Homeಕರ್ನಾಟಕಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

ಭಾರತ v/s ಶ್ರೀಲಂಕಾ 2022 ಕ್ರಿಕೆಟ್ ಸರಣಿ: ಪೂಜಾರ, ರಹಾನೆ ತಂಡದಿಂದ ಹೊರಕ್ಕೆ

- Advertisement -
- Advertisement -

ಶ್ರೀಲಂಕಾ ವಿರುದ್ಧದ T20 ಮತ್ತು ಟೆಸ್ಟ್ ಸರಣಿಗೆ ಭಾರತ ತಂಡವನ್ನು ಚೇತನ್ ಶರ್ಮಾ ನೇತೃತ್ವದ ಆಯ್ಕೆ ಸಮಿತಿಯು ಶನಿವಾರ ಸಂಜೆ ಪ್ರಕಟಿಸಿದೆ. ರೋಹಿತ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ತಂಡದ ನಾಯಕತ್ವವನ್ನು ವಹಿಸಿಕೊಂಡ ನಂತರ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯ ಇದಾಗಿದ್ದು, ಭಾರೀ ಕುತೂಹಲವನ್ನು ಹುಟ್ಟಹಾಕಿದೆ.

ಆಯ್ಕೆ ಸಮಿತಿಯು ಜಸ್ಪ್ರೀತ್ ಬುಮ್ರಾ ಅವರನ್ನು ಟಿ20 ಮತ್ತು ಟೆಸ್ಟ್ ಉಪನಾಯಕರನ್ನಾಗಿ ನೇಮಿಸಿದೆ. ಆದರೆ, ಶ್ರೀಲಂಕಾ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಗೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಅವರನ್ನು ತಂಡದಿಂದ ಕೈಬಿಡಲಾಗಿದೆ.

“ಇಬ್ಬರನ್ನೂ ಕೈಬಿಡುವ ನಿರ್ಣಯವನ್ನು ತೆಗೆದುಕೊಳ್ಳುವ ಮೊದಲು ನಾವು ದೀರ್ಘವಾಗಿ ಯೋಚಿಸಿದ್ದೇವೆ. ಅಲ್ಲದೆ, ಇದಕ್ಕೂ ಮೊದಲೇ ಅವರೊಂದಿಗೆ ಮಾತನಾಡಿದ್ದೇವೆ. ಅವರು ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್‌ಗಳ ಭಾಗವಾಗುವುದಿಲ್ಲ ಎಂದು ಅವರಿಗೆ ತಿಳಿಸಿದ್ದೇವೆ. ಈ ನಿರ್ಧಾರವು ಕೇವಲ ಈ ಟೆಸ್ಟ್‌ಗಳಿಗೆ ಮಾತ್ರ. ಮುಂದಿನ ಸರಣಿಗಳಲ್ಲಿ ಅವರು ತಂಡದ ಭಾಗವಾಗಿರುತ್ತಾರೆ”ಎಂದು ಚೇತನ್ ಶರ್ಮಾ ಹೇಳಿದ್ದಾರೆ.

“ಇಬ್ಬರು ಆಟಗಾರರೂ ಭಾರತ ತಂಡಕ್ಕೆ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ. ಆದ್ದರಿಂದ ಅವರು ಯಾವಾಗಬೇಕಾದರೂ ತಂಡಕ್ಕೆ ಮರಳಬಹುದು. ಇದು ಗ್ರಾಫ್ನಂತೆ, ರಹಾನೆ ನಿನ್ನೆ (ರಣಜಿ ಟ್ರೋಫಿ) ಶತಕ ಬಾರಿಸಿದ್ದರು. ಅವರನ್ನು ಕೈಬಿಟ್ಟಿರುವುದು ನಿರ್ವಹಣೆಯ ಪ್ರಕ್ರಿಯೆಯಾಗಿದೆ” ಎಂದು ಅವರು ವಿವರಿಸಿದ್ದಾರೆ.

ಇದನ್ನೂ ಓದಿರಿ: ವಿರಾಟ್ ಕೊಹ್ಲಿ ವಿಚಾರದಲ್ಲಿ ಮಾಧ್ಯಮಗಳ ವಿರುದ್ಧ ರೋಹಿತ್‌ ಶರ್ಮಾ ಕಿಡಿ

“ಸದ್ಯಕ್ಕೆ, ಎರಡು ಟೆಸ್ಟ್‌ಗಳಿಗೆ ಪರಿಗಣಿಸಲಾಗುವುದಿಲ್ಲ ಎಂದು ನಾವು ಅವರಿಗೆ ತಿಳಿಸಿದ್ದೇವೆ. ನಡುವೆ, ಬದಲಾವಣೆಗಳು ಹೇಗೆ ನಡೆಯುತ್ತವೆ ಎಂಬುದನ್ನು ನಾವು ಗಮನಿಸುತ್ತೇವೆ. ನಾವು ಯಾರಿಗೂ ಸಂಪೂರ್ಣವಾಗಿ ಬಾಗಿಲು ಮುಚ್ಚುವವರಲ್ಲ. ಇದು ಕ್ರಿಕೆಟ್, ಇಲ್ಲಿ ಕಾರ್ಯಕ್ಷಮತೆ ಮುಖ್ಯ. ಈಗ ಅವರು ರಣಜಿ ಟ್ರೋಫಿ ಆಡುವುದನ್ನು ಆಯ್ಕೆ ಸಮಿತಿ ವೀಕ್ಷಿಸುತ್ತಿದೆ” ಎಂದು ಶರ್ಮಾ ಹೇಳಿದ್ದಾರೆ.

“ಯಾವ ಆಧಾರದ ಮೇಲೆ ಅವರನ್ನು ಕೈಬಿಡಲಾಗಿದೆ ಎಂದು ನಾನು ನಿಮಗೆ ಹೇಳಲಾರೆ. ಅದು ಆಯ್ಕೆಗಾರರಿಗೆ ಬಿಟ್ಟ ವಿಷಯವಾಗಿದೆ. ನಾನು ನಿಮಗೆ ಹೇಳುವುದು ಇಷ್ಟೇ, ಅವರಿಗೆ ಮೊದಲೇ ಹೇಳಲಾಗಿತ್ತು ಮತ್ತು ಭಾರತ ತಂಡಕ್ಕೆ ಮೆಟ್ಟಿಲಾಗಿರುವ ರಣಜಿ ಟ್ರೋಫಿಯನ್ನು ಆಡುವಂತೆ ಕೇಳಲಾಯಿತು. ನಾವು ನಮ್ಮ ನಡುವೆ ಏನು ಚರ್ಚಿಸಿದ್ದೇವೆ ಎಂಬುದನ್ನು ನಾವು ನಿಮಗೆ ಹೇಳಲು ಸಾಧ್ಯವಿಲ್ಲ” ಎಂದು ಸುದ್ದಿಗಾರರಿಗೆ ಶರ್ಮಾ ಹೇಳಿದ್ದಾರೆ.

“ರಹಾನೆ ಈ ಮೊದಲು ರಣಜಿ ಆಡಿಲ್ಲ. ರಣಜಿ ಆಡುವುದು ಮುಖ್ಯ. ಇಲ್ಲದಿದ್ದರೆ, ನೀವು ಪಂದ್ಯಕ್ಕೆ ಸಿದ್ಧರಾಗಿದ್ದೀರಿ ಎಂದು ನಮಗೆ ಹೇಗೆ ತಿಳಿಯುತ್ತದೆ? ನಾವು ವಯಸ್ಸನ್ನು ನೋಡುತ್ತಿಲ್ಲ. ಯುವಕರು ಹೊರಗೆ ಕುಳಿತ್ತಿದ್ದಾರೆ. ಆ ಯುವಕರಿಗೆ ಅವಕಾಶ ಕೊಡೋಣ ಎಂದುಕೊಂಡೆವು”ಎಂದು ಶರ್ಮಾ ತಿಳಿಸಿದ್ದಾರೆ.

ಟೆಸ್ಟ್ ತಂಡ: ರೋಹಿತ್ ಶರ್ಮಾ (ಕ್ಯಾಪ್ಟನ್), ಮಯಾಂಕ್ ಅಗರ್ವಾಲ್, ಪ್ರಿಯಾಂಕ್ ಪಾಂಚಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಶುಬ್ಮನ್ ಗಿಲ್, ಆರ್ ಪಂತ್, ಕೆಎಸ್ ಭರತ್, ಆರ್ ಅಶ್ವಿನ್, ಆರ್ ಜಡೇಜಾ, ಜಯಂತ್ ಯಾದವ್, ಕುಲ್ದೀಪ್ ಯಾದವ್, ಜೆ ಬುಮ್ರಾ (ವಿಸಿ), ಎಂಡಿ ಶಮಿ, ಎಂಡಿ ಸಿರಾಜ್, ಉಮೇಶ್ ಯಾದವ್, ಸೌರಭ್ ಕುಮಾರ್.

ಇದನ್ನೂ ಓದಿರಿ: ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

T20I ತಂಡ: ರೋಹಿತ್ ಶರ್ಮಾ (c) ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (wk), ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಬುಮ್ರಾ (vc), ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಹರ್ಷಲ್ ಪಟೇಲ್, ಎಂಡಿ ಸಿರಾಜ್, ಸಂಜು ಸ್ಯಾಮ್ಸನ್ (wk), ರವೀಂದ್ರ ಜಡೇಜಾ, ವೈ ಚಹಾಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್.

ಸರಣಿ ವೇಳಾಪಟ್ಟಿ

ಟಿ20 ಸರಣಿ: 1 ನೇ T20I: ಫೆಬ್ರವರಿ 24 – ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ

2ನೇ T20I: ಫೆಬ್ರವರಿ 26 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

3 ನೇ T20I: ಫೆಬ್ರವರಿ 27 – ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ, ಧರ್ಮಶಾಲಾ

ಟೆಸ್ಟ್ ಸರಣಿ: 1 ನೇ ಟೆಸ್ಟ್: ಮಾರ್ಚ್ 4 ರಿಂದ ಮಾರ್ಚ್ 8 – ಮೊಹಾಲಿ

2 ನೇ ಟೆಸ್ಟ್: ಮಾರ್ಚ್ 12 ರಿಂದ ಮಾರ್ಚ್ 16 – ಬೆಂಗಳೂರು


ಇದನ್ನೂ ಓದಿರಿ: ಕ್ರಿಕೆಟ್ ಜಗತ್ತು ಕಂಡ ಕೆಚ್ಚೆದೆಯ ನಾಯಕ ಕೊಹ್ಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...