Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...