Homeಮುಖಪುಟಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

ಜಾಗತಿಕ ಸಂತೋಷ ಸೂಚ್ಯಂಕದಲ್ಲಿ 126ನೇ ಸ್ಥಾನಕ್ಕಿಳಿದ ಭಾರತ

- Advertisement -
- Advertisement -

2024ರ ಜಾಗತಿಕ ಸಂತೋಷ ಸೂಚ್ಯಂಕದಲ್ಲಿ ಭಾರತವು 143 ರಾಷ್ಟ್ರಗಳಲ್ಲಿ 126ನೇ ಸ್ಥಾನದಲ್ಲಿದ್ದು, ಫಿನ್‌ಲ್ಯಾಂಡ್ ವಿಶ್ವದ ಅತ್ಯಂತ ಸಂತೋಷದಾಯಕ ದೇಶವಾಗಿ ಹೊರಹೊಮ್ಮಿದೆ.

ಸತತ ಏಳನೇ ವರ್ಷವೂ ಫಿನ್‌ಲ್ಯಾಂಡ್ ವಿಶ್ವದಲ್ಲೇ ಅಗ್ರಸ್ಥಾನವನ್ನು ಪಡೆದುಕೊಂಡಿದ್ದು, ಡೆನ್ಮಾರ್ಕ್, ಐಸ್ಲ್ಯಾಂಡ್, ಸ್ವೀಡನ್, ಇಸ್ರೇಲ್, ನೆದರ್ಲ್ಯಾಂಡ್ಸ್, ನಾರ್ವೆ, ಲಕ್ಸೆಂಬರ್ಗ್, ಸ್ವಿಟ್ಜರ್ಲೆಂಡ್ ಮತ್ತು ಆಸ್ಟ್ರೇಲಿಯಾ ಇತರ ಅಗ್ರ 10 ದೇಶಗಳ ಪಟ್ಟಿಯಲ್ಲಿದೆ.

ವಿಶ್ವಸಂಸ್ಥೆಯ ಅಂತರಾಷ್ಟ್ರೀಯ ಸಂತೋಷದ ದಿನವನ್ನು ಗುರುತಿಸಲು ಪ್ರಕಟಿಸಿದ ಸಂಶೋಧನಾ ವರದಿ  ಪ್ರಕಾರ, ಲಿಬಿಯಾ, ಇರಾಕ್, ಪ್ಯಾಲೆಸ್ತೀನ್‌ನಂತಹ ದೇಶಗಳ ಹಿಂದೆ ಭಾರತವು ಪಟ್ಟಿಯಲ್ಲಿ 126ನೇ ಸ್ಥಾನದಲ್ಲಿದೆ. ಆಕ್ಸ್‌ಫರ್ಡ್ ವೆಲ್‌ಬಿಯಿಂಗ್‌ ರಿಸರ್ಚ್‌ ಸೆಂಟರ್‌ (Oxford Wellbeing Research Centre), ಯುಎನ್ ಸಸ್ಟೆನೇಬಲ್ ಡೆವಲಪ್‌ಮೆಂಟ್‌ ಶೊಲ್ಯೂಷನ್‌ ನೆಟ್‌ವರ್ಕ್ (UN Sustainable Development Solutions Network) ಮತ್ತು WHRನ ಸಂಪಾದಕೀಯ ಮಂಡಳಿ ಒಂದಾಗಿ ಈ ವರದಿಯನ್ನು ಸಿದ್ದಪಡಿಸಿದೆ.

ಭಾರತದಲ್ಲಿ ಯುವಕರು ಸಂತೋಷದಿಂದ ಇದ್ದಾರೆ, ಆದರೆ ಕೆಳ ಮಧ್ಯಮ ವಯಸ್ಕರು ಕಡಿಮೆ ಸಂತೋಷವನ್ನು ಹೊಂದಿದ್ದಾರೆ. 2012ರಲ್ಲಿ ಮೊದಲ ಬಾರಿಗೆ ವಿಶ್ವ ಸಂತೋಷದ ವರದಿಯನ್ನು ಪ್ರಕಟಿಸಿದ ನಂತರ ಅಮೆರಿಕ ಇದೇ ಮೊದಲ ಬಾರಿಗೆ 20ನೇ ಸ್ಥಾನದಿಂದ 23ನೇ ಸ್ಥಾನಕ್ಕೆ ತಳ್ಳಲ್ಪಟ್ಟಿದೆ. ಅಫ್ಘಾನಿಸ್ತಾನವು ಒಟ್ಟಾರೆ ಶ್ರೇಯಾಂಕದಲ್ಲಿ ವಿಶ್ವದ ‘ಅತೃಪ್ತಿಕರ’ ರಾಷ್ಟ್ರವಾಗಿ ಕೆಳ ಭಾಗದಲ್ಲಿದೆ, ಈ ಪಟ್ಟಿಯಲ್ಲಿ ಪಾಕಿಸ್ತಾನ 108ನೇ ಸ್ಥಾನದಲ್ಲಿದೆ. ಪೂರ್ವ ಯುರೋಪಿಯನ್ ದೇಶಗಳಾದ ಸರ್ಬಿಯಾ, ಬಲ್ಗೇರಿಯಾ ದೇಶಗಳು ತಮ್ಮ ಶ್ರೇಯಾಂಕವನ್ನು ಸುಧಾರಿಸಿಕೊಂಡರೆ ಅಫ್ಘಾನಿಸ್ತಾನ, ಲೆಬನಾನ್ ಮತ್ತು ಜೋರ್ಡಾನ್ ದೇಶಗಳ ಶ್ರೇಯಾಂಕ ತೀವ್ರವಾಗಿ ಕುಸಿದಿದೆ.

ಭಾರತದಲ್ಲಿ ವೃದ್ಧಾಪ್ಯದಲ್ಲಿ ವಯಸ್ಸಾದ ಪುರುಷರು ವಯಸ್ಸಾದ ಮಹಿಳೆಯರಿಗಿಂತ ಜೀವನದಲ್ಲಿ ಹೆಚ್ಚು ತೃಪ್ತರಾಗಿದ್ದಾರೆ ಆದರೆ ಎಲ್ಲಾ ಇತರ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳುವಾಗ ವಯಸ್ಸಾದ ಮಹಿಳೆಯರು ಪುರುಷರಿಗಿಂತ ಹೆಚ್ಚಿನ ಜೀವನ ತೃಪ್ತಿಯನ್ನು ಹೊಂದಿದ್ದಾರೆ ಎಂದು ವರದಿ ಹೇಳಿದೆ.

ಭಾರತದಲ್ಲಿ, ಮಾದ್ಯಮಿಕ ಅಥವಾ ಉನ್ನತ ಶಿಕ್ಷಣವನ್ನು ಹೊಂದಿರುವ ಹಿರಿಯ ವಯಸ್ಕರು ಮತ್ತು ಸವರ್ಣೀಯ ಜಾತಿಗರು ಔಪಚಾರಿಕ ಶಿಕ್ಷಣವಿಲ್ಲದ ಮತ್ತು ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಜನರಿಗಿಂತ ಹೆಚ್ಚಿನ ಜೀವನ ತೃಪ್ತಿಯನ್ನು ಪಡೆಯುತ್ತಾರೆ.

ವಿಶ್ವದಲ್ಲೇ ಎರಡನೇ ಅತಿ ಹೆಚ್ಚು ವಯಸ್ಕ ಜನಸಂಖ್ಯೆಯು ಭಾರತದಲ್ಲಿದೆ. 60 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ 140 ಮಿಲಿಯನ್ ಭಾರತೀಯರಿದ್ದಾರೆ. ಹೆಚ್ಚಿನ ವಯಸ್ಸಿನ ಭಾರತೀಯರ ಸರಾಸರಿ ಬೆಳವಣಿಗೆ ದರವು ಒಟ್ಟಾರೆ ಜನಸಂಖ್ಯೆಯ ಬೆಳವಣಿಗೆಯ ದರಕ್ಕಿಂತ ಮೂರು ಪಟ್ಟು ಹೆಚ್ಚಾಗಿದೆ ಎಂದು ವರದಿಯು ಉಲ್ಲೇಖಿಸಿದೆ.

ಇದನ್ನು ಓದಿ: ಟಿಎಂ ಕೃಷ್ಣಗೆ ‘ಸಂಗೀತ ಕಲಾನಿಧಿ’ ಪ್ರಶಸ್ತಿಗೆ ವಿರೋಧ: ಬಲಪಂಥೀಯ ದ್ವೇಷದ ಭಾಗ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...