವರೆಗೂ ಎಲ್ಲ ರಂಗಗಳಲ್ಲಿಯೂ ಸಂಪೂರ್ಣವಾಗಿ ವಿಫಲವಾಗಿರುವ ಪ್ರಧಾನಿ ನರೇಂದ್ರ ಮೋದಿಯವರು ರಾಜೀನಾಮೆ ಕೊಟ್ಟು ದೇಶದ ಮತ್ತು ಅಳಿದುಳಿದ ಅವರ ಗೌರವವನ್ನು ಉಳಿಸಿಕೊಳ್ಳುವುದು ಒಳ್ಳೆಯದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...