Homeಸಿನಿಮಾಕ್ರೀಡೆಭಾರತ - ವೆಸ್ಟ್ ಇಂಡೀಸ್ ಮೂರನೇ ಟಿ20 ಪಂದ್ಯವೂ ಒಂದೂವರೆ ತಾಸು ವಿಳಂಬ: ಕಾರಣ?

ಭಾರತ – ವೆಸ್ಟ್ ಇಂಡೀಸ್ ಮೂರನೇ ಟಿ20 ಪಂದ್ಯವೂ ಒಂದೂವರೆ ತಾಸು ವಿಳಂಬ: ಕಾರಣ?

- Advertisement -
- Advertisement -

ವಾರ್ನರ್ ಪಾರ್ಕ್‌ನಲ್ಲಿರುವ ಬ್ರಿಯಾನ್ ಲಾರಾ ಸ್ಟೇಡಿಯಂ, ಬ್ಯಾಸೆಟೆರೆ, ಸೇಂಟ್ ಕಿಟ್ಸ್‌ನಲ್ಲಿ ನಿನ್ನೆ ನಡೆದ ಭಾರತ – ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯ ಬರೋಬ್ಬರಿ 3 ಗಂಟೆಗಳ ಕಾಲ ತಡವಾಗಿ ನಡೆದಿತ್ತು. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಬೇಕಿದ್ದ ಪಂದ್ಯ ಕೊನೆಗೆ ರಾತ್ರಿ 11 ಗಂಟೆಗೆ ಆರಂಭವಾಗಿತ್ತು. ಅದಕ್ಕೆ ಕಾರಣ ಮೊದಲ ಪಂದ್ಯ ನಡೆದ ಟ್ರಿನಿಡಾಡ್‌ ನಿಂದ ಎರಡನೇ ಪಂದ್ಯ ನಡೆದ ಸ್ಥಳಕ್ಕೆ ಕ್ರಿಕೆಟ್ ಸಾಮಾಗ್ರಿಗಲು ತಲುಪುವುದು ತಡವಾಗಿತ್ತು. ಹಾಗಾಗಿ ಮೊದಲು 2 ಗಂಟೆ ಕಾಲ ತಡವಾಗಿ ಆರಂಭವಾಗುವುದಾಗಿ ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ತಿಳಿಸಿತ್ತು. ಆನಂತರ ಮತ್ತೆ ಒಂದು ಗಂಟೆಗಳ ಕಾಲ ತಡವಾಗಿ ಆರಂಭಿಸಿ ಭಾರತೀಯ ಕಾಲಮಾನ ರಾತ್ರಿ 11 ಕ್ಕೆ ಪಂದ್ಯ ಶುರುವಾಗಿತ್ತು. ಆ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 5 ವಿಕೆಟ್‌ಗಳ ಅಂತರದಿಂದ ಜಯ ಗಳಿಸಿತ್ತು.

ಇಂದು ನಡೆಯಲಿರುವ ಎರಡನೇ ಪಂದ್ಯ ಸಹ ಒಂದೂವರೆ ಗಂಟೆ ತಡವಾಗಿ ಆರಂಭವಾಗಲಿದೆ. ಇದಕ್ಕೆ ಕಾರಣ ನಿನ್ನೆ ತಾನೇ ವಿಳಂಬವಾಗಿ ಆರಂಭವಾದ ಪಂದ್ಯ ಮುಗಿದಿರುವುದರಿಂದ ಆಟಗಾರರಿಗೆ ವಿಶ್ರಾಂತಿ ಅಗತ್ಯವಿದೆ ಎಂಬುದಾಗಿದೆ. ನಿನ್ನೆ ಪಂದ್ಯ ಸಮಯಕ್ಕೆ ಸರಿಯಾಗಿ ಆರಂಭಗೊಂಡಿದ್ದರೆ ಇಂದು ಸಹ ಸಮಯಕ್ಕೆ ಸರಿಯಾಗಿ ಆರಂಭಿಸಬಹುದಿತ್ತು. ಆದರೆ ನಿನ್ನೆ ತಡವಾದ ಕಾರಣ ಇಂದು ಸಹ ತಡವಾಗಿ ಆರಂಭವಾಗಿದೆ. ಎರಡು ದಿನಗಳಲ್ಲಿ ಸತತ ಎರಡು ಪಂದ್ಯಗಳು ನಡೆಯುತ್ತಿರುವುದರಿಂದ ಮದ್ಯ ಬಿಡುವು ಇಲ್ಲದಿರುವುದರಿಂದ ಈ ಸಮಸ್ಯೆ ತಲೆದೋರಿದೆ.

ನಾಲ್ಕನೇ ಮತ್ತು ಐದನೇ ಟಿ20 ಪಂದ್ಯಗಳು ಸಹ ಇದೇ ರೀತಿ ಆಗಸ್ಟ್ 6 ಮತ್ತು 7 ರಂದು ನಡೆಯಲಿವೆ. ಆಗಲೂ ಸಹ ಪಂದ್ಯ ತಡವಾಗಿ ಆರಂಭವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ; 2ಜಿ ಸ್ಪೆಕ್ಟ್ರಮ್ ಹಗರಣ ನಡೆದೇ ಇಲ್ಲ ಎಂಬುದನ್ನು ನಿರೂಪಿಸಿದ 5ಜಿ ಹರಾಜು ಪ್ರಕ್ರಿಯೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...