Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...