Homeಮುಖಪುಟಪೂರ್ವ ಲಡಾಖ್‌ಗೆ ಹೆಚ್ಚಿನ ಯುದ್ಧ ಪಡೆಗಳನ್ನು ನಿಯೋಜಿಸಿದ ಭಾರತ

ಪೂರ್ವ ಲಡಾಖ್‌ಗೆ ಹೆಚ್ಚಿನ ಯುದ್ಧ ಪಡೆಗಳನ್ನು ನಿಯೋಜಿಸಿದ ಭಾರತ

- Advertisement -
- Advertisement -

ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯ ಆಕ್ರಮಣಕಾರಿ ನೀತಿಯನ್ನು ಎದುರಿಸಲು ಭಾರತವು ಪೂರ್ವ ಲಡಾಖ್ ಗೆ ಹೆಚ್ಚಿನ ಯುದ್ಧ ಪಡೆಗಳನ್ನು ನಿಯೋಜಿಸಿದೆ. ಚೀನಾ ಸೇನೆಯ ನಿಯೋಜನೆಯ ಪ್ರಮಾಣ ಕೂಡಾ, ಈ ಕ್ರಮವು ಸ್ಥಳೀಯ ಮಿಲಿಟರಿ ಕಮಾಂಡರ್‌ಗಳಿಗೆ ಸೀಮಿತವಾಗಿಲ್ಲ ಬೀಜಿಂಗ್‌ನ ಅನುಮತಿಯನ್ನು ಹೊಂದಿದೆ ಎಂದು ಸೂಚಿಸುತ್ತದೆ ಎಂದು ಹಿಂದೂಸ್ತಾನ್‌ ಟೈಮ್ಸ್‌ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರು ಕರೆದ ಸಭೆಯ ನಂತರ ಸರ್ಕಾರಿ ಹಿರಿಯ ಅಧಿಕಾರಿಯೊಬ್ಬರು “ಆಸ್ಟ್ರೇಲಿಯಾದಿಂದ, ಹಾಂಕಾಂಗ್ ನಿಂದ, ತೈವಾನ್ ನಿಂದ, ದಕ್ಷಿಣ ಚೀನಾ ಸಮುದ್ರದಿಂದ ಭಾರತಕ್ಕೆ ಮತ್ತು ಅಮೆರಿಕವರೆಗೆ, ಜಗಳಗಂಟ ಚೀನಾವು ಎಲ್ಲಾ ರೀತಿಯಲ್ಲೂ ಪ್ರಾಬಲ್ಯಕ್ಕಾಗಿ ಜಗತ್ತನ್ನು ದಿಟ್ಟಿಸುತ್ತಿದೆ” ಹೇಳಿದ್ದಾರೆ. ಪ್ರಧಾನ ಮಂತ್ರಿ ಮೋದಿಯವರು ಮಂಗಳವಾರ ಪ್ರಸ್ತುತ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ಮೋದಿಯವರ ಕಾರ್ಯತಂತ್ರದ ಸಭೆಯಲ್ಲಿ ಮೂರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗವಹಿಸಿದ್ದರು. ಇದೇ ತಂಡ 2017 ರಲ್ಲಿ ಡೋಕ್ಲಾಮ್ ಬಿಕ್ಕಟ್ಟಿನಲ್ಲೂ ಕಾರ್ಯನಿರ್ವಹಿಸಿದ್ದರು. ಆಗ ಜನರಲ್ ಬಿಪಿನ್ ರಾವತ್ ಆಗ ಸೇನಾ ಮುಖ್ಯಸ್ಥರಾಗಿದ್ದರು ಮತ್ತು ಜೈ ಶಂಕರ್ ಭಾರತದ ವಿದೇಶಾಂಗ ಕಾರ್ಯದರ್ಶಿ ಆಗಿದ್ದರು.

ಮಂಗಳವಾರದ ಸಭೆಯ ಸಂದೇಶವು 2017 ರ ಡೋಕ್ಲಾಮ್ ನಿಲುವನ್ನು ಪ್ರತಿಬಿಂಬಿಸಿದೆ. ಸ್ಥಳದಲ್ಲಿ ಶಾಂತಿ ಮತ್ತು ನೆಮ್ಮದಿ ಸ್ಥಾಪಿಸಲು, ಪರಸ್ಪರ ಗೌರವ ಮತ್ತು ಸಂವಾದದ ಮೂಲಕ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿಯನ್ನು ತಣಿಸಲು ಭಾರತ ಒಲವು ತೋರುತ್ತಿದ್ದರೆ, ಪ್ರಧಾನಿ ಮೋದಿಯವರ ‘ಡೋಕ್ಲಾಮ್ ತಂಡ’ ಎಲ್ಲಾ ಘಟನೆಗಳಿಗೆ ಸಿದ್ಧವಾಗುವಂತೆ ತಿಳಿಸಿದೆ.

“ಡಾರ್ಬುಕ್-ಶ್ಯೋಕ್-ಡಿಬಿಒ ರಸ್ತೆ ಈ ವರ್ಷ ಪೂರ್ಣಗೊಳ್ಳಲಿದ್ದು, ಈ ಪ್ರದೇಶದಲ್ಲಿ ವೇಗವಾಗಿ ಭಾರತೀಯ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ರಸ್ತೆ ಯೋಜನೆಯನ್ನು ನಿರ್ಬಂಧಿಸಿದರೆ, ಭಾರತೀಯ ಸೇನೆಯು ವೈಮಾನಿಕ ಸರಬರಾಜು ಮಾರ್ಗಗಳಿಂದ ಹೊರಗುಳಿಯುಂತಾಗುತ್ತದೆ. ಹಿಮನದಿ ಸಾಸರ್ ಲಾ ಮೂಲಕ ಸಂಸೋಮಾದಿಂದ ಮುರ್ಗೊವನ್ನು ಡಿಬಿಒಗೆ ಸಂಪರ್ಕಿಸುವ ಪ್ರಯಾಸಕರ ಮಾರ್ಗಕ್ಕೆ ಸಿದ್ಧವಾಗಲಿದೆ ”ಎಂದು ಸರ್ಕಾರದ ರಾಷ್ಟ್ರೀಯ ಭದ್ರತಾ ಯೋಜಕರು ತಿಳಿಸಿದ್ದಾರೆ.

ಖಚಿತವಾಗಿ ಹೇಳುವುದಾದರೆ, ಕಳೆದ ಎರಡು ವರ್ಷಗಳಿಂದ ಪಾಂಗೊಂಗ್ ತ್ಸೋ, ಗಾಲ್ವಾನ್ ಮತ್ತು ಡೆಪ್ಸಾಂಗ್ ಬಯಲು ಪ್ರದೇಶಗಳಲ್ಲಿ ಭಾರತೀಯ ಸೇನೆ ಮತ್ತು ಚೀನಾ ಸೈನ್ಯದ ನಡುವೆ ಘರ್ಷಣೆ ಇದೆ. ಆದರೆ ಇಲ್ಲಿ ಮುನ್ನೆಚ್ಚರಿಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಓದಿ: ಚೀನಾಕ್ಕೆ ಸಮಬಲವಾಗಿ ಸೈನ್ಯ ನಿಯೋಜನೆ: ಚೀನಾ ಆಕ್ರಮಣಶೀಲತೆಯ ಬಗ್ಗೆ ಇಂದು ಕಮಾಂಡರ್ಸ್ ಸಮಾವೇಶದಲ್ಲಿ ಚರ್ಚೆ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ವಿವಾದಗಳನ್ನು ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬೇಕು. ಯುದ್ದ ವಿನಾಶಕಾರಿ.

LEAVE A REPLY

Please enter your comment!
Please enter your name here

- Advertisment -

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...

ಹಿರಿಯ ಕಾರ್ಮಿಕ ಮುಖಂಡ ಅನಂತ ಸುಬ್ಬರಾವ್ ನಿಧನ

ಕಳೆದ ನಾಲ್ಕು ದಶಕಗಳಿಂದ ಸಾರಿಗೆ ಕ್ಷೇತ್ರದ ಕಾರ್ಮಿಕರ ಪರವಾಗಿ ಧ್ವನಿ ಎತ್ತುತ್ತಿದ್ದ, ಕಾರ್ಮಿಕರ ಹಿತರಕ್ಷಣೆಗಾಗಿ ನಿರಂತರ ಹೋರಾಟ ನಡೆಸುತ್ತಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್‌.ವಿ ಅನಂತ ಸುಬ್ಬರಾವ್ ಅವರು ಜನವರಿ 28ರಂದು, ನಿಧನರಾಗಿದ್ದಾರೆ....

ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬದ ವಿರುದ್ಧ ಪುರಾವೆಗಳಿಲ್ಲ ಎಂದು ಹೇಳಿ ‘ಕ್ಲೀನ್ ಚೀಟ್’ ನೀಡಿ ‘ಬಿ’ ರಿಪೋರ್ಟ್ ಅನ್ನು ಸಲ್ಲಿಸಿತ್ತು....

ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

ಪಿಟಿಸಿಎಲ್‌ ಕಾಯ್ದೆ, 1978ರ 2023ರ ತಿದ್ದುಪಡಿ ಕಾಯ್ದೆಯ ವಿರೋಧಿಸಿ ಹಾಗೂ ಕಂದಾಯ ಇಲಾಖೆಯ ಎಸಿ, ಡಿಸಿ ನ್ಯಾಯಾಲಯಗಳು ಹಾಗೂ ಹೈಕೋರ್ಟ್, ಸುಪ್ರೀಂ ಕೋರ್ಟ್‌ಗಳಲ್ಲಿ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ...

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್‌ಗೆ ಜಾಮೀನು

ಪತ್ತನಂತಿಟ್ಟ: ಈ ತಿಂಗಳ ಆರಂಭದಲ್ಲಿ ಬಂಧಿಸಲ್ಪಟ್ಟ ಮೂರನೇ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರಿಗೆ ಕೇರಳ ನ್ಯಾಯಾಲಯ ಬುಧವಾರ ಜಾಮೀನು ನೀಡಿದೆ. ಶಾಸಕರು ಸಲ್ಲಿಸಿದ್ದ ಮೇಲ್ಮನವಿಯನ್ನು ಪರಿಗಣಿಸಿದ್ದ ಪತ್ತನಂತಿಟ್ಟ...