Homeಮುಖಪುಟಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

ಇಸ್ರೇಲ್‌ ದಾಳಿಗೆ ಖಂಡನೆ: ವಿಶ್ವಸಂಸ್ಥೆಯ ನಿರ್ಣಯಕ್ಕೆ ಭಾರತ ಸೇರಿ 145 ದೇಶಗಳ ಬೆಂಬಲ

- Advertisement -
- Advertisement -

ಆಕ್ರಮಿತ ಪ್ಯಾಲೆಸ್ತೀನ್‌ನ ಪ್ರದೇಶಗಳಲ್ಲಿ ಇಸ್ರೇಲ್‌ನ ವಸಾಹತು ಚಟುವಟಿಕೆಯನ್ನು ಖಂಡಿಸಿ ವಿಶ್ವಸಂಸ್ಥೆಯು, ಸಾಮಾನ್ಯ ಸಭೆಯಲ್ಲಿ ನಿರ್ಣಯ ಮಂಡಿಸಿತು. ಈ ನಿರ್ಣಯದ ಪರ ಭಾರತ ಸೇರಿದಂತೆ 145 ರಾಷ್ಟ್ರಗಳು ಮತ ಚಲಾಯಿಸಿವೆ.

”ಪೂರ್ವ ಜೆರುಸಲೇಂ ಹಾಗೂ ಸಿರಿಯಾದ ಗೋಲನ್ ಸೇರಿದಂತೆ ಪ್ಯಾಲೆಸ್ತೀನ್‌ನ ಆಕ್ರಮಿತ ಪ್ರದೇಶದಲ್ಲಿ ಇಸ್ರೇಲ್ ವಸಾಹತು ಚಟುವಟಿಕೆ’ ಶೀರ್ಷಿಕೆಯಡಿ ಕರಡು ನಿರ್ಣಯ ಸಿದ್ಧಪಡಿಸಲಾಗಿತ್ತು. ವಿಶ್ವಸಂಸ್ಥೆಯ ವಿಶೇಷ ರಾಜಕೀಯ ಹಾಗೂ ವಸಾಹತು ವಿಮೋಚನಾ ಸಮಿತಿಯು ಇದಕ್ಕೆ ಅನುಮೋದನೆ ನೀಡಿತ್ತು.

ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಂಡನೆಯಾದ ಈ ನಿರ್ಣಯದ ವಿರುದ್ಧ ಏಳು ದೇಶಗಳು ಮತ ಚಲಾಯಿಸಿವೆ. 18 ದೇಶಗಳು ನಿರ್ಣಯದಿಂದ ದೂರ ಉಳಿದಿವೆ. ಅಮೆರಿಕ, ಕೆನಡಾ, ಹಂಗರಿ, ಇಸ್ರೇಲ್, ಮಾರ್ಷಲ್ ದ್ವೀಪಗಳು, ಫೆಡರೇಟೆಡ್ ಸ್ಟೇಟ್ಸ್ ಆಫ್ ಮೈಕ್ರೋನೇಷಿಯಾ ಹಾಗೂ ನೌರು ನಿರ್ಣಯದ ವಿರುದ್ಧ ಮತ ಚಲಾಯಿಸಿದ ರಾಷ್ಟ್ರಗಳಾಗಿವೆ.

ಚೀನಾ, ಫ್ರಾನ್ಸ್, ಜಪಾನ್, ಮಲೇಷ್ಯಾ, ಮಾಲೀವ್, ರಷ್ಯಾ, ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬ್ರಿಟನ್, ಬಾಂಗ್ಲಾದೇಶ, ಭೂತಾನ್ ನಿರ್ಣಯ ಬೆಂಬಲಿಸಿರುವ ಪ್ರಮುಖ ದೇಶಗಳಾಗಿವೆ.

ಇಸ್ರೇಲ್ ಆಕ್ರಮಣವನ್ನು ಸಭೆಯಲ್ಲಿ ತೀವ್ರವಾಗಿ ಖಂಡಿಸಲಾಯಿತು. ಭೂಮಿ ಮುಟ್ಟುಗೋಲು ಹಾಕಿಕೊಂಡು ಜನರ ಜೀವನೋಪಾಯಕ್ಕೆ ಅಡ್ಡಿಯುಂಟು ಮಾಡುವುದು, ಬಲವಂತವಾಗಿ ಜನರ ಸ್ಥಳಾಂತರ ಹಾಗೂ ಭೂಪ್ರದೇಶದ ಅತಿಕ್ರಮಣ ಮಾಡುವುದಕ್ಕೆ ಬಹುತೇಕ ರಾಷ್ಟ್ರಗಳು ಖಂಡನೆ ವ್ಯಕ್ತಪಡಿಸಿದವು.

”ಇದು ಇಸ್ರೇಲ್‌ನ ಅಕ್ರಮ ನಡೆಯಾಗಿದೆ. ಅಲ್ಲದೇ, ಆ ಪ್ರದೇಶದಲ್ಲಿ ಶಾಂತಿ ಭಂಗ ಉಂಟು ಮಾಡುವ ಜತೆಗೆ ಆರ್ಥಿಕ ಹಾಗೂ ಸಾಮಾಜಿಕ ಅಭಿವೃದ್ಧಿಗೂ ಅಡ್ಡಿಯಾಗಲಿದೆ” ಎಂದು ನಿರ್ಣಯದಲ್ಲಿ ಹೇಳಲಾಗಿದೆ. ಕೂಡಲೇ, ಈ ಎಲ್ಲಾ ಚಟುವಟಿಕೆಗಳಿಂದ ಇಸ್ರೇಲ್ ದೂರ ಸರಿಯಬೇಕು ಎಂದು ಒತ್ತಾಯಿಸಲಾಗಿದೆ.

193 ರಾಷ್ಟ್ರಗಳು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಸದಸ್ಯತ್ವ ಪಡೆದಿವೆ. ಅಕ್ಟೋಬರ್‌ನಲ್ಲಿ ನಡೆದ ವಿಶ್ವಸಂಸ್ಥೆಯ 10ನೇ ತುರ್ತು ವಿಶೇಷ ಅಧಿವೇಶನದಲ್ಲಿ ಗಾಜಾ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಜೋರ್ಡಾನ್ ನಿರ್ಣಯ ಮಂಡಿಸಿತ್ತು. ಬಾಂಗ್ಲಾದೇಶ, ಮಾಲೀವ್, ಪಾಕಿಸ್ತಾನ, ರಷ್ಯಾ, ದಕ್ಷಿಣ ಆಫ್ರಿಕಾ ಸೇರಿದಂತೆ 40ಕ್ಕೂ ಹೆಚ್ಚು ರಾಷ್ಟ್ರಗಳು ಜೋರ್ಡಾನ್ ನಿರ್ಧಾರಕ್ಕೆ ಸಹಮತ ಸೂಚಿಸಿದ್ದವು.

ಗಾಜಾ ಪಟ್ಟಿ ಜನರ ರಕ್ಷಣೆ ಹಾಗೂ ಮಾನವೀಯ ಕಟ್ಟುಪಾಡುಗಳನ್ನು ಕಾಪಾಡುವುದಕ್ಕೆ ಸಂಬಂಧಿಸಿದ ಈ ನಿರ್ಣಯದ ಪರ 120 ದೇಶಗಳು ಮತ ಚಲಾಯಿಸಿದ್ದವು. 14 ದೇಶಗಳು ವಿರೋಧಿಸಿದ್ದರೆ, 45 ರಾಷ್ಟ್ರಗಳು ದೂರ ಉಳಿದಿದ್ದವು. ಇಸ್ರೇಲ್ ವಿರುದ್ಧ ಹಮಾಸ್ ನಡೆಸಿದ ದಾಳಿ ಬಗ್ಗೆ ನಿರ್ಣಯದಲ್ಲಿ ಪ್ರಸ್ತಾಪಿಸಿಲ್ಲ ಎಂದು ಭಾರತವು ದೂರ ಉಳಿದಿತ್ತು.

ಇದನ್ನೂ ಓದಿ: ಪ್ಯಾಲೆಸ್ತೀನ್ ಪರ ಲಂಡನ್‌ನಲ್ಲಿ ಬೃಹತ್ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...