Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...