Homeಅಂತರಾಷ್ಟ್ರೀಯಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

ಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

- Advertisement -
- Advertisement -

ಕಳೆದ ಕೆಲವು ದಶಕಗಳಿಂದ  ನೆರೆಯ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ, ನೇಪಾಳಗಳ ಜೊತೆ ಭಾರತದ ಸಂಬಂಧ ಅಷ್ಟಕಷ್ಟೆ ಇದೆ ಎಂದು ಹೇಳಬಹುದು. ಸಿಯಾಚಿನ್, ಕಾಶ್ಮೀರ, ಕಾಲಾಪಾನಿ, ದೋಕ್ಲಾಂ ಸೇರಿದಂತೆ ವಿವಿಧ ಗಡಿ ಭಾಗಗಳಿಗೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರಗಳ ಜೊತೆ ಭಾರತ ಸಾಕಷ್ಟು ವಿವಾದಗಳಲ್ಲಿ ತೊಡಗಿಕೊಂಡಿದೆ. ಬಾಂಗ್ಲಾದೇಶದ ಜೊತೆ ಭಾರತಕ್ಕೆ ಗಂಗಾ ನದಿ ನೀರಿನ ಹಂಚಿಕೆ ಕುರಿತು ಸಾಕಷ್ಟು ತಕರಾರುಗಳಿವೆ. ಅಕ್ರಮ ವಲಸೆ ಸೇರಿದಂತೆ ಭಾರತ ದಿನನಿತ್ಯ ಅಕ್ಕ ಪಕ್ಕದ ರಾಷ್ಟ್ರಗಳೊಂದಿಗೆ ಕಾದಾಡುತ್ತಲೇ ಇರುವ ಸಂದರ್ಭ ಕಳೆದ ಕೆಲವು ವರ್ಷಗಳಲ್ಲಿ ಸೃಷ್ಟಿಯಾಗಿದೆ. ಈಗ ಭಾರತ ತನ್ನ ವಿದೇಶಾಂಗ ನೀತಿಯನ್ನು ಬದಲಾಯಿಸಿಕೊಳ್ಳಲು ಮುಂದಾಗಿದ್ದು ನೆರೆಯ ರಾಷ್ಟ್ರಗಳ ಜೊತೆ ಸೌಹಾರ್ದ ಸಂಬಂಧವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವುದಾಗಿ ನಿನ್ನೆ ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತ ನೆರೆಯ ರಾಷ್ಟ್ರಗಳ ಜೊತೆಗಿನ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳಲು ಬಯಸುತ್ತದೆ. ನೆರೆಯ ಪಾಕಿಸ್ತಾನದ ವಿಷಯದಲ್ಲೂ ಭಾರತ ಇದೇ ನಿಲುವನ್ನು ತಾಳಿದೆ. ಪಾಕಿಸ್ತಾನ ಕೂಡ ಇದೇ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ವಿದೇಶಿ ಸಂಬಂಧಗಳಿಗೆ ಅಗತ್ಯವಾದ ಪರಸ್ಪರ ವಿಶ್ವಾಸಾರ್ಹತೆಯನ್ನು ಮತ್ತು ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಲು ಪಾಕಿಸ್ತಾನ ಬದ್ಧವಾಗಬೇಕು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಅರಿಂದಾಮ್ ಬಗ್ಚಿ  ಗುರುವಾರ ಜೂನ್ 24 ರಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆ ವಿಚಾರದಲ್ಲಿನ ತನ್ನ ಮೃದುಧೋರಣೆಯನ್ನು ಬದಲಿಸಿಕೊಳ್ಳಬೇಕು. ಯಾವುದೇ ದೇಶದ ವಿರುದ್ಧದ ಸಂಚಿಗೆ ಮತ್ತು ಪಿತೂರಿಗೆ ತನ್ನ ನೆಲದಲ್ಲಿ ಅವಕಾಶವನ್ನು ನೀಡಬಾರದು” ಎಂದು ಅರಿಂದಾಮ್ ಬಗ್ಚಿ ಗುರುವಾರದ ತಮ್ಮ ಸುದ್ದಿ ಗೋಷ್ಠಿಯಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

2016ರ ಭಾರತದ ಪಠಾಣ್ ಕೋಟ್ ವಾಯುನೆಲೆಯ ಮೇಲಿನ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿದೇಶಾಂಗ ಸಂಬಂಧದಲ್ಲಿ ತೀವ್ರ ಬಿರುಕು ಉಂಟಾಗಿದೆ. ಪಠಾಣ್ ಕೋಟ್ ನಂತರದಲ್ಲಿ ಉರಿ ಮತ್ತು ಪುಲ್ವಾಮಾ ದಾಳಿಗಳು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಕ್ಕೆ ತೀವ್ರ ಧಕ್ಕೆಯನ್ನುಂಟುಮಾಡಿದ್ದವು.

ಜಮ್ಮು ಕಾಶ್ಮೀರದ ವಿಭಜನೆಯ ನಂತರವಂತೂ ಅಂತರಾಷ್ಟ್ರೀಯ ವೇದಿಕೆಯಾದ ವಿಶ್ವಸಂಸ್ಥೆಯಲ್ಲಿ ಕೂಡ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಆರೋಪ ಪ್ರತ್ಯಾರೊಪಗಳಲ್ಲಿ ತೊಡಗಿದ್ದವು.

ಕಳೆದ 4 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಬಾಂಧವ್ಯ ಮತ್ತು ಭಯೋತ್ಪಾದನೆ ಒಟ್ಟೊಟ್ಟಿಗೆ ಸಾಗಲು ಸಾಧ್ಯವಿಲ್ಲವೆಂದು ಭಾರತ ಈ ಹಿಂದೆ ಪಾಕಿಸ್ತಾನದ ಜೊತೆ ಮಾತಕತೆಗೆ ಸಿದ್ಧವಾಗಿರಲಿಲ್ಲ. ಈಗ ಭಾರತದ ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ದೊರೆತಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಚೀನಾ, ನೇಪಾಳಗಳೊಂದಿಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಕ್ಕೆ ಭಾರತ ವಿದೇಶಾಂಗ ಇಲಾಖೆ ಕೈ ಹಾಕಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ : ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...