Homeಅಂತರಾಷ್ಟ್ರೀಯಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

ಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

- Advertisement -
- Advertisement -

ಕಳೆದ ಕೆಲವು ದಶಕಗಳಿಂದ  ನೆರೆಯ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ, ನೇಪಾಳಗಳ ಜೊತೆ ಭಾರತದ ಸಂಬಂಧ ಅಷ್ಟಕಷ್ಟೆ ಇದೆ ಎಂದು ಹೇಳಬಹುದು. ಸಿಯಾಚಿನ್, ಕಾಶ್ಮೀರ, ಕಾಲಾಪಾನಿ, ದೋಕ್ಲಾಂ ಸೇರಿದಂತೆ ವಿವಿಧ ಗಡಿ ಭಾಗಗಳಿಗೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರಗಳ ಜೊತೆ ಭಾರತ ಸಾಕಷ್ಟು ವಿವಾದಗಳಲ್ಲಿ ತೊಡಗಿಕೊಂಡಿದೆ. ಬಾಂಗ್ಲಾದೇಶದ ಜೊತೆ ಭಾರತಕ್ಕೆ ಗಂಗಾ ನದಿ ನೀರಿನ ಹಂಚಿಕೆ ಕುರಿತು ಸಾಕಷ್ಟು ತಕರಾರುಗಳಿವೆ. ಅಕ್ರಮ ವಲಸೆ ಸೇರಿದಂತೆ ಭಾರತ ದಿನನಿತ್ಯ ಅಕ್ಕ ಪಕ್ಕದ ರಾಷ್ಟ್ರಗಳೊಂದಿಗೆ ಕಾದಾಡುತ್ತಲೇ ಇರುವ ಸಂದರ್ಭ ಕಳೆದ ಕೆಲವು ವರ್ಷಗಳಲ್ಲಿ ಸೃಷ್ಟಿಯಾಗಿದೆ. ಈಗ ಭಾರತ ತನ್ನ ವಿದೇಶಾಂಗ ನೀತಿಯನ್ನು ಬದಲಾಯಿಸಿಕೊಳ್ಳಲು ಮುಂದಾಗಿದ್ದು ನೆರೆಯ ರಾಷ್ಟ್ರಗಳ ಜೊತೆ ಸೌಹಾರ್ದ ಸಂಬಂಧವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವುದಾಗಿ ನಿನ್ನೆ ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತ ನೆರೆಯ ರಾಷ್ಟ್ರಗಳ ಜೊತೆಗಿನ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳಲು ಬಯಸುತ್ತದೆ. ನೆರೆಯ ಪಾಕಿಸ್ತಾನದ ವಿಷಯದಲ್ಲೂ ಭಾರತ ಇದೇ ನಿಲುವನ್ನು ತಾಳಿದೆ. ಪಾಕಿಸ್ತಾನ ಕೂಡ ಇದೇ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ವಿದೇಶಿ ಸಂಬಂಧಗಳಿಗೆ ಅಗತ್ಯವಾದ ಪರಸ್ಪರ ವಿಶ್ವಾಸಾರ್ಹತೆಯನ್ನು ಮತ್ತು ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಲು ಪಾಕಿಸ್ತಾನ ಬದ್ಧವಾಗಬೇಕು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಅರಿಂದಾಮ್ ಬಗ್ಚಿ  ಗುರುವಾರ ಜೂನ್ 24 ರಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆ ವಿಚಾರದಲ್ಲಿನ ತನ್ನ ಮೃದುಧೋರಣೆಯನ್ನು ಬದಲಿಸಿಕೊಳ್ಳಬೇಕು. ಯಾವುದೇ ದೇಶದ ವಿರುದ್ಧದ ಸಂಚಿಗೆ ಮತ್ತು ಪಿತೂರಿಗೆ ತನ್ನ ನೆಲದಲ್ಲಿ ಅವಕಾಶವನ್ನು ನೀಡಬಾರದು” ಎಂದು ಅರಿಂದಾಮ್ ಬಗ್ಚಿ ಗುರುವಾರದ ತಮ್ಮ ಸುದ್ದಿ ಗೋಷ್ಠಿಯಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

2016ರ ಭಾರತದ ಪಠಾಣ್ ಕೋಟ್ ವಾಯುನೆಲೆಯ ಮೇಲಿನ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿದೇಶಾಂಗ ಸಂಬಂಧದಲ್ಲಿ ತೀವ್ರ ಬಿರುಕು ಉಂಟಾಗಿದೆ. ಪಠಾಣ್ ಕೋಟ್ ನಂತರದಲ್ಲಿ ಉರಿ ಮತ್ತು ಪುಲ್ವಾಮಾ ದಾಳಿಗಳು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಕ್ಕೆ ತೀವ್ರ ಧಕ್ಕೆಯನ್ನುಂಟುಮಾಡಿದ್ದವು.

ಜಮ್ಮು ಕಾಶ್ಮೀರದ ವಿಭಜನೆಯ ನಂತರವಂತೂ ಅಂತರಾಷ್ಟ್ರೀಯ ವೇದಿಕೆಯಾದ ವಿಶ್ವಸಂಸ್ಥೆಯಲ್ಲಿ ಕೂಡ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಆರೋಪ ಪ್ರತ್ಯಾರೊಪಗಳಲ್ಲಿ ತೊಡಗಿದ್ದವು.

ಕಳೆದ 4 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಬಾಂಧವ್ಯ ಮತ್ತು ಭಯೋತ್ಪಾದನೆ ಒಟ್ಟೊಟ್ಟಿಗೆ ಸಾಗಲು ಸಾಧ್ಯವಿಲ್ಲವೆಂದು ಭಾರತ ಈ ಹಿಂದೆ ಪಾಕಿಸ್ತಾನದ ಜೊತೆ ಮಾತಕತೆಗೆ ಸಿದ್ಧವಾಗಿರಲಿಲ್ಲ. ಈಗ ಭಾರತದ ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ದೊರೆತಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಚೀನಾ, ನೇಪಾಳಗಳೊಂದಿಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಕ್ಕೆ ಭಾರತ ವಿದೇಶಾಂಗ ಇಲಾಖೆ ಕೈ ಹಾಕಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ : ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...