Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...