Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...