Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...