Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...