Homeಮುಖಪುಟಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

- Advertisement -
- Advertisement -

2024ರ ಜಾಗತಿಕ ಸಂತೋಷ ಸೂಚ್ಯಂಕದಲ್ಲಿ ಭಾರತವು 143 ರಾಷ್ಟ್ರಗಳಲ್ಲಿ 126ನೇ ಸ್ಥಾನದಲ್ಲಿದ್ದು, ಫಿನ್‌ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಹೊರಹೊಮ್ಮಿದೆ.

ಸತತ ಏಳನೇ ವರ್ಷವೂ ಫಿನ್‌ಲ್ಯಾಂಡ್ ವಿಶ್ವದಲ್ಲೇ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಡೆನ್ಮಾರ್ಕ್, ಐಸ್ಲ್ಯಾಂಡ್, ಸ್ವೀಡನ್, ಇಸ್ರೇಲ್, ನೆದರ್ಲ್ಯಾಂಡ್ಸ್, ನಾರ್ವೆ, ಲಕ್ಸೆಂಬರ್ಗ್, ಸ್ವಿಟ್ಜರ್ಲೆಂಡ್ ಮತ್ತು ಆಸ್ಟ್ರೇಲಿಯಾ ಇತರ ಅಗ್ರ 10 ದೇಶಗಳ ಪಟ್ಟಿಯಲ್ಲಿದೆ.

ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಸಂತೋಷದ ದಿನವನ್ನು ಗುರುತಿಸಲು ಪ್ರಕಟಿಸಿದ ಸಂಶೋಧನಾ ವರದಿ  ಪ್ರಕಾರ, ಲಿಬಿಯಾ, ಇರಾಕ್, ಪ್ಯಾಲೆಸ್ತೀನ್‌ನಂತಹ ದೇಶಗಳ ಹಿಂದೆ ಭಾರತವು ಪಟ್ಟಿಯಲ್ಲಿ 126ನೇ ಸ್ಥಾನದಲ್ಲಿದೆ. ಆಕ್ಸ್‌ಫರ್ಡ್ ವೆಲ್‌ಬಿಯಿಂಗ್‌ ರಿಸರ್ಚ್‌ ಸೆಂಟರ್‌ (Oxford Wellbeing Research Centre), ಯುಎನ್ ಸಸ್ಟೆನೇಬಲ್ ಡೆವಲಪ್‌ಮೆಂಟ್‌ ಶೊಲ್ಯೂಷನ್‌ ನೆಟ್‌ವರ್ಕ್ (UN Sustainable Development Solutions Network) ಮತ್ತು WHRನ ಸಂಪಾದಕೀಯ ಮಂಡಳಿ ಒಂದಾಗಿ ಈ ವರದಿಯನ್ನು ಸಿದ್ದಪಡಿಸಿದೆ.

ಭಾರತದಲ್ಲಿ ಯುವಕರು ಸಂತೋಷದಿಂದ ಇದ್ದಾರೆ, ಆದರೆ ಕೆಳ ಮಧ್ಯಮ ವಯಸ್ಕರು ಕಡಿಮೆ ಸಂತೋಷವನ್ನು ಹೊಂದಿದ್ದಾರೆ. 2012ರಲ್ಲಿ ಮೊದಲ ಬಾರಿಗೆ ವಿಶ್ವ ಸಂತೋಷದ ವರದಿಯನ್ನು ಪ್ರಕಟಿಸಿದ ನಂತರ ಅಮೆರಿಕ ಇದೇ ಮೊದಲ ಬಾರಿಗೆ 20ನೇ ಸ್ಥಾನದಿಂದ 23ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಅಫ್ಘಾನಿಸ್ತಾನವು ಒಟ್ಟಾರೆ ಶ್ರೇಯಾಂಕದಲ್ಲಿ ವಿಶ್ವದ ‘ಅತೃಪ್ತಿಕರ’ ರಾಷ್ಟ್ರವಾಗಿ ಕೆಳ ಭಾಗದಲ್ಲಿದೆ, ಈ ಪಟ್ಟಿಯಲ್ಲಿ ಪಾಕಿಸ್ತಾನ 108ನೇ ಸ್ಥಾನದಲ್ಲಿದೆ. ಪೂರ್ವ ಯುರೋಪಿಯನ್ ದೇಶಗಳಾದ ಸರ್ಬಿಯಾ, ಬಲ್ಗೇರಿಯಾ ದೇಶಗಳು ತಮ್ಮ ಶ್ರೇಯಾಂಕವನ್ನು ಸುಧಾರಿಸಿಕೊಂಡರೆ ಅಫ್ಘಾನಿಸ್ತಾನ, ಲೆಬನಾನ್ ಮತ್ತು ಜೋರ್ಡಾನ್ ದೇಶಗಳ ಶ್ರೇಯಾಂಕ ತೀವ್ರವಾಗಿ ಕುಸಿದಿದೆ.

ಭಾರತದಲ್ಲಿ ವೃದ್ಧಾಪ್ಯದಲ್ಲಿ ವಯಸ್ಸಾದ ಪುರುಷರು ವಯಸ್ಸಾದ ಮಹಿಳೆಯರಿಗಿಂತ ಜೀವನದಲ್ಲಿ ಹೆಚ್ಚು ತೃಪ್ತರಾಗಿದ್ದಾರೆ ಆದರೆ ಎಲ್ಲಾ ಇತರ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳುವಾಗ ವಯಸ್ಸಾದ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಜೀವನ ತೃಪ್ತಿಯನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಭಾರತದಲ್ಲಿ, ಮಾದ್ಯಮಿಕ ಅಥವಾ ಉನ್ನತ ಶಿಕ್ಷಣವನ್ನು ಹೊಂದಿರುವ ಹಿರಿಯ ವಯಸ್ಕರು ಮತ್ತು ಸವರ್ಣೀಯ ಜಾತಿಗರು ಔಪಚಾರಿಕ ಶಿಕ್ಷಣವಿಲ್ಲದ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜನರಿಗಿಂತ ಹೆಚ್ಚಿನ ಜೀವನ ತೃಪ್ತಿಯನ್ನು ಪಡೆಯುತ್ತಾರೆ.

ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ವಯಸ್ಕ ಜನಸಂಖ್ಯೆಯು ಭಾರತದಲ್ಲಿದೆ. 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 140 ಮಿಲಿಯನ್ ಭಾರತೀಯರಿದ್ದಾರೆ. ಹೆಚ್ಚಿನ ವಯಸ್ಸಿನ ಭಾರತೀಯರ ಸರಾಸರಿ ಬೆಳವಣಿಗೆ ದರವು ಒಟ್ಟಾರೆ ಜನಸಂಖ್ಯೆಯ ಬೆಳವಣಿಗೆಯ ದರಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...