Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...