Homeಮುಖಪುಟಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

ಇರಾನ್-ಇಸ್ರೇಲ್ ಕದನವಿರಾಮವನ್ನು ಸ್ವಾಗತಿಸಿದ ಭಾರತ; ಅಮೆರಿಕ ಮತ್ತು ಕತಾರ್ ಪಾತ್ರಕ್ಕೆ ಮೆಚ್ಚುಗೆ

- Advertisement -
- Advertisement -

ಹೊಸದಿಲ್ಲಿ: ಇರಾನ್ ಮತ್ತು ಇಸ್ರೇಲ್ ನಡುವೆ ಕದನವಿರಾಮ ಏರ್ಪಟ್ಟಿರುವುದನ್ನು ಭಾರತ ಸ್ವಾಗತಿಸಿದೆ. ಈ ಕದನವಿರಾಮಕ್ಕೆ ಅಮೆರಿಕ ಮತ್ತು ಕತಾರ್ ವಹಿಸಿದ ಪಾತ್ರವನ್ನು ಶ್ಲಾಘಿಸುವುದಾಗಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮಂಗಳವಾರ (ಜೂನ್ 24) ಸಂಜೆ ತಿಳಿಸಿದೆ.

ಆದಾಗ್ಯೂ, ಈ ಪ್ರದೇಶದ ಒಟ್ಟಾರೆ ಭದ್ರತೆ ಕುರಿತು ಭಾರತಕ್ಕೆ ಇನ್ನೂ ಕಳವಳವಿದೆ ಎಂದು ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.

ಎರಡು ದಿನಗಳ ಹಿಂದೆ ಇರಾನಿನ ಪರಮಾಣು ಘಟಕಗಳ ಮೇಲೆ ಅಮೆರಿಕ ದಾಳಿ ನಡೆಸಿದ ಪ್ರತಿಕ್ರಿಯೆಯಾಗಿ, ಇರಾನ್ ಕತಾರ್‌ನಲ್ಲಿರುವ ಅಮೆರಿಕನ್ ಮಿಲಿಟರಿ ನೆಲೆಯ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿತ್ತು. ಇದರ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಂಗಳವಾರ ಮುಂಜಾನೆ (ಭಾರತೀಯ ಕಾಲಮಾನದ ಪ್ರಕಾರ) ಇಸ್ರೇಲ್ ಮತ್ತು ಇರಾನ್ ನಡುವೆ “12 ದಿನಗಳ ಯುದ್ಧ” ಕೊನೆಗೊಳ್ಳಲಿದ್ದು, ಕದನವಿರಾಮಕ್ಕೆ ಮುಂದಾಗಲಿವೆ ಎಂದು ಘೋಷಿಸಿದರು. ಕತಾರ್‌ನ ಪ್ರಧಾನ ಮಂತ್ರಿ ಶೇಖ್ ಮೊಹಮ್ಮದ್ ಬಿನ್ ಅಬ್ದುಲ್ ರಹಮಾನ್ ಅಲ್ ಥಾನಿ ಅವರು, ಅಮೆರಿಕದ ಕೋರಿಕೆಯ ಮೇರೆಗೆ ತಾವು ಇರಾನ್‌ನೊಂದಿಗೆ ಸಂಪರ್ಕ ಸಾಧಿಸಿದ್ದೇವೆ ಎಂದು ದೃಢಪಡಿಸಿದ್ದಾರೆ.

ಭಾರತವು ತನ್ನ ಹೇಳಿಕೆಯಲ್ಲಿ, ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷಗಳನ್ನು ಬಗೆಹರಿಸಲು “ಸಂವಾದ ಮತ್ತು ರಾಜತಾಂತ್ರಿಕತೆಗೆ ಬೇರೆ ಪರ್ಯಾಯವಿಲ್ಲ” ಎಂದು ಪುನರುಚ್ಚರಿಸಿದೆ. ಈ ಪ್ರಯತ್ನಗಳಲ್ಲಿ ತನ್ನ ಪಾತ್ರವನ್ನು ನಿರ್ವಹಿಸಲು ಭಾರತ ಸಿದ್ಧವಾಗಿದೆ ಎಂದು ಹೇಳಿದ್ದು, ಎಲ್ಲಾ ಸಂಬಂಧಿತ ಪಕ್ಷಗಳು ಶಾಂತಿ ನೆಲಸುವತ್ತ ಕೆಲಸ ಮಾಡುತ್ತವೆ ಎಂದು ಆಶಿಸಿದೆ.

ಆದಾಗ್ಯೂ, ಕದನವಿರಾಮ ಜಾರಿಗೆ ಬರಬೇಕಿದ್ದ ಕೆಲವೇ ಕ್ಷಣಗಳಲ್ಲಿ ಅದರ ಕುರಿತ ವರದಿ ಅಸ್ಪಷ್ಟವಾಯಿತು. ಇರಾನ್ ತನ್ನ ಮೇಲೆ ಕ್ಷಿಪಣಿಗಳನ್ನು ಉಡಾಯಿಸಿದೆ ಎಂದು ಇಸ್ರೇಲ್ ಆರೋಪಿಸಿತು. ಇದಕ್ಕೆ ಪ್ರತೀಕಾರವಾಗಿ, ಇರಾನ್ ಬಳಿಯ ರೇಡಾರ್ ಸೌಲಭ್ಯವನ್ನು ನಾಶಪಡಿಸಿರುವುದಾಗಿ ಇಸ್ರೇಲ್ ಹೇಳಿಕೊಂಡಿತು. ಆದರೆ, ಇರಾನ್ ಕದನವಿರಾಮವನ್ನು ಉಲ್ಲಂಘಿಸಿರುವುದನ್ನು ನಿರಾಕರಿಸಿದೆ.

ಟ್ರಂಪ್ ಮತ್ತು ಇಸ್ರೇಲಿ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ನಡುವಿನ ಮಾತುಕತೆಯ ನಂತರ ಇಸ್ರೇಲ್ ಇರಾನ್ ಮೇಲೆ ಹೆಚ್ಚುವರಿ ದಾಳಿಗಳಿಂದ ದೂರ ಉಳಿದಿದೆ ಎಂದು ನೆತನ್ಯಾಹು ಅವರ ಕಚೇರಿ ಮೂಲಗಳು ತಿಳಿಸಿವೆ.

ಆದರೆ, ಟ್ರಂಪ್ ಅವರು ಎರಡೂ ದೇಶಗಳು ಕದನವಿರಾಮವನ್ನು ಉಲ್ಲಂಘಿಸಿವೆ ಎಂದು ಹೇಳಿದ್ದಾರೆ. ಒಪ್ಪಂದವು ಜಾರಿಗೆ ಬಂದ ತಕ್ಷಣ ಅಂದರೆ ಅದು ಸಂಪೂರ್ಣವಾಗಿ ಜಾರಿಗೆ ಬರುವ ಮೊದಲು ಇಸ್ರೇಲ್ “ನಾನು ಹಿಂದೆಂದೂ ನೋಡಿರದಂತಹ ಅತ್ಯಂತ ದೊಡ್ಡ ಪ್ರಮಾಣದ ಬಾಂಬ್‌ಗಳನ್ನು” ಹಾಕಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

“ಇಸ್ರೇಲ್‌ನ ಇಂತಹ ನಡೆ ಬಗ್ಗೆ ನಾನು ಸಂತೋಷವಾಗಿಲ್ಲ” ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು. ಇರಾನ್ ಬಗ್ಗೆ ಅತೃಪ್ತಿ ಹೊಂದಿದ್ದರೂ, ಇಸ್ರೇಲ್ ಬಗ್ಗೆ ತಮಗೆ ವಿಶೇಷವಾಗಿ ಬೇಸರವಾಗಿದೆ ಎಂದು ಅವರು ಹೇಳಿದರು.

“ಈ ಎರಡು ದೇಶಗಳು ಎಷ್ಟು ಸಮಯದಿಂದ ಮತ್ತು ಎಷ್ಟು ಕಠಿಣವಾಗಿ ಹೋರಾಡುತ್ತಿವೆ ಎಂದರೆ ಅವು ಏನು ಮಾಡುತ್ತಿವೆ ಎಂದು ಅವರಿಗೆ ತಿಳಿದಿಲ್ಲ. ನಿಮಗೆ ಅದು ಅರ್ಥವಾಗುತ್ತಿದೆಯೇ?” ಎಂದು ಟ್ರಂಪ್ ಸುದ್ದಿಗಾರರಿಗೆ ಪ್ರಶ್ನಿಸಿದ್ದಾರೆ.

ನಂತರ ಅವರು, “ಇಸ್ರೇಲ್ ಇರಾನ್ ಮೇಲೆ ದಾಳಿ ಮಾಡುವುದಿಲ್ಲ. ಎಲ್ಲಾ ವಿಮಾನಗಳು ಹಿಂದಿರುಗಿ ಹೋಗುತ್ತವೆ. ಯಾರಿಗೂ ನೋವುಂಟು ಮಾಡುವುದಿಲ್ಲ, ಕದನವಿರಾಮ ಜಾರಿಯಲ್ಲಿದೆ” ಎಂದು ಸ್ಪಷ್ಟಪಡಿಸಿದರು.

ಇರಾನ್ ಮತ್ತು ಇಸ್ರೇಲ್ ನಡುವಿನ ಈ ಸಂಘರ್ಷವು ಜೂನ್ 13ರಂದು ಪ್ರಾರಂಭವಾಗಿದೆ. ಇರಾನ್ ಅಣು ಶಸ್ತ್ರಾಸ್ತ್ರಗಳನ್ನು ಪಡೆಯುವ ಹಂಚಿನಲ್ಲಿತ್ತು ಎಂದು ಆರೋಪಿಸಿ ಇಸ್ರೇಲ್ ಇರಾನ್‌ನಲ್ಲಿ ಮಿಲಿಟರಿ ಮತ್ತು ಅಣು ಗುರಿಗಳ ಮೇಲೆ ದಾಳಿ ಮಾಡಿದೆ. ಇದು ತನ್ನ ಅಸ್ತಿತ್ವಕ್ಕೆ ಬೆದರಿಕೆ ಎಂದು ಇಸ್ರೇಲ್ ಹೇಳಿದೆ.

ಜೂನ್ 13ರ ಘಟನೆಯ ನಂತರ, ಉಭಯ ದೇಶಗಳು ಪರಸ್ಪರ ಕ್ಷಿಪಣಿಗಳನ್ನು ಉಡಾಯಿಸಿದವು. ಎರಡೂ ಕಡೆ ಸಾವುಗಳು ಸಂಭವಿಸಿದವು. ಅಮೆರಿಕವು ಭಾನುವಾರದಂದು ಇರಾನ್‌ನಲ್ಲಿರುವ ಮೂರು ಪ್ರಮುಖ ಪರಮಾಣು ಕೇಂದ್ರಗಳ ಮೇಲೆ ಬಾಂಬ್ ದಾಳಿ ಮಾಡುವ ಮೂಲಕ ಯುದ್ಧಕ್ಕೆ ಪ್ರವೇಶಿಸಿತು. ಟ್ರಂಪ್ ಈ ಗುರಿಗಳನ್ನು ‘ಸಂಪೂರ್ಣವಾಗಿ ನಾಶಪಡಿಸಲಾಗಿದೆ’ ಎಂದು ಹೇಳಿಕೊಂಡಿದ್ದಾರೆ.

ತನ್ನ ಪರಮಾಣು ಕೇಂದ್ರಗಳ ಮೇಲಿನ ಅಮೆರಿಕ ದಾಳಿಯ ಪ್ರತಿಕ್ರಿಯೆಯಾಗಿ, ಇರಾನ್‌ ದೇಶವು ಕತಾರ್‌ನಲ್ಲಿರುವ ಅಮೆರಿಕದ ಅಲ್ ಉದೈಡ್ ವಾಯುನೆಲೆಯ ಮೇಲೆ ಸೋಮವಾರದಂದು ಕ್ಷಿಪಣಿ ದಾಳಿಯನ್ನು ನಡೆಸಿತು.

Latest Update: ಕದನ ವಿರಾಮಕ್ಕೆ ಒಪ್ಪಿಕೊಂಡ ಇರಾನ್-ಇಸ್ರೇಲ್; ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...