Homeಮುಖಪುಟಪಠ್ಯಪುಸ್ತಕಗಳಲ್ಲಿ 'INDIA ಬದಲಿಗೆ ಭಾರತ' ಸೇರಿಸಲು NCERT ಶಿಫಾರಸು

ಪಠ್ಯಪುಸ್ತಕಗಳಲ್ಲಿ ‘INDIA ಬದಲಿಗೆ ಭಾರತ’ ಸೇರಿಸಲು NCERT ಶಿಫಾರಸು

- Advertisement -
- Advertisement -

ಎಲ್ಲಾ ತರಗತಿಗಳ ಶಾಲಾ ಪಠ್ಯಪುಸ್ತಕಗಳಲ್ಲಿ ‘INDIA’ ಬದಲಿಗೆ ‘ಭಾರತ’ ಎಂದು ಸೇರಿಸಬೇಕು, ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಮಾಜ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಗೆ ಶಿಫಾರಸು ಮಾಡಲಾಗಿದೆ.

ಸಮಿತಿಯ ಅಧ್ಯಕ್ಷ ಸಿ ಐ ಐಸಾಕ್ ಪ್ರಕಾರ, ಸಮಿತಿಯು ಪಠ್ಯಪುಸ್ತಕಗಳಲ್ಲಿ ‘INDIA’ ಹೆಸರನ್ನು ‘ಭಾರತ್’ ಎಂದು ಬದಲಿಸಲು ಸಲಹೆ ನೀಡಿದೆ, ಪಠ್ಯಕ್ರಮದಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ ಮತ್ತು ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಅನ್ನು ಸೇರಿಸಲು ಹೇಳಲಾಗಿದೆ.

ಆದಾಗ್ಯೂ, ಸಮಿತಿಯ ಶಿಫಾರಸುಗಳ ಬಗ್ಗೆ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಎನ್‌ಸಿಇಆರ್‌ಟಿ ಅಧಿಕಾರಿಗಳು ತಿಳಿಸಿದ್ದಾರೆ.

”ಎಲ್ಲಾ ತರಗತಿಗಳ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳಲ್ಲಿ ಭಾರತ್ ಎಂಬ ಹೆಸರನ್ನು ಬಳಸಬೇಕೆಂದು ಸಮಿತಿಯು ಸರ್ವಾನುಮತದಿಂದ ಶಿಫಾರಸು ಮಾಡಿದೆ. ಪಠ್ಯಪುಸ್ತಕಗಳಲ್ಲಿ ‘ಪ್ರಾಚೀನ ಇತಿಹಾಸ’ ಬದಲಿಗೆ ‘ಶಾಸ್ತ್ರೀಯ ಇತಿಹಾಸ’ವನ್ನು ಪರಿಚಯಿಸಲು ನಾವು ಶಿಫಾರಸು ಮಾಡಿದ್ದೇವೆ” ಎಂದು ಐಸಾಕ್ ಪಿಟಿಐಗೆ ತಿಳಿಸಿದರು.

ಸಮಿತಿಯು ಪಠ್ಯಪುಸ್ತಕಗಳಲ್ಲಿ ವಿವಿಧ ಯುದ್ಧಗಳಲ್ಲಿನ ಹಿಂದೂ ರಾಜರ ಗೆಲುವನ್ನು ಹೈಲೈಟ್ ಮಾಡಲು ಶಿಫಾರಸು ಮಾಡಿದೆ ಎಂದು ಅವರು ಹೇಳಿದರು.

”ನಮ್ಮ ವೈಫಲ್ಯಗಳನ್ನು ಪ್ರಸ್ತುತ ಪಠ್ಯಪುಸ್ತಕಗಳಲ್ಲಿ ಉಲ್ಲೇಖಿಸಲಾಗಿದೆ. ಆದರೆ ಮೊಘಲರು ಮತ್ತು ಸುಲ್ತಾನರ ಮೇಲಿನ ನಮ್ಮ ವಿಜಯಗಳ ಬಗ್ಗೆ ಉಲ್ಲೇಖಿಸಲಾಗಿಲ್ಲ ಎಂದು ಇಂಡಿಯನ್ ಕೌನ್ಸಿಲ್ ಆಫ್ ಹಿಸ್ಟಾರಿಕಲ್ ರಿಸರ್ಚ್ (ICHR) ಸದಸ್ಯರೂ ಆಗಿರುವ ಐಸಾಕ್ ಹೇಳಿದರು.

ಎನ್‌ಸಿಇಆರ್‌ಟಿಯು ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) 2020ಕ್ಕೆ ಅನುಗುಣವಾಗಿ ಶಾಲಾ ಪಠ್ಯಪುಸ್ತಕಗಳ ಪಠ್ಯಕ್ರಮವನ್ನು ಪರಿಷ್ಕರಿಸುತ್ತಿದೆ. ಕೌನ್ಸಿಲ್ ಇತ್ತೀಚೆಗೆ ಪಠ್ಯಕ್ರಮ, ಪಠ್ಯಪುಸ್ತಕಗಳು ಮತ್ತು ಕಲಿಕಾ ಸಾಮಗ್ರಿಗಳನ್ನು ಅಂತಿಮಗೊಳಿಸಲು 19 ಸದಸ್ಯರ ರಾಷ್ಟ್ರೀಯ ಪಠ್ಯಕ್ರಮ ಮತ್ತು ಬೋಧನಾ ಕಲಿಕಾ ಸಾಮಗ್ರಿ ಸಮಿತಿಯನ್ನು (ಎನ್‌ಎಸ್‌ಟಿಸಿ) ರಚಿಸಿದೆ.

”ಎಲ್ಲಾ ವಿಷಯಗಳ ಪಠ್ಯಕ್ರಮದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆ (ಐಕೆಎಸ್) ಯನ್ನು ಪರಿಚಯಿಸಲು ಸಮಿತಿಯು ಶಿಫಾರಸು ಮಾಡಿದೆ” ಎಂದು ಐಸಾಕ್ ಹೇಳಿದರು.

ಸಮಿತಿಯ ಇತರ ಸದಸ್ಯರಲ್ಲಿ ಐಸಿಎಚ್‌ಆರ್ ಅಧ್ಯಕ್ಷ ರಘುವೇಂದ್ರ ತನ್ವಾರ್, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಪ್ರಾಧ್ಯಾಪಕಿ ವಂದನಾ ಮಿಶ್ರಾ, ಡೆಕ್ಕನ್ ಕಾಲೇಜ್ ಡೀಮ್ಡ್ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ವಸಂತ ಶಿಂಧೆ ಮತ್ತು ಹರಿಯಾಣ ಸರ್ಕಾರಿ ಶಾಲೆಯಲ್ಲಿ ಸಮಾಜಶಾಸ್ತ್ರ ಬೋಧಿಸುವ ಮಮತಾ ಯಾದವ್ ಇರಲಿದ್ದಾರೆ.

ಇದನ್ನೂ ಓದಿ: ಪುಲ್ವಾಮಾ ದಾಳಿಗೆ ಮೋದಿ ಸರ್ಕಾರದ ಲೋಪವೇ ಕಾರಣ: ರಾಹುಲ್ ಸಂದರ್ಶನದಲ್ಲಿ ಮಲಿಕ್ ಹೇಳಿಕೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read