Homeಮುಖಪುಟಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

ಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

- Advertisement -
- Advertisement -

ಆಕ್ರಮಿತ ಪ್ಯಾಲೆಸ್ತೀನ್‌ನ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆಯನ್ನು ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿತು. ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ.

”ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ’ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಂಡನೆಯಾದ ಈ ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿವೆ. 18 ದೇಶಗಳು ನಿರ್ಣಯದಿಂದ ದೂರ ಉಳಿದಿವೆ. ಅಮೆರಿಕ, ಕೆನಡಾ, ಹಂಗರಿ, ಇಸ್ರೇಲ್, ಮಾರ್ಷಲ್ ದ್ವೀಪಗಳು, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ ಹಾಗೂ ನೌರು ನಿರ್ಣಯದ ವಿರುದ್ಧ ಮತ ಚಲಾಯಿಸಿದ ರಾಷ್ಟ್ರಗಳಾಗಿವೆ.

ಚೀನಾ, ಫ್ರಾನ್ಸ್, ಜಪಾನ್, ಮಲೇಷ್ಯಾ, ಮಾಲೀವ್, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬ್ರಿಟನ್, ಬಾಂಗ್ಲಾದೇಶ, ಭೂತಾನ್ ನಿರ್ಣಯ ಬೆಂಬಲಿಸಿರುವ ಪ್ರಮುಖ ದೇಶಗಳಾಗಿವೆ.

ಇಸ್ರೇಲ್ ಆಕ್ರಮಣವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಭೂಮಿ ಮುಟ್ಟುಗೋಲು ಹಾಕಿಕೊಂಡು ಜನರ ಜೀವನೋಪಾಯಕ್ಕೆ ಅಡ್ಡಿಯುಂಟು ಮಾಡುವುದು, ಬಲವಂತವಾಗಿ ಜನರ ಸ್ಥಳಾಂತರ ಹಾಗೂ ಭೂಪ್ರದೇಶದ ಅತಿಕ್ರಮಣ ಮಾಡುವುದಕ್ಕೆ ಬಹುತೇಕ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದವು.

”ಇದು ಇಸ್ರೇಲ್‌ನ ಅಕ್ರಮ ನಡೆಯಾಗಿದೆ. ಅಲ್ಲದೇ, ಆ ಪ್ರದೇಶದಲ್ಲಿ ಶಾಂತಿ ಭಂಗ ಉಂಟು ಮಾಡುವ ಜತೆಗೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಅಡ್ಡಿಯಾಗಲಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಕೂಡಲೇ, ಈ ಎಲ್ಲಾ ಚಟುವಟಿಕೆಗಳಿಂದ ಇಸ್ರೇಲ್ ದೂರ ಸರಿಯಬೇಕು ಎಂದು ಒತ್ತಾಯಿಸಲಾಗಿದೆ.

193 ರಾಷ್ಟ್ರಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯತ್ವ ಪಡೆದಿವೆ. ಅಕ್ಟೋಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಗಾಜಾ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಜೋರ್ಡಾನ್ ನಿರ್ಣಯ ಮಂಡಿಸಿತ್ತು. ಬಾಂಗ್ಲಾದೇಶ, ಮಾಲೀವ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40ಕ್ಕೂ ಹೆಚ್ಚು ರಾಷ್ಟ್ರಗಳು ಜೋರ್ಡಾನ್ ನಿರ್ಧಾರಕ್ಕೆ ಸಹಮತ ಸೂಚಿಸಿದ್ದವು.

ಗಾಜಾ ಪಟ್ಟಿ ಜನರ ರಕ್ಷಣೆ ಹಾಗೂ ಮಾನವೀಯ ಕಟ್ಟುಪಾಡುಗಳನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಈ ನಿರ್ಣಯದ ಪರ 120 ದೇಶಗಳು ಮತ ಚಲಾಯಿಸಿದ್ದವು. 14 ದೇಶಗಳು ವಿರೋಧಿಸಿದ್ದರೆ, 45 ರಾಷ್ಟ್ರಗಳು ದೂರ ಉಳಿದಿದ್ದವು. ಇಸ್ರೇಲ್ ವಿರುದ್ಧ ಹಮಾಸ್ ನಡೆಸಿದ ದಾಳಿ ಬಗ್ಗೆ ನಿರ್ಣಯದಲ್ಲಿ ಪ್ರಸ್ತಾಪಿಸಿಲ್ಲ ಎಂದು ಭಾರತವು ದೂರ ಉಳಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಪರ ಲಂಡನ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...