HomeಮುಖಪುಟINDIA vs ಭಾರತ: ಹೆಸರು ಬದಲಾವಣೆ ವಿರೋಧಿಸುವವರು ದೇಶ ಬಿಟ್ಟುಹೋಗಬಹುದು- ಬಿಜೆಪಿ ನಾಯಕ

INDIA vs ಭಾರತ: ಹೆಸರು ಬದಲಾವಣೆ ವಿರೋಧಿಸುವವರು ದೇಶ ಬಿಟ್ಟುಹೋಗಬಹುದು- ಬಿಜೆಪಿ ನಾಯಕ

- Advertisement -
- Advertisement -

”INDIAವನ್ನು ಭಾರತ ಎಂದು ಮರುನಾಮಕರಣ ಮಾಡಲಾಗುವುದು ಮತ್ತು ಕೋಲ್ಕತ್ತಾದಲ್ಲಿರುವ ವಿದೇಶಿಯರ ಪ್ರತಿಮೆಗಳನ್ನು ತೆಗೆದುಹಾಕಲಾಗುವುದು” ಎಂದು ಪಶ್ಚಿಮ ಬಂಗಾಳದ ಹಿರಿಯ ಬಿಜೆಪಿ ನಾಯಕ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ.

ಹೆಸರು ಬದಲಾವಣೆಯನ್ನು ವಿರೋಧಿಸುವವರು ದೇಶ ತೊರೆಯಬಹುದು ಎಂದು ದಿಲೀಪ್ ಘೋಷ್ ಹೇಳಿದ್ದಾರೆ.

ಮೇದಿನಿಪುರ ಕ್ಷೇತ್ರದ ಸಂಸದರಾಗಿರುವ ಘೋಷ್, ತಮ್ಮ ಕ್ಷೇತ್ರದ ವ್ಯಾಪ್ತಿಗೆ ಬರುವ ಖರಗ್‌ಪುರ ನಗರದಲ್ಲಿ ನಡೆದ ‘ಚಾಯ್ ಪೆ ಚರ್ಚಾ’ ಕಾರ್ಯಕ್ರಮದಲ್ಲಿ ಮಾತನಾಡಿದ್ದು, ”ಪಶ್ಚಿಮ ಬಂಗಾಳದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗ, ಕೋಲ್ಕತ್ತಾದಲ್ಲಿ ವಿದೇಶಿಯರ ಎಲ್ಲಾ ಪ್ರತಿಮೆಗಳನ್ನು ತೆಗೆದುಹಾಕುತ್ತೇವೆ” ಎಂದು ಹೇಳಿದರು.

”INDIAವನ್ನು ಭಾರತ್ ಎಂದು ಮರುನಾಮಕರಣ ಮಾಡಲಾಗುವುದು, ಅದನ್ನು ಇಷ್ಟಪಡದವರು ದೇಶವನ್ನು ತೊರೆಯಬಹುದು” ಎಂದು ಅವರು ಹೇಳಿದ್ದಾರೆ.

ರಾಜ್ಯದ ಮತ್ತೊಬ್ಬ ಹಿರಿಯ ಬಿಜೆಪಿ ನಾಯಕ ರಾಹುಲ್ ಸಿನ್ಹಾ ಮಾತನಾಡಿ, ”ಒಂದು ದೇಶಕ್ಕೆ ಎರಡು ಹೆಸರುಗಳು ಇರಬಾರದು ಮತ್ತು ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವ ನಾಯಕರು ನವದೆಹಲಿಯಲ್ಲಿ ಉಪಸ್ಥಿತರಿರುವುದರಿಂದ ಹೆಸರನ್ನು ಬದಲಾಯಿಸಲು ಇದು ಸರಿಯಾದ ಸಮಯ” ಎಂದು ಹೇಳಿದ್ದಾರೆ.

ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ತೃಣಮೂಲ ಕಾಂಗ್ರೆಸ್ ವಕ್ತಾರ ಸಂತಾನು ಸೇನ್, ”ಪ್ರತಿಪಕ್ಷಗಳ I.N.D.I.A ಮೈತ್ರಿಗೆ ಹೆದರಿ ಬಿಜೆಪಿ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಪ್ರಯತ್ನಿಸುತ್ತಿದೆ” ಎಂದಿದ್ದಾರೆ.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಭಾರತೀಯ ರಾಷ್ಟ್ರೀಯ ಅಭಿವೃದ್ಧಿ ಅಂತರ್ಗತ ಒಕ್ಕೂಟವನ್ನು (ಐಎನ್‌ಡಿಐಎ) ರಚಿಸಿವೆ.

ಇದನ್ನೂ ಓದಿ: ಉಪಚುನಾವಣೆ: NDAಗೆ ಮೊದಲ ಆಘಾತಕೊಟ್ಟ ಪ್ರತಿಪಕ್ಷಗಳ INDIA ಮೈತ್ರಿಕೂಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...