Homeಅಂತರಾಷ್ಟ್ರೀಯ2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

2024 ರಲ್ಲಿ ಭಾರತ ವಿಶ್ವದ ಎರಡನೇ ಅತಿದೊಡ್ಡ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರ: ವರದಿ

- Advertisement -
- Advertisement -

2024ರಲ್ಲಿ ವಿಶ್ವದ ಎರಡನೇ ಅತಿದೊಡ್ಡ ಪ್ರಮುಖ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತ ಹೊರಹೊಮ್ಕಿದೆ ಎಂದು ಸ್ಟಾಕ್‌ಹೋಮ್ ಇಂಟರ್ನ್ಯಾಷನಲ್ ಪೀಸ್ ರಿಸರ್ಚ್ ಇನ್‌ಸ್ಟಿಟ್ಯೂಟ್ (SIPRI)ನ ಹೊಸ ವರದಿ ಉಲ್ಲೇಖಿಸಿ ಎಂದು ಮಂಗಳವಾರ ದಿ ಪ್ರಿಂಟ್ ವರದಿ ಮಾಡಿದೆ. ಆ ವರ್ಷ ಜಾಗತಿಕವಾಗಿ ಆಮದಾಗಿದ್ದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ ಭಾರತವು 8.3%ದಷ್ಟು ಪಾಲನ್ನು ಹೊಂದಿತ್ತು ಎಂದು ವರದಿ ಉಲ್ಲೇಖಿಸಿದೆ. 2024 ರಲ್ಲಿ ಭಾರತ

2020 ಮತ್ತು 2024 ರ ನಡುವೆ ಜಾಗತಿಕವಾಗಿ ಆಮದಾದ ಒಟ್ಟು ಶಸ್ತ್ರಾಸ್ತ್ರಗಳಲ್ಲಿ 8.8% ದಷ್ಟು ಉಕ್ರೇನ್ ಆಮದು ಮಾಡಿದ್ದು, ಅಗ್ರ ಸ್ಥಾನವನ್ನು ಹೊಂದಿದೆ ಎಂದು ವರದಿ ಉಲ್ಲೇಖಿಸಿದೆ. 2022 ರ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್ ಮೇಲೆ ಪೂರ್ಣ ಪ್ರಮಾಣದ ಆಕ್ರಮಣ ನಡೆಸಿದ ನಂತರ 35 ಕ್ಕೂ ಹೆಚ್ಚು ದೇಶಗಳು ಉಕ್ರೇನ್‌ಗೆ ಶಸ್ತ್ರಾಸ್ತ್ರಗಳನ್ನು ಪೂರೈಸಿದ್ದವು. 2015 ಮತ್ತು 2019 ರ ನಡುವಿನ ಅವಧಿಗೆ ಹೋಲಿಸಿದರೆ ಉಕ್ರೇನ್‌ನ ಶಸ್ತ್ರಾಸ್ತ್ರ ಆಮದು ಸುಮಾರು ನೂರು ಪಟ್ಟು ಹೆಚ್ಚಾಗಿದೆ ಎಂದು ವರದಿ ಉಲ್ಲೇಖಿಸಿದೆ.

“ಉಕ್ರೇನ್‌ಗೆ ಸರಬರಾಜು ಮಾಡಲಾದ ಪ್ರಮುಖ ಶಸ್ತ್ರಾಸ್ತ್ರಗಳಲ್ಲಿ ಹೆಚ್ಚಿನವು ಅಮೆರಿಕ (45%), ನಂತರ ಜರ್ಮನಿ (12%) ಮತ್ತು ಪೋಲೆಂಡ್ (11%) ನಿಂದ ಬಂದವು. 2020–24 ರಲ್ಲಿ ಟಾಪ್ 10 ಆಮದುದಾರರ ಪಟ್ಟಿಯಲ್ಲಿ ಉಕ್ರೇನ್ ಏಕೈಕ ಯುರೋಪಿಯನ್ ರಾಜ್ಯವಾಗಿತ್ತು. ಆದಾಗ್ಯೂ ಇತರ ಹಲವು ಯುರೋಪಿಯನ್ ರಾಜ್ಯಗಳು ಈ ಅವಧಿಯಲ್ಲಿ ತಮ್ಮ ಶಸ್ತ್ರಾಸ್ತ್ರ ಆಮದುಗಳನ್ನು ಗಮನಾರ್ಹವಾಗಿ ಹೆಚ್ಚಿಸಿವೆ.” ಎಂದು ವರದಿ ಹೇಳಿದೆ.

2015-19 ಮತ್ತು 2020-24 ರ ನಡುವೆ ಭಾರತದ ಶಸ್ತ್ರಾಸ್ತ್ರ ಆಮದು ಶೇಖಡ 9.3 ರಷ್ಟು ಕಡಿಮೆಯಾಗಿದೆ, ಇದಕ್ಕೆ ಭಾಗಶಃ ಕಾರಣ ಭಾರತವು ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕಾ ಸಾಮರ್ಥ್ಯ ಹೆಚ್ಚುತ್ತಿರುವುದೇ ಆಗಿದೆ ಎಂದು ವರದಿ ಹೇಳಿದೆ.

“ಭಾರತ ಮತ್ತು ರಷ್ಯಾ ನಡುವಿನ ಸಂಬಂಧಗಳು ಸ್ನೇಹಪರವಾಗಿಯೇ ಉಳಿದಿವೆ ಎಂದು ಎರಡೂ ಕಡೆಯಿಂದ ಇತ್ತೀಚೆಗೆ ಸಾರ್ವಜನಿಕ ಘೋಷಣೆಗಳ ಹೊರತಾಗಿಯೂ, ಪ್ರಮುಖ ಶಸ್ತ್ರಾಸ್ತ್ರಗಳಿಗಾಗಿ ಭಾರತದ ಹೊಸ ಮತ್ತು ಯೋಜಿತ ಆದೇಶಗಳಲ್ಲಿಯೂ ಬದಲಾವಣೆ ಗೋಚರಿಸುತ್ತಿದೆ. ಅವುಗಳಲ್ಲಿ ಹೆಚ್ಚಿನವು ಪಾಶ್ಚಿಮಾತ್ಯ ಪೂರೈಕೆದಾರರಿಂದ ಬರುತ್ತವೆ” ಎಂದು SIPRI ವರದಿ ಹೇಳಿದೆ.

ಈಗಲೂ ರಷ್ಯಾ ಭಾರತದ ಅತಿದೊಡ್ಡ ಶಸ್ತ್ರಾಸ್ತ್ರ ಪೂರೈಕೆದಾರರಾಗಿ ಉಳಿದಿದೆ. ಆದರೆ ಭಾರತೀಯ ಶಸ್ತ್ರಾಸ್ತ್ರ ರಫ್ತಿನಲ್ಲಿ ಅದರ ಪಾಲು 2020-24 ರಲ್ಲಿ 36-38% ಕ್ಕೆ ಇಳಿದಿದೆ. ಇದು 2015-19 ರಲ್ಲಿ 55% ಮತ್ತು 2010-14 ರಲ್ಲಿ 72% ರಿಂದ ಕಡಿಮೆಯಾಗಿದೆ ಎಂದು ವರದಿ ಹೇಳಿದೆ. 2024 ರಲ್ಲಿ ಭಾರತ

ಭಾರತವು ಫ್ರಾನ್ಸ್, ಇಸ್ರೇಲ್ ಮತ್ತು ಯುನೈಟೆಡ್ ಸ್ಟೇಟ್ಸ್ ಕಡೆಗೆ ಗಮನ ಹರಿಸಿದ್ದರಿಂದ 2015-19 ಮತ್ತು 2020-24 ರ ನಡುವೆ ಭಾರತದ ರಷ್ಯಾದ ಮೇಲಿನ ಅವಲಂಬನೆ 64% ರಷ್ಟು ಕಡಿಮೆಯಾಗಿದೆ ಎಂದು SIPRI ಹೇಳಿದೆ. ದಕ್ಷಿಣ ಕೊರಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ಭಾರತವು ಮೂರನೇ ಅತಿದೊಡ್ಡ ಆಮದುದಾರ ರಾಷ್ಟ್ರವಾಗಿದ್ದು, ಕ್ರಮವಾಗಿ 7% ಮತ್ತು 11% ಪಾಲನ್ನು ಹೊಂದಿದೆ.

ಫ್ರಾನ್ಸ್ ಮತ್ತು ಇಸ್ರೇಲ್‌ನಿಂದ ಶಸ್ತ್ರಾಸ್ತ್ರ ಖರೀದಿಸುತ್ತಿರುವ ಅಗ್ರ ಶಸ್ತ್ರಾಸ್ತ್ರ ಆಮದುದಾರ ರಾಷ್ಟ್ರವಾಗಿ ಭಾರತವು ಇದ್ದು, ಅವುಗಳ ರಫ್ತಿನಲ್ಲಿ ಕ್ರಮವಾಗಿ 28% ಮತ್ತು 34% ರಷ್ಟಿದೆ. 2015-19 ಮತ್ತು 2020-24 ರ ನಡುವೆ ಫ್ರಾನ್ಸ್‌ನಿಂದ ಭಾರತದ ಶಸ್ತ್ರಾಸ್ತ್ರ ಆಮದು 11% ರಷ್ಟು ಹೆಚ್ಚಾಗಿದ್ದು, ಆದರೆ ಇಸ್ರೇಲ್‌ನಿಂದ ಆಮದು 2% ರಷ್ಟು ಕಡಿಮೆಯಾಗಿದೆ. ಆದಾಗ್ಯೂ, ಭಾರತವು ಅಮೆರಿಕದ ಅಗ್ರ ಮೂರು ಆಮದುದಾರರಲ್ಲಿ ಇರಲಿಲ್ಲ.

ಭಾರತವು ಫ್ರಾನ್ಸ್‌ನೊಂದಿಗೆ 36 ರಫೇಲ್ ಫೈಟರ್ ಜೆಟ್‌ಗಳು ಮತ್ತು ಆರು ಸ್ಕಾರ್ಪೀನ್-ಕ್ಲಾಸ್ ಸಾಂಪ್ರದಾಯಿಕ ಜಲಾಂತರ್ಗಾಮಿ ನೌಕೆಗಳ ಪ್ರಮುಖ ರಕ್ಷಣಾ ಒಪ್ಪಂದಗಳಿಗೆ ಸಹಿ ಹಾಕಿದೆ. ಜೊತೆಗೆ 26 ರಫೇಲ್-ಎಂ ಜೆಟ್‌ಗಳು ಮತ್ತು ಇನ್ನೂ ಮೂರು ಜಲಾಂತರ್ಗಾಮಿ ನೌಕೆಗಳ ಒಪ್ಪಂದಗಳನ್ನು ಅಂತಿಮಗೊಳಿಸಲು ಸಿದ್ಧವಾಗಿದೆ.

1990-94ರ ನಂತರ ಚೀನಾ ಮೊದಲ ಬಾರಿಗೆ ಟಾಪ್ 10 ಶಸ್ತ್ರಾಸ್ತ್ರ ಆಮದುದಾರರ ಪಟ್ಟಿಯಿಂದ ಹೊರಗುಳಿದಿದೆ. ಇದು ಅದರ ವಿಸ್ತರಿಸುತ್ತಿರುವ ದೇಶೀಯ ರಕ್ಷಣಾ ಉದ್ಯಮವನ್ನು ಪ್ರತಿಬಿಂಬಿಸುತ್ತದೆ ಎಂದು ದಿ ಹಿಂದೂ ವರದಿ ಮಾಡಿದೆ. ವಿಶ್ವದ 10 ಅತಿದೊಡ್ಡ ಆಮದುದಾರರಲ್ಲಿ ನಾಲ್ಕು ಏಷ್ಯಾ ಮತ್ತು ಓಷಿಯಾನಿಯಾದಲ್ಲಿವೆ: ಭಾರತ, ಪಾಕಿಸ್ತಾನ, ಜಪಾನ್ ಮತ್ತು ಆಸ್ಟ್ರೇಲಿಯಾ. ಜಾಗತಿಕ ಶಸ್ತ್ರಾಸ್ತ್ರ ಆಮದುಗಳಲ್ಲಿ ಈ ಪ್ರದೇಶವು ಶೇ. 33 ರಷ್ಟು ಪಾಲನ್ನು ಹೊಂದಿದ್ದರೆ, ಯುರೋಪ್ (28%), ಪಶ್ಚಿಮ ಏಷ್ಯಾ (27%), ಅಮೆರಿಕ (6.2%) ಮತ್ತು ಆಫ್ರಿಕಾ (4.5%) ನಂತರದ ಸ್ಥಾನದಲ್ಲಿವೆ.

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ: ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ಧರ್ಮೇಂದ್ರ ಪ್ರಧಾನ್ ವಿರುದ್ಧ ಹಕ್ಕು ಚ್ಯುತಿ ನೋಟಿಸ್ ಸಲ್ಲಿಸಿದ ಸಂಸದೆ ಕನಿಮೋಳಿ : ಸಂಸತ್ ಹೊರಗೆ ಡಿಎಂಕೆ ಸಂಸದರಿಂದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...