Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...