Homeಅಂತರಾಷ್ಟ್ರೀಯಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

ಪ್ಯಾಲೆಸ್ತೀನ್‌ಗೆ ವಿಶ್ವಸಂಸ್ಥೆ ಸದಸ್ಯತ್ವ: ನಿರ್ಣಯದ ಪರ ಭಾರತ ಮತದಾನ

- Advertisement -
- Advertisement -

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನ್‌ಗೆ ಪೂರ್ಣ ಸದಸ್ಯತ್ವ ನೀಡಬೇಕೆಂಬ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ನಿರ್ಣಯದ ಕರಡು ಪರವಾಗಿ ಭಾರತ ಮತ ಚಲಾಯಿಸಿದೆ. ಭದ್ರತಾ ಮಂಡಳಿಯು ಈ ವಿಷಯವನ್ನು ಅನುಕೂಲಕರವಾಗಿ ಮರುಪರಿಶೀಲಿಸುವಂತೆ ನಿರ್ಣಯವು ಶಿಫಾರಸು ಮಾಡಿದೆ.

ಈ ನಿರ್ಣಯದ ಪರವಾಗಿ ಭಾರತ ಸೇರಿದಂತೆ ಒಟ್ಟು 143 ರಾಷ್ಟ್ರಗಳು ಮತ ಚಲಾಯಿಸಿದ್ದರೆ, 25 ರಾಷ್ಟ್ರಗಳು ಗೈರಾಗಿತ್ತು, ಒಂಬತ್ತು ರಾಷ್ಟ್ರಗಳು ನಿರ್ಣಯದ ವಿರುದ್ಧ ಮತ ಚಲಾಯಿಸಿವೆ. ನಿರ್ಣಯದ ವಿರುದ್ಧ ಅಮೆರಿಕ, ಇಸ್ರೇಲ್‌, ಪಪುವಾ ನ್ಯೂ ಗಿನಿ, ಪಲೌ, ನೌರು, ಮೈಕ್ರೋನೇಷ್ಯಾ, ಆರ್ಜೆಂಟಿನ, ಹಂಗೆರಿ, ಝೆಕಿಯಾ ಮತ ಚಲಾಯಿಸಿವೆ.

ವಿಶ್ವ ಸಂಸ್ಥೆಯ ಸದಸ್ಯತ್ವ ಪಡೆಯಲು ಫೆಲೆಸ್ತೀನ್‌ ಅರ್ಹವಾಗಿದೆ ಎಂದು ಸಂಯುಕ್ತ ಅರಬ್‌ ಸಂಸ್ಥಾನ ನಿರ್ಣಯ ಮಂಡಿಸಿದೆ. ವಿಶ್ವಸಂಸ್ಥೆ ಸನ್ನದಿನ ವಿಧಿ 4ರ ಅನ್ವಯ ಸದಸ್ಯತ್ವಕ್ಕೆ ಮಾನ್ಯತೆ ನೀಡಬೇಕು ಎಂದು ನಿರ್ಣಯ ಮಂಡಿಸಲಾಗಿತ್ತು. ಈ ನಿರ್ಣಯದ ಕುರಿತು 100ಕ್ಕೂ ಅಧಿಕ ರಾಷ್ಟ್ರೀಯ ಪ್ರತಿನಿಧಿಗಳು ಮಾತನಾಡಿದ್ದರು.

ಕಳೆದ ತಿಂಗಳು, ಸಾಮಾನ್ಯ ಸಭೆಯಲ್ಲಿ ವ್ಯಾಪಕ ಬೆಂಬಲದ ಹೊರತಾಗಿಯೂ ಭದ್ರತಾ ಮಂಡಳಿಗೆ ಸಲ್ಲಿಸಿದ ಇದೇ ರೀತಿಯ ನಿರ್ಣಯವನ್ನು ಯುನೈಟೆಡ್ ಸ್ಟೇಟ್ಸ್ ವೀಟೋ ಅಧಿಕಾರ ಚಲಾವಣೆ ಮಾಡಿ ರದ್ದುಗೊಳಿಸಿತ್ತು.  ಇದೀಗ ಯುಎಸ್ ಮತ್ತೊಮ್ಮೆ ವೀಟೋ ಅಧಿಕಾರ ಚಲಾವಣೆ ಮಾಡುವ ನಿರೀಕ್ಷೆಯಿದೆ.

1974ರಲ್ಲಿ ಪ್ಯಾಲೆಸ್ತೀನ್‌ ಲಿಬರೇಶನ್ ಆರ್ಗನೈಸೇಶನ್‌ನ್ನು ಪ್ಯಾಲೆಸ್ತೀನಿಯನ್ ಜನರ ಏಕೈಕ ಮತ್ತು ಕಾನೂನುಬದ್ಧ ಪ್ರತಿನಿಧಿಯಾಗಿ ಗುರುತಿಸಿದ ಮೊದಲ ಅರಬ್ ಅಲ್ಲದ ರಾಜ್ಯ ಭಾರತವಾಗಿದೆ. 1988ರಲ್ಲಿ ಪ್ಯಾಲೆಸ್ತೀನ್‌ ರಾಜ್ಯವನ್ನಾಗಿ ಗುರುತಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ. 1996ರಲ್ಲಿ ಭಾರತ ತನ್ನ ಪ್ರತಿನಿಧಿ ಕಚೇರಿಯನ್ನು ಕೂಡ ತೆರೆದಿದೆ.

UN ರಾಯಭಾರಿಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿರುವ ರುಚಿರಾ ಕಾಂಬೋಜ್ ಅವರು ಈ ಮೊದಲು ಮಾತನಾಡಿ, ಯುಎನ್‌ನಲ್ಲಿ ಸದಸ್ಯತ್ವಕ್ಕಾಗಿ ಪ್ಯಾಲೆಸ್ತೀನ್‌ ಸಲ್ಲಿಸಿದ್ದ ಅರ್ಜಿಯನ್ನು ಭದ್ರತಾ ಮಂಡಳಿಯು ಅನುಮೋದಿಸಲಿಲ್ಲ, ಇದನ್ನು ವೀಟೋ ಬಳಸಿ ಅಮೆರಿಕ ತಡೆದಿತ್ತು ಎಂದು ಹೇಳಿದ್ದರು.

ಏಪ್ರಿಲ್‌ನಲ್ಲಿ ಪ್ಯಾಲೆಸ್ತೀನ್‌, ಯುಎನ್ ಸೆಕ್ರೆಟರಿ-ಜನರಲ್ ಆಂಟೋನಿಯೊ ಗುಟೆರೆಸ್‌ಗೆ ಪತ್ರವನ್ನು ಕಳುಹಿಸಿದ್ದು, ಯುಎನ್ ಪೂರ್ಣ ಸದಸ್ಯತ್ವಕ್ಕಾಗಿ ತನ್ನ ಅರ್ಜಿಯನ್ನು ಮತ್ತೊಮ್ಮೆ ಪರಿಗಣಿಸುವಂತೆ ವಿನಂತಿಸಿದೆ. ಒಂದು ರಾಜ್ಯಕ್ಕೆ ಪೂರ್ಣ UN ಸದಸ್ಯತ್ವವನ್ನು ನೀಡಬೇಕಾದರೆ, ಅದರ ಅರ್ಜಿಯನ್ನು ಭದ್ರತಾ ಮಂಡಳಿ ಮತ್ತು ಜನರಲ್ ಅಸೆಂಬ್ಲಿ ಎರಡರಿಂದಲೂ ಅನುಮೋದಿಸಬೇಕು, ಅಲ್ಲಿ ಮೂರನೇ ಎರಡರಷ್ಟು ಸದಸ್ಯರು ಹಾಜರಿರುತ್ತಾರೆ ಮತ್ತು ರಾಜ್ಯವನ್ನು ಪೂರ್ಣ ಸದಸ್ಯರಾಗಿ ಒಪ್ಪಿಕೊಳ್ಳಲು ಮತದಾನದ ಅಗತ್ಯವಿದೆ.

ಪ್ರಸ್ತುತ, ಪ್ಯಾಲೆಸ್ತೀನ್‌ ಯುಎನ್‌ನಲ್ಲಿ “ಸದಸ್ಯರಲ್ಲದ ವೀಕ್ಷಕ ರಾಜ್ಯ” ಆಗಿದೆ, 2012ರಲ್ಲಿ ಜನರಲ್ ಅಸೆಂಬ್ಲಿಯು ಪ್ಯಾಲೆಸ್ತೀನ್‌ಗೆ ಈ ಸ್ಥಾನಮಾನವನ್ನು ನೀಡಿದೆ. ಈ ಸ್ಥಿತಿಯು ಪ್ಯಾಲೆಸ್ತೀನ್‌ಗೆ ವಿಶ್ವ ಸಂಸ್ಥೆಯ ಪ್ರಕ್ರಿಯೆಗಳಲ್ಲಿ ಭಾಗವಹಿಸಲು ಅವಕಾಶ ನೀಡುತ್ತದೆ ಆದರೆ ಅದು ನಿರ್ಣಯಗಳ ಬಗ್ಗೆ ಮತ ಚಲಾಯಿಸಲು ಅವಕಾಶ ಇರುವುದಿಲ್ಲ.

ಅಕ್ಟೋಬರ್ 7, 2023ರಂದು ಯುದ್ಧ ಘೋಷಣೆ ಬಳಿಕ ಇಸ್ರೇಲ್‌ ಪ್ಯಾಲೆಸ್ತೀನ್‌ ಮೇಲೆ ನಡೆಸಿದ ದಾಳಿಗೆ ಗಾಝಾದಲ್ಲಿ ಈವರೆಗೆ 34,000ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ.

ಇದನ್ನು ಓದಿ: ‘ಸರ್ಜಿಕಲ್ ಸ್ಟ್ರೈಕ್’ ನಿಜವಾಗಿ ನಡೆದಿದೆಯೋ ಇಲ್ಲವೋ ಗೊತ್ತಿಲ್ಲ: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...