Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...