Homeಮುಖಪುಟಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

ಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

- Advertisement -
- Advertisement -

ಆಕ್ರಮಿತ ಪ್ಯಾಲೆಸ್ತೀನ್‌ನ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆಯನ್ನು ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿತು. ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ.

”ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ’ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಂಡನೆಯಾದ ಈ ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿವೆ. 18 ದೇಶಗಳು ನಿರ್ಣಯದಿಂದ ದೂರ ಉಳಿದಿವೆ. ಅಮೆರಿಕ, ಕೆನಡಾ, ಹಂಗರಿ, ಇಸ್ರೇಲ್, ಮಾರ್ಷಲ್ ದ್ವೀಪಗಳು, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ ಹಾಗೂ ನೌರು ನಿರ್ಣಯದ ವಿರುದ್ಧ ಮತ ಚಲಾಯಿಸಿದ ರಾಷ್ಟ್ರಗಳಾಗಿವೆ.

ಚೀನಾ, ಫ್ರಾನ್ಸ್, ಜಪಾನ್, ಮಲೇಷ್ಯಾ, ಮಾಲೀವ್, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬ್ರಿಟನ್, ಬಾಂಗ್ಲಾದೇಶ, ಭೂತಾನ್ ನಿರ್ಣಯ ಬೆಂಬಲಿಸಿರುವ ಪ್ರಮುಖ ದೇಶಗಳಾಗಿವೆ.

ಇಸ್ರೇಲ್ ಆಕ್ರಮಣವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಭೂಮಿ ಮುಟ್ಟುಗೋಲು ಹಾಕಿಕೊಂಡು ಜನರ ಜೀವನೋಪಾಯಕ್ಕೆ ಅಡ್ಡಿಯುಂಟು ಮಾಡುವುದು, ಬಲವಂತವಾಗಿ ಜನರ ಸ್ಥಳಾಂತರ ಹಾಗೂ ಭೂಪ್ರದೇಶದ ಅತಿಕ್ರಮಣ ಮಾಡುವುದಕ್ಕೆ ಬಹುತೇಕ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದವು.

”ಇದು ಇಸ್ರೇಲ್‌ನ ಅಕ್ರಮ ನಡೆಯಾಗಿದೆ. ಅಲ್ಲದೇ, ಆ ಪ್ರದೇಶದಲ್ಲಿ ಶಾಂತಿ ಭಂಗ ಉಂಟು ಮಾಡುವ ಜತೆಗೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಅಡ್ಡಿಯಾಗಲಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಕೂಡಲೇ, ಈ ಎಲ್ಲಾ ಚಟುವಟಿಕೆಗಳಿಂದ ಇಸ್ರೇಲ್ ದೂರ ಸರಿಯಬೇಕು ಎಂದು ಒತ್ತಾಯಿಸಲಾಗಿದೆ.

193 ರಾಷ್ಟ್ರಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯತ್ವ ಪಡೆದಿವೆ. ಅಕ್ಟೋಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಗಾಜಾ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಜೋರ್ಡಾನ್ ನಿರ್ಣಯ ಮಂಡಿಸಿತ್ತು. ಬಾಂಗ್ಲಾದೇಶ, ಮಾಲೀವ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40ಕ್ಕೂ ಹೆಚ್ಚು ರಾಷ್ಟ್ರಗಳು ಜೋರ್ಡಾನ್ ನಿರ್ಧಾರಕ್ಕೆ ಸಹಮತ ಸೂಚಿಸಿದ್ದವು.

ಗಾಜಾ ಪಟ್ಟಿ ಜನರ ರಕ್ಷಣೆ ಹಾಗೂ ಮಾನವೀಯ ಕಟ್ಟುಪಾಡುಗಳನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಈ ನಿರ್ಣಯದ ಪರ 120 ದೇಶಗಳು ಮತ ಚಲಾಯಿಸಿದ್ದವು. 14 ದೇಶಗಳು ವಿರೋಧಿಸಿದ್ದರೆ, 45 ರಾಷ್ಟ್ರಗಳು ದೂರ ಉಳಿದಿದ್ದವು. ಇಸ್ರೇಲ್ ವಿರುದ್ಧ ಹಮಾಸ್ ನಡೆಸಿದ ದಾಳಿ ಬಗ್ಗೆ ನಿರ್ಣಯದಲ್ಲಿ ಪ್ರಸ್ತಾಪಿಸಿಲ್ಲ ಎಂದು ಭಾರತವು ದೂರ ಉಳಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಪರ ಲಂಡನ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...