Homeಮುಖಪುಟಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

- Advertisement -
- Advertisement -

2024ರ ಜಾಗತಿಕ ಸಂತೋಷ ಸೂಚ್ಯಂಕದಲ್ಲಿ ಭಾರತವು 143 ರಾಷ್ಟ್ರಗಳಲ್ಲಿ 126ನೇ ಸ್ಥಾನದಲ್ಲಿದ್ದು, ಫಿನ್‌ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಹೊರಹೊಮ್ಮಿದೆ.

ಸತತ ಏಳನೇ ವರ್ಷವೂ ಫಿನ್‌ಲ್ಯಾಂಡ್ ವಿಶ್ವದಲ್ಲೇ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಡೆನ್ಮಾರ್ಕ್, ಐಸ್ಲ್ಯಾಂಡ್, ಸ್ವೀಡನ್, ಇಸ್ರೇಲ್, ನೆದರ್ಲ್ಯಾಂಡ್ಸ್, ನಾರ್ವೆ, ಲಕ್ಸೆಂಬರ್ಗ್, ಸ್ವಿಟ್ಜರ್ಲೆಂಡ್ ಮತ್ತು ಆಸ್ಟ್ರೇಲಿಯಾ ಇತರ ಅಗ್ರ 10 ದೇಶಗಳ ಪಟ್ಟಿಯಲ್ಲಿದೆ.

ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಸಂತೋಷದ ದಿನವನ್ನು ಗುರುತಿಸಲು ಪ್ರಕಟಿಸಿದ ಸಂಶೋಧನಾ ವರದಿ  ಪ್ರಕಾರ, ಲಿಬಿಯಾ, ಇರಾಕ್, ಪ್ಯಾಲೆಸ್ತೀನ್‌ನಂತಹ ದೇಶಗಳ ಹಿಂದೆ ಭಾರತವು ಪಟ್ಟಿಯಲ್ಲಿ 126ನೇ ಸ್ಥಾನದಲ್ಲಿದೆ. ಆಕ್ಸ್‌ಫರ್ಡ್ ವೆಲ್‌ಬಿಯಿಂಗ್‌ ರಿಸರ್ಚ್‌ ಸೆಂಟರ್‌ (Oxford Wellbeing Research Centre), ಯುಎನ್ ಸಸ್ಟೆನೇಬಲ್ ಡೆವಲಪ್‌ಮೆಂಟ್‌ ಶೊಲ್ಯೂಷನ್‌ ನೆಟ್‌ವರ್ಕ್ (UN Sustainable Development Solutions Network) ಮತ್ತು WHRನ ಸಂಪಾದಕೀಯ ಮಂಡಳಿ ಒಂದಾಗಿ ಈ ವರದಿಯನ್ನು ಸಿದ್ದಪಡಿಸಿದೆ.

ಭಾರತದಲ್ಲಿ ಯುವಕರು ಸಂತೋಷದಿಂದ ಇದ್ದಾರೆ, ಆದರೆ ಕೆಳ ಮಧ್ಯಮ ವಯಸ್ಕರು ಕಡಿಮೆ ಸಂತೋಷವನ್ನು ಹೊಂದಿದ್ದಾರೆ. 2012ರಲ್ಲಿ ಮೊದಲ ಬಾರಿಗೆ ವಿಶ್ವ ಸಂತೋಷದ ವರದಿಯನ್ನು ಪ್ರಕಟಿಸಿದ ನಂತರ ಅಮೆರಿಕ ಇದೇ ಮೊದಲ ಬಾರಿಗೆ 20ನೇ ಸ್ಥಾನದಿಂದ 23ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಅಫ್ಘಾನಿಸ್ತಾನವು ಒಟ್ಟಾರೆ ಶ್ರೇಯಾಂಕದಲ್ಲಿ ವಿಶ್ವದ ‘ಅತೃಪ್ತಿಕರ’ ರಾಷ್ಟ್ರವಾಗಿ ಕೆಳ ಭಾಗದಲ್ಲಿದೆ, ಈ ಪಟ್ಟಿಯಲ್ಲಿ ಪಾಕಿಸ್ತಾನ 108ನೇ ಸ್ಥಾನದಲ್ಲಿದೆ. ಪೂರ್ವ ಯುರೋಪಿಯನ್ ದೇಶಗಳಾದ ಸರ್ಬಿಯಾ, ಬಲ್ಗೇರಿಯಾ ದೇಶಗಳು ತಮ್ಮ ಶ್ರೇಯಾಂಕವನ್ನು ಸುಧಾರಿಸಿಕೊಂಡರೆ ಅಫ್ಘಾನಿಸ್ತಾನ, ಲೆಬನಾನ್ ಮತ್ತು ಜೋರ್ಡಾನ್ ದೇಶಗಳ ಶ್ರೇಯಾಂಕ ತೀವ್ರವಾಗಿ ಕುಸಿದಿದೆ.

ಭಾರತದಲ್ಲಿ ವೃದ್ಧಾಪ್ಯದಲ್ಲಿ ವಯಸ್ಸಾದ ಪುರುಷರು ವಯಸ್ಸಾದ ಮಹಿಳೆಯರಿಗಿಂತ ಜೀವನದಲ್ಲಿ ಹೆಚ್ಚು ತೃಪ್ತರಾಗಿದ್ದಾರೆ ಆದರೆ ಎಲ್ಲಾ ಇತರ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳುವಾಗ ವಯಸ್ಸಾದ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಜೀವನ ತೃಪ್ತಿಯನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಭಾರತದಲ್ಲಿ, ಮಾದ್ಯಮಿಕ ಅಥವಾ ಉನ್ನತ ಶಿಕ್ಷಣವನ್ನು ಹೊಂದಿರುವ ಹಿರಿಯ ವಯಸ್ಕರು ಮತ್ತು ಸವರ್ಣೀಯ ಜಾತಿಗರು ಔಪಚಾರಿಕ ಶಿಕ್ಷಣವಿಲ್ಲದ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜನರಿಗಿಂತ ಹೆಚ್ಚಿನ ಜೀವನ ತೃಪ್ತಿಯನ್ನು ಪಡೆಯುತ್ತಾರೆ.

ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ವಯಸ್ಕ ಜನಸಂಖ್ಯೆಯು ಭಾರತದಲ್ಲಿದೆ. 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 140 ಮಿಲಿಯನ್ ಭಾರತೀಯರಿದ್ದಾರೆ. ಹೆಚ್ಚಿನ ವಯಸ್ಸಿನ ಭಾರತೀಯರ ಸರಾಸರಿ ಬೆಳವಣಿಗೆ ದರವು ಒಟ್ಟಾರೆ ಜನಸಂಖ್ಯೆಯ ಬೆಳವಣಿಗೆಯ ದರಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...