Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...