Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...