Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...