Homeಅಂತರಾಷ್ಟ್ರೀಯಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

ಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

- Advertisement -
- Advertisement -

ಕಳೆದ ಕೆಲವು ದಶಕಗಳಿಂದ  ನೆರೆಯ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ, ನೇಪಾಳಗಳ ಜೊತೆ ಭಾರತದ ಸಂಬಂಧ ಅಷ್ಟಕಷ್ಟೆ ಇದೆ ಎಂದು ಹೇಳಬಹುದು. ಸಿಯಾಚಿನ್, ಕಾಶ್ಮೀರ, ಕಾಲಾಪಾನಿ, ದೋಕ್ಲಾಂ ಸೇರಿದಂತೆ ವಿವಿಧ ಗಡಿ ಭಾಗಗಳಿಗೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರಗಳ ಜೊತೆ ಭಾರತ ಸಾಕಷ್ಟು ವಿವಾದಗಳಲ್ಲಿ ತೊಡಗಿಕೊಂಡಿದೆ. ಬಾಂಗ್ಲಾದೇಶದ ಜೊತೆ ಭಾರತಕ್ಕೆ ಗಂಗಾ ನದಿ ನೀರಿನ ಹಂಚಿಕೆ ಕುರಿತು ಸಾಕಷ್ಟು ತಕರಾರುಗಳಿವೆ. ಅಕ್ರಮ ವಲಸೆ ಸೇರಿದಂತೆ ಭಾರತ ದಿನನಿತ್ಯ ಅಕ್ಕ ಪಕ್ಕದ ರಾಷ್ಟ್ರಗಳೊಂದಿಗೆ ಕಾದಾಡುತ್ತಲೇ ಇರುವ ಸಂದರ್ಭ ಕಳೆದ ಕೆಲವು ವರ್ಷಗಳಲ್ಲಿ ಸೃಷ್ಟಿಯಾಗಿದೆ. ಈಗ ಭಾರತ ತನ್ನ ವಿದೇಶಾಂಗ ನೀತಿಯನ್ನು ಬದಲಾಯಿಸಿಕೊಳ್ಳಲು ಮುಂದಾಗಿದ್ದು ನೆರೆಯ ರಾಷ್ಟ್ರಗಳ ಜೊತೆ ಸೌಹಾರ್ದ ಸಂಬಂಧವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವುದಾಗಿ ನಿನ್ನೆ ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತ ನೆರೆಯ ರಾಷ್ಟ್ರಗಳ ಜೊತೆಗಿನ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳಲು ಬಯಸುತ್ತದೆ. ನೆರೆಯ ಪಾಕಿಸ್ತಾನದ ವಿಷಯದಲ್ಲೂ ಭಾರತ ಇದೇ ನಿಲುವನ್ನು ತಾಳಿದೆ. ಪಾಕಿಸ್ತಾನ ಕೂಡ ಇದೇ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ವಿದೇಶಿ ಸಂಬಂಧಗಳಿಗೆ ಅಗತ್ಯವಾದ ಪರಸ್ಪರ ವಿಶ್ವಾಸಾರ್ಹತೆಯನ್ನು ಮತ್ತು ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಲು ಪಾಕಿಸ್ತಾನ ಬದ್ಧವಾಗಬೇಕು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಅರಿಂದಾಮ್ ಬಗ್ಚಿ  ಗುರುವಾರ ಜೂನ್ 24 ರಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆ ವಿಚಾರದಲ್ಲಿನ ತನ್ನ ಮೃದುಧೋರಣೆಯನ್ನು ಬದಲಿಸಿಕೊಳ್ಳಬೇಕು. ಯಾವುದೇ ದೇಶದ ವಿರುದ್ಧದ ಸಂಚಿಗೆ ಮತ್ತು ಪಿತೂರಿಗೆ ತನ್ನ ನೆಲದಲ್ಲಿ ಅವಕಾಶವನ್ನು ನೀಡಬಾರದು” ಎಂದು ಅರಿಂದಾಮ್ ಬಗ್ಚಿ ಗುರುವಾರದ ತಮ್ಮ ಸುದ್ದಿ ಗೋಷ್ಠಿಯಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

2016ರ ಭಾರತದ ಪಠಾಣ್ ಕೋಟ್ ವಾಯುನೆಲೆಯ ಮೇಲಿನ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿದೇಶಾಂಗ ಸಂಬಂಧದಲ್ಲಿ ತೀವ್ರ ಬಿರುಕು ಉಂಟಾಗಿದೆ. ಪಠಾಣ್ ಕೋಟ್ ನಂತರದಲ್ಲಿ ಉರಿ ಮತ್ತು ಪುಲ್ವಾಮಾ ದಾಳಿಗಳು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಕ್ಕೆ ತೀವ್ರ ಧಕ್ಕೆಯನ್ನುಂಟುಮಾಡಿದ್ದವು.

ಜಮ್ಮು ಕಾಶ್ಮೀರದ ವಿಭಜನೆಯ ನಂತರವಂತೂ ಅಂತರಾಷ್ಟ್ರೀಯ ವೇದಿಕೆಯಾದ ವಿಶ್ವಸಂಸ್ಥೆಯಲ್ಲಿ ಕೂಡ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಆರೋಪ ಪ್ರತ್ಯಾರೊಪಗಳಲ್ಲಿ ತೊಡಗಿದ್ದವು.

ಕಳೆದ 4 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಬಾಂಧವ್ಯ ಮತ್ತು ಭಯೋತ್ಪಾದನೆ ಒಟ್ಟೊಟ್ಟಿಗೆ ಸಾಗಲು ಸಾಧ್ಯವಿಲ್ಲವೆಂದು ಭಾರತ ಈ ಹಿಂದೆ ಪಾಕಿಸ್ತಾನದ ಜೊತೆ ಮಾತಕತೆಗೆ ಸಿದ್ಧವಾಗಿರಲಿಲ್ಲ. ಈಗ ಭಾರತದ ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ದೊರೆತಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಚೀನಾ, ನೇಪಾಳಗಳೊಂದಿಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಕ್ಕೆ ಭಾರತ ವಿದೇಶಾಂಗ ಇಲಾಖೆ ಕೈ ಹಾಕಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ : ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...